ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಆದಿಚುಂಚನಗಿರಿ ಮಠಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡುತ್ತಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಭರ್ಜರಿ ಸಿದ್ಧತೆಗಳು ಪೂರ್ಣಗೊಂಡಿವೆ. ಇದು ಪ್ರಧಾನಿಯಾದ ಬಳಿಕ ಮೋದಿ ಅವರು ಈ ಪುಣ್ಯಕ್ಷೇತ್ರಕ್ಕೆ ನೀಡುತ್ತಿರುವ ಮೊದಲ ಭೇಟಿಯಾಗಿದೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಭಕ್ತರು ಹಾಗೂ ಸಾರ್ವಜನಿಕರು ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಮಠಕ್ಕೆ ಆಗಮಿಸುವ ನಿರೀಕ್ಷೆಯಿದೆ.

ಪ್ರಧಾನಮಂತ್ರಿಗಳು ಈ ಸಂದರ್ಭದಲ್ಲಿ 80 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ 'ಶ್ರೀ ಗುರು ಭೈರವೈಕ್ಯ ಮಂದಿರ'ವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಮತ್ತೊಂದು ವಿಶೇಷವೆಂದರೆ, ಪಕ್ಷಾತೀತವಾಗಿ ನಾಯಕರು ಪ್ರಧಾನಿಗಳನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ಮಂಡ್ಯದ ರಾಜಕೀಯ ವಲಯದಲ್ಲಿ ಸಕ್ರಿಯವಾಗಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಜಿಲ್ಲೆಯಾದ್ಯಂತ ಸ್ವಾಗತ ಕೋರುವ ಫ್ಲೆಕ್ಸ್‌ಗಳನ್ನು ಅಳವಡಿಸಿದ್ದಾರೆ.

Narendra Modi

1,700ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

ಭದ್ರತೆಯ ದೃಷ್ಟಿಯಿಂದ ಇಡೀ ಆದಿಚುಂಚನಗಿರಿ ಕ್ಷೇತ್ರವು ಈಗ ಪೊಲೀಸ್ ಕಣ್ಗಾವಲಿನಲ್ಲಿದೆ. ಒಟ್ಟು 1,700ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಇದರಲ್ಲಿ 6 ಎಸ್ಪಿಗಳು, 8 ಎಎಸ್ಪಿಗಳು, 18 ಡಿವೈಎಸ್‌ಪಿಗಳು ಮತ್ತು 53 ಇನ್ಸ್‌ಪೆಕ್ಟರ್‌ಗಳು ಸೇರಿದ್ದಾರೆ. ಎಸ್‌ಪಿಜಿ (SPG) ತಂಡವು ಈಗಾಗಲೇ ಭದ್ರತೆಯ ಸಂಪೂರ್ಣ ಉಸ್ತುವಾರಿ ವಹಿಸಿಕೊಂಡಿದ್ದು, ಸುರಕ್ಷತೆಯ ಕಾರಣಕ್ಕಾಗಿ ಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನಿಗದಿತ ಕಾರ್ಯಕ್ರಮದಂತೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಮಠಕ್ಕೆ ತಲುಪಿದ ಕೂಡಲೇ ಅವರು ಮೊದಲು ಸಿದ್ದಪುರುಷ ಗುರು ಗೋರಖನಾಥರು ತಪಸ್ಸು ಮಾಡಿದ್ದ ಪವಿತ್ರ ನೆಲೆಯಾದ ಉರಿಗದ್ದುಗೆಗೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ.

ತದನಂತರ ಕ್ಷೇತ್ರದ ಆರಾಧ್ಯ ದೈವ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಮಂಗಳಾರತಿ ಸಲ್ಲಿಸಿ, ನೂತನವಾಗಿ ನಿರ್ಮಿಸಲಾಗಿರುವ 'ಶ್ರೀ ಗುರು ಭೈರವೈಕ್ಯ ಮೂಲಮಂದಿರ'ದಲ್ಲಿ ಪೂಜೆ ನೆರವೇರಿಸುವ ಮೂಲಕ ದೇವಾಲಯವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಧಾರ್ಮಿಕ ವಿಧಿವಿಧಾನಗಳ ಬಳಿಕ ನಡೆಯಲಿರುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

Narendra Modi

ಪ್ರಧಾನಿಗೆ ಮೈಸೂರು ಪೇಟ

ಆದಿಚುಂಚನಗಿರಿ ಕ್ಷೇತ್ರವು 'ಮಯೂರವನ' ಎಂದೇ ಪ್ರಖ್ಯಾತಿ ಪಡೆದಿರುವ ಹಿನ್ನೆಲೆಯಲ್ಲಿ, ಮಠದ ವತಿಯಿಂದ ಪ್ರಧಾನಿಗಳಿಗೆ ನವಿಲಿಗೆ ಸಂಬಂಧಿಸಿದ ವಿಶೇಷ ಸ್ಮರಣಿಕೆಯನ್ನು ನೀಡಿ ಗೌರವಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರೊಂದಿಗೆ ಮೈಸೂರು ಸಂಸ್ಥಾನದ ಒಡೆಯರು ಧರಿಸುತ್ತಿದ್ದ ಸಾಂಪ್ರದಾಯಿಕ ಶೈಲಿಯ ಭವ್ಯವಾದ ಕೆಂಪು ಪೇಟವನ್ನು ಪ್ರಧಾನಿಗಳಿಗೆ ತೊಡಿಸಿ ಸನ್ಮಾನಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಈ ಐತಿಹಾಸಿಕ ಮಂದಿರದ ಉದ್ಘಾಟನೆ ವೇಳೆ ಮೈಸೂರು ಸಂಸ್ಕೃತಿಯ ಪ್ರತೀಕವಾದ ಈ ಪೇಟವನ್ನು ಧರಿಸಲಿರುವುದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+