ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾರಿ- ಕಾರು ಮುಖಾಮುಖಿ ಡಿಕ್ಕಿ: ನರಗುಂದ ಶ್ರೀ ಸಾವು

By Ananthanag
|
Google Oneindia Kannada News

ವಿಜಯಪುರ, ಡಿಸೆಂಬರ್ 24: ವಿಜಯಪುರ ತಾಲ್ಲೂಕಿನ ಕಾರಜೋಳ ಕ್ರಾಸ್ ಬಳಿ ಕಾರು-ಲಾರಿ ಅಪಘಾತದಲ್ಲಿ ಗದಗ ಜಿಲ್ಲೆಯ ನರಗುಂದ ವಿರಕ್ತ ಮಠದ ಚನ್ನ ಬಸವ ಸ್ವಾಮೀಜಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಜರುಗಿದೆ.[ಕಾಶೀಮಠ ಸಂಸ್ಥಾನದ ಪೀಠಾಧಿಪತಿ ಸುಧೀಂದ್ರತೀರ್ಥ ಸ್ವಾಮೀಜಿ ವಿಧಿವಶ]

ಕಾರಜೋಳ ಕ್ರಾಸ್ ಬಳಿ ಕಾರು - ಲಾರಿ ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಚನ್ನಬಸವ ಸ್ವಾಮೀಜಿ (36) ಸ್ಥಳದಲ್ಲಿಯೇ ಮೃತರಾದರು. ಅವರು ಮಹಾರಾಷ್ಟ್ರದ ಅಕ್ಕಲಕೋಟದಲ್ಲಿ ಧಾರ್ಮಿಕ ಕಾರ್ಯಕ್ರಮ ಮುಗಿಸಿಕೊಂಡು ನರಗುಂದಕ್ಕೆ ಮರಳುತ್ತಿದ್ದಾಗ, ಈ ದುರಂತ ಜರುಗಿದೆ. ವಾಹನವನ್ನು ಅವರೇ ಚಲಾಯಿಸುತ್ತಿದ್ದು ಕಾರಿನಲ್ಲಿ ಇಬ್ಬರೇ ಪ್ರಯಾಣಿಕರಿದ್ದರು. ಇನ್ನು ಲಾರಿಯಾತನ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ.[ಬೀದರ್ ಚೌಳಿ ಮಠದ ಮತ್ತೊಬ್ಬ ಸ್ವಾಮೀಜಿ ಸಾವು]

Nargunda Chenna Basava Swamiji killed by Lari-car accident

ಮೂಲತಃ ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ನಾವದಗಿ ಗ್ರಾಮದವರಾದ ಸ್ವಾಮೀಜಿ, ಮಹಾದಾಯಿ ಯೋಜನೆ ಜಾರಿಗಾಗಿ ನಡೆದ ಹೋರಾಟದಲ್ಲಿಯೂ ಪಾಲ್ಗೊಂಡಿದ್ದರು. ಗುರು, ಲಿಂಗ, ಜಂಗಮತ್ವಕ್ಕಾಗಿ ಜಿಲ್ಲೆ ಮತ್ತು ರಾಜ್ಯದಲ್ಲಿ ಅನೇಕ ಧಾರ್ಮಿಕ ಕಾರ್ಯಗಳನ್ನು ನೇರವೇರಿಸಿದ್ದರು.

English summary
Nargunda Chenna Basava Swamiji killed by Lari-car accident in Karajola cross in Vijayapur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X