ಪಿಯು ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ
ಬೆಂಗಳೂರು, ಏ. 29 : ಇನ್ನುಮುಂದೆ ಶಾಲೆಗಳ ಜೊತೆ ಪಿಯು ಕಾಲೇಜುಗಳಲ್ಲಿಯೂ ಕಡ್ಡಾಯವಾಗಿ ರಾಷ್ಟ್ರಗೀತೆಯನ್ನು ಹಾಡಬೇಕಾಗಿದೆ. ಸರ್ಕಾರಿ ಮತ್ತು ಖಾಸಗಿ ಪಿಯು ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಪ್ರತಿದಿನ ವಿದ್ಯಾರ್ಥಿಗಳು ಸಾಮೂಹಿಕವಾಗಿ ರಾಷ್ಟ್ರಗೀತೆಯನ್ನು ಹಾಡಿ ನಂತರ ತರಗತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಏ.27ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸದ್ಯ, ಕಾಲೇಜುಗಳಿಗೆ ಬೇಸಿಗೆ ರಜೆ ಇದ್ದು, ಜೂನ್ನಲ್ಲಿ ಶೈಕ್ಷಣಿಕ ವರ್ಷ ಆರಂಭವಾದ ಬಳಿಕ ಈ ಆದೇಶ ಜಾರಿಗೆ ಬರಲಿದೆ. [ರಾಷ್ಟ್ರಗೀತೆ ವೇಳೆ ವೇದಿಕೆ ಬಿಟ್ಟಿಳಿದ ರಾಜ್ಯಪಾಲರು]

ಇದುವರೆಗೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಾಗಿತ್ತು. ಈ ಆದೇಶದ ಪ್ರಕಾರ ಪದವಿ ಪೂರ್ವ ಕಾಲೇಜುಗಳಲ್ಲಿಯೂ ರಾಷ್ಟ್ರಗೀತೆ ಹಾಡಬೇಕಾಗಿದೆ. ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಗೆ ಈ ಆದೇಶ ಅನ್ವಯವಾಗಲಿದೆ. [ಈ ಮೇಕೆಯನ್ನಾದರೂ ನೋಡಿ ಬುದ್ಧಿ ಕಲೀರೋ!]
ಶಾಲೆ ಮತ್ತು ಕಾಲೇಜುಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಎಂದು ಕೋಲ್ಕೊತಾ ಹೈಕೋರ್ಟ್ 2014ರಲ್ಲಿ ತೀರ್ಪು ನೀಡಿತ್ತು. ಇದರ ಅನ್ವಯ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ 2015ರ ಜ.5ರಂದು ಸೂಚನೆ ರವಾನಿಸಿತ್ತು. ಈ ಸೂಚನೆ ಅನ್ವಯ ಆದೇಶವನ್ನು ಜಾರಿಗೊಳಿಸಲಾಗಿದೆ. [ಎಸ್ಸೆಸ್ಸೆಲ್ಸಿ, ಪಿಯೂ ಫಲಿತಾಂಶ ದಿನಾಂಕ ದೇವರಿಗ್ಗೊತ್ತು]
ರಾಷ್ಟ್ರಗೀತೆ ಕುರಿತು : ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಬರೆದ ಗೀತೆಯನ್ನು 1950ರಲ್ಲಿ ರಾಷ್ಟ್ರಗೀತೆ ಎಂದು ಸರ್ಕಾರ ಘೋಷಿಸಿತು. 52 ಸೆಕೆಂಡುಗಳಿಗೆ ಮೀರದಂತೆ ರಾಷ್ಟ್ರಗೀತೆಯನ್ನು ಹಾಡಿ ಮುಗಿಸಬೇಕಾಗಿದೆ. ರಾಷ್ಟ್ರಗೀತೆ ಹಾಡುವಾಗ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಬೇಕು. ಹಾಡುವುದಕ್ಕೆ ಅಡ್ಡಿಪಡಿಸುವುದನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಲಾಗುತ್ತದೆ. [ಹೆಚ್ಚಿನ ಓದಿಗೆ]
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications