ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಕ್ಕೆ ಬರುತ್ತಿದ್ದಾರೆ ಬಿಜೆಪಿ ರಾಷ್ಟ್ರನಾಯಕರು, ಚುರುಕಾಗಲಿದೆ ರಾಜಕೀಯ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 18: ಬಿಜೆಪಿ ರಾಷ್ಟ್ರನಾಯಕರು ಕೆಲವರು ಇಂದು ಸಂಜೆ ವೇಳೆಗೆ ನಗರಕ್ಕೆ ಬರಲಿದ್ದು, ಮಹತ್ತರವಾದ ರಾಜಕೀಯ ಘಟನೆಯೊಂದು ಘಟಿಸುವ ಮುನ್ಸೂಚನೆ ದೊರೆತಂತಾಗಿದೆ.

ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಬೆಂಗಳೂರಿಗೆ ಇಂದು ಸಂಜೆ ಆಗಮಿಸಲಿದ್ದು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಅವರು ಇಲ್ಲಿಗೆ ಬರುತ್ತಿದ್ದಾರೆ ಎನ್ನಲಾಗಿದೆ.

ಬಿಜೆಪಿಯಿಂದ ಡಿಸಿಎಂ ಆಫರ್, ಜಾರಕಿಹೊಳಿ ಸಿಡಿಸಿದ ಹೊಸ ಬಾಂಬ್!ಬಿಜೆಪಿಯಿಂದ ಡಿಸಿಎಂ ಆಫರ್, ಜಾರಕಿಹೊಳಿ ಸಿಡಿಸಿದ ಹೊಸ ಬಾಂಬ್!

ರಾಜ್ಯದಲ್ಲಿ ನಡೆಯುತ್ತಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಬಗ್ಗೆ ಅವಲೋಕನ ನಡೆಸಲು ರಾಷ್ಟ್ರ ನಾಯಕರು ನಗರಕ್ಕೆ ಬರುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಮುರಳಿಧರ ರಾವ್ ಹಾಗೂ ಜಾವಡ್ಕೇರ್ ಆಗಮನದಿಂದಾಗಿ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ.

ಶಾಸಕರನ್ನು ಸ್ವಾಗತಿಸಲು ಬಂದರೇ?

ಶಾಸಕರನ್ನು ಸ್ವಾಗತಿಸಲು ಬಂದರೇ?

ಮುರಳಿಧರ ರಾವ್ ಅವರು ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದಾಗ ಕೆಲವು ಶಾಸಕರನ್ನು ಬಿಜೆಪಿಯತ್ತ ಸೆಳೆಯಲು ಯತ್ನಿಸಿದ್ದರು. ಬಿ.ಸಿ.ಪಾಟೀಲ್ ಸೇರಿದಂತೆ ಕೆಲವು ಶಾಸಕರೊಡನೆ ಮುರಳಿಧರ ರಾವ್ ಅವರು ಮಾತನಾಡಿದ್ದರು. ಹಾಗಾಗಿ ಈಗ ಮತ್ತೆ ಮುರಳಿಧರ ರಾವ್ ಅವರು ಇದೇ ಕಾರಣಕ್ಕೆ ರಾಜ್ಯಕ್ಕೆ ಬರುತ್ತಿದ್ದಾರೆ ಎಂಬ ಅನುಮಾನವಿದೆ.

ಕಾಂಗ್ರೆಸ್ ಶಾಸಕರ ಬಂಡಾಯಕ್ಕೆ ಬಿಜೆಪಿ ಕುಮ್ಮಕ್ಕು: ವಿಶ್ವನಾಥ್ ವಾಗ್ದಾಳಿ ಕಾಂಗ್ರೆಸ್ ಶಾಸಕರ ಬಂಡಾಯಕ್ಕೆ ಬಿಜೆಪಿ ಕುಮ್ಮಕ್ಕು: ವಿಶ್ವನಾಥ್ ವಾಗ್ದಾಳಿ

ಶಾಸಕರನ್ನು ಬರಮಾಡಿಕೊಳ್ಳಲು ಬರುತ್ತಿದ್ದಾರಾ?

ಶಾಸಕರನ್ನು ಬರಮಾಡಿಕೊಳ್ಳಲು ಬರುತ್ತಿದ್ದಾರಾ?

ಕೆಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಸೆಪ್ಟೆಂಬರ್ 18ರಂದು ಬಿಜೆಪಿಗೆ ಬರಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಪಕ್ಷಾಂತರಿ ಶಾಸಕರನ್ನು ತಮ್ಮ ಪಕ್ಷಕ್ಕೆ ಕರೆದುಕೊಳ್ಳಲು ಈ ಇಬ್ಬರು ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದಾರೆಯೇ ಎಂಬ ಅನುಮಾನವೂ ಇದೆ.

ಹೊಸಕೋಟೆಯಲ್ಲಿ ಘರ್ಜಿಸಿದ ಕಾಂಗ್ರೆಸ್ ಶಾಸಕ: ರಾಜ್ಯ ರಾಜಕೀಯ ಅಯೋಮಯಹೊಸಕೋಟೆಯಲ್ಲಿ ಘರ್ಜಿಸಿದ ಕಾಂಗ್ರೆಸ್ ಶಾಸಕ: ರಾಜ್ಯ ರಾಜಕೀಯ ಅಯೋಮಯ

ನಾಳೆ ಕಾಂಗ್ರೆಸ್ ಶಾಸಕರ ಪತ್ರಿಕಾಗೋಷ್ಠಿ

ನಾಳೆ ಕಾಂಗ್ರೆಸ್ ಶಾಸಕರ ಪತ್ರಿಕಾಗೋಷ್ಠಿ

ನಾಳೆ (ಸೆಪ್ಟೆಂಬರ್ 19)ರಂದು ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜು ಅವರು ಪತ್ರಿಕಾಗೋಷ್ಠಿ ಕರೆದಿದ್ದಾರೆ. ಮಹತ್ವದ ನಿರ್ಣಯದ ಬಗ್ಗೆ ನಾಳೆ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ. ಅವರ ಜೊತೆ ಇನ್ನೂ ಕೆಲವು ಕಾಂಗ್ರೆಸ್ ಶಾಸಕರು ಸೇರಿಕೊಳ್ಳಲಿದ್ದಾರೆ. ಈಗಾಗಲೇ ಅವರು ಬಿಜೆಪಿ ಜೊತೆ ಮಾತುಕತೆ ಆಡಿದ್ದು ನಾಳೆ ಪಕ್ಷ ಬಿಡುವ ನಿರ್ಣಯ ಪ್ರಕಟಿಸಲಿದ್ದಾರೆ ಎಂಬ ಸುದ್ದಿಯೂ ಇದೆ. ರಾಷ್ಟ್ರ ನಾಯಕರು ಬಿಜೆಪಿಗೆ ಬಂದಿರುವುದು ಇದಕ್ಕೆ ಪುಷ್ಠಿ ನೀಡಿದೆ.

ಸೆಪ್ಟೆಂಬರ್‌ 25ರಂದು ಅಮಿತ್ ಶಾ

ಸೆಪ್ಟೆಂಬರ್‌ 25ರಂದು ಅಮಿತ್ ಶಾ

ಸೆಪ್ಟೆಂಬರ್ 25ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರಿಗೆ ಬರಲಿದ್ದಾರೆ. ಅಂದು ರಾಜ್ಯ ರಾಜಕಾರಣ ಒಂದು ಮಗ್ಗುಲು ಬದಲಿಸಲಿದೆ ಎನ್ನಲಾಗಿದೆ. ಅಂದಿಗೆ ವೇದಿಕೆ ಸಜ್ಜುಗೊಳಿಸಲು ಪ್ರಕಾಶ್ ಜಾವಡೇಕರ್, ಮುರಳೀಧರ ರಾವ್ ಅವರು ಇಂದು ಬಂದಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಜತೆ ಮಹತ್ವದ ಚರ್ಚೆ

ಯಡಿಯೂರಪ್ಪ ಜತೆ ಮಹತ್ವದ ಚರ್ಚೆ

ಬಿಜೆಪಿಗೆ ಬರುವ ಶಾಸಕರ ಪಟ್ಟಿಯನ್ನು ಮೊನ್ನೆಯೇ ಯಡಿಯೂರಪ್ಪ ಅವರು ಹೈಕಮಾಂಡ್‌ಗೆ ಕಳುಹಿಸಿದ್ದರು ಎಂಬ ಗುಸು-ಗುಸು ಇತ್ತು. ಅದರ ಬಗ್ಗೆ ವಿಸ್ತೃತ ಚರ್ಚೆಗೆಂದು ಈ ಇಬ್ಬರು ನಾಯಕರು ರಾಜ್ಯಕ್ಕೆ ಬಂದಿದ್ದಾರೆ. ಬಂದ ಕೂಡಲೇ ಯಡಿಯೂರಪ್ಪ ಅವರ ಜೊತೆ ಮಹತ್ವದ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.

English summary
National BJP leaders Muralidhar Rao and Prakash Javadekar coming to Bengaluru today. Both leaders visit created curiosity. State politics taking new turns every day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X