‘ಬಿಜೆಪಿ ಸರ್ವಾಧಿಕಾರಿ ಧೋರಣೆ ಖಂಡಿಸಿ ದೇಶಾದ್ಯಂತ ಉಪವಾಸ ಸತ್ಯಾಗ್ರಹ’
ಬೆಂಗಳೂರು, ಏಪ್ರಿಲ್ 04: ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಏಪ್ರಿಲ್ 7ರಂದು ದೇಶಾದ್ಯಂತ ಆಮ್ ಆದ್ಮಿ ಪಾರ್ಟಿಯಿಂದ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ. ನಗರದ ಫ್ರೀಡಂ ಪಾರ್ಕ್ನಲ್ಲಿ ಕೂಡ ಎಎಪಿ ನಾಯಕರು, ಕಾರ್ಯಕರ್ತರು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ತಿಳಿಸಿದರು.
ಬೆಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಕೂಡ ಆಮ್ ಆದ್ಮಿ ಪಾರ್ಟಿಯ ನಾಯಕರು, ಕಾರ್ಯಕರ್ತರು ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದಾರೆ. ನರೇಂದ್ರ ಮೋದಿ ಸರ್ಕಾರವನ್ನು ನಮ್ಮ ರಾಷ್ಟ್ರದಿಂದ ತೊಲಗಿಸುವ ಸಲುವಾಗಿ ಎಲ್ಲಾ ಭಾರತೀಯರು ಒಂದಾಗುತ್ತಿದ್ದಾರೆ ಎಂದರು.

ತೆರಿಗೆದಾರರ ಹಣವನ್ನು ಖರ್ಚು ಮಾಡುವ ವಿಚಾರದಲ್ಲಿ ಎಎಪಿ ಸರ್ಕಾರ ದೇಶಕ್ಕೆ ಮಾದರಿಯಾಗಿದೆ. ಉಚಿತ ನೀರು, ವಿದ್ಯುತ್, ಶಿಕ್ಷಣ, ಆರೋಗ್ಯ ಸೇವೆ ನೀಡುವ ಮೂಲಕ ದೆಹಲಿ ಮತ್ತು ಪಂಜಾಬ್ನಲ್ಲಿ ಕ್ರಾಂತಿ ಮಾಡಲಾಗುತ್ತಿದೆ. ಇದನ್ನು ಸಹಿಸದ ಬಿಜೆಪಿ ಸರ್ಕಾರ ಆಮ್ ಆದ್ಮಿ ಪಾರ್ಟಿ ನಾಯಕರನ್ನು ಬಂಧಿಸುವ ಮೂಲಕ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಜಗದೀಶಿ ಸದಂ ಕಿಡಿಕಾರಿದರು.
ಭ್ರಷ್ಟಾಚಾರದ ವಿರುದ್ಧ ಹೋರಾಡಿದ್ದ, ದೇಶಾದ್ಯಂತ ಲೋಕಪಾಲ ಬಿಲ್ ಜಾರಿಗೆ ತರಲು ಹೋರಾಡುತ್ತಿರುವ ಅರವಿಂದ್ ಕೇಜ್ರಿವಾಲ್ ಅವರನ್ನೇ ಭ್ರಷ್ಟಾಚಾರಿ ಎಂದು ಬಿಂಬಿಸಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಅವರ ಪತ್ನಿ ಸುನೀತಾ ಅವರು ಕೂಡ ಆದಾಯ ತೆರಿಗೆ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಅವರನ್ನು ಭ್ರಷ್ಟಾಚಾರಿಗಳು ಎಂದು ಬಿಂಬಿಸಲು ಹೊರಟ ಬಿಜೆಪಿಗೆ ಜನತಾ ನ್ಯಾಯಾಲಯದಲ್ಲಿ ಪಾಠ ಕಲಿಸಬೇಕಿದೆ. ಅರವಿಂದ ಕೇಜ್ರಿವಾಲ್ ವಿರುದ್ಧ ಸುಳ್ಳು ಪ್ರಕರಣವನ್ನು ದಾಖಲಿಸಿ ಬಂಧಿಸಲಾಗಿದೆ. ಅರಬಿಂದೋ ಫಾರ್ಮಾ ಸಂಸ್ಥೆಯ ಮಾಲಿಕ ಶರತ್ ಚಂದ್ರ ತಾವೇ ₹56 ಕೋಟಿಗಳನ್ನು ಚುನಾವಣಾ ಬಾಂಡ್ ಮೂಲಕ ಬಿಜೆಪಿ ಪಕ್ಷಕ್ಕೆ ನೀಡಿರುವುದು ಜಗಜ್ಜಾಹೀರಾಗಿದೆ. ಬಿಜೆಪಿ ವಸೂಲಿ ಪಕ್ಷ ಎಂದು ಇದರಿಂದಲೇ ಗೊತ್ತಾಗುತ್ತದೆ ಎಂದರು.
ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ಮಾತನಾಡಿ, ಸಂಜಯ್ ಸಿಂಗ್ ಬಿಡುಗಡೆಯಾಗಿರುವುದು ಸತ್ಯಕ್ಕೆ ಬೆಲೆ ಇದೆ ಎನ್ನುವ ಸಂದೇಶವನ್ನು ನೀಡಿದೆ. ಭಾನುವಾರ ದೇಶಾದ್ಯಂತ ಬೃಹತ್ ಪ್ರತಿಭಟನೆಯಾದ ಬಳಿಕ ಸಂಜಯ್ ಸಿಂಗ್ ಬಿಡುಗಡೆಯಾಗಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ತೊಲಗಿಸುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications