ಪತ್ರಕರ್ತರಿಗೆ ಬಜೆಟ್ ನಲ್ಲಿ 'ಮಾಧ್ಯಮ ಸಂಜೀವಿನಿ' ಜೀವ ವಿಮೆ ಘೋಷಣೆ

ಬೆಂಗಳೂರು, ಫೆಬ್ರವರಿ 16: ವೃತ್ತಿ ನಿರತ ಪತ್ರಕರ್ತರು ಅವಘಾತಕ್ಕೆ ಒಳಗಾದರೆ ಮತ್ತು ಅಕಾಲಿಕ ಮರಣವನ್ನು ಹೊಂದಿದ ಸಂದರ್ಭದಲ್ಲಿ 5 ಲಕ್ಷ ರೂ. ವರೆಗಿನ ಜೀವ ವಿಮೆ ಖಾತರಿ ನೀಡುವ 'ಮಾಧ್ಯಮ ಸಂಜೀವಿನಿ' ಯೋಜನೆ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಇದಲ್ಲದೆ ಈಗಾಗಲೇ ಪತ್ರಕರ್ತರಿಗೆ ನೀಡುತ್ತಿರುವ ರಾಜೀವ್ ಆರೋಗ್ಯ ಯೋಜನೆಯನ್ನು ಬಲವರ್ಧನೆಗೊಳಿಸಿ ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸಲಾಗುತ್ತದೆ ಎಂದು ಬಜೆಟ್ ನಲ್ಲಿ ಅವರು ಹೇಳಿದ್ದಾರೆ.

ಇನ್ನು ಬೆಂಗಳೂರಿನಲ್ಲಿ 5 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಪತ್ರಕರ್ತರ ಭವನವನ್ನು ನಿರ್ಮಿಸಲಾಗುವುದು. ಪತ್ರಿಕೆಗಳನ್ನು ಮನೆಮನೆಗೆ ಹಂಚುವವರ ಕ್ಷೇಮಾಭಿವೃದ್ಧಿಗೆ 2 ಕೋಟಿ ರೂಪಾಯಿಗಳ 'ಕ್ಚೇಮ ನಿಧಿ' ಸ್ಥಾಪಿಸಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Nava Karnataka Budget 2018: 'Madhyama Sanjeevini' Life Insurance announces for journalists

ಹೀಗೆ 2018-19ರಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಒಟ್ಟಾರೆ 239 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

ಪತ್ರಕರ್ತರಿಗೆ ಬಜೆಟ್ ನಲ್ಲಿ ನೀಡಲಾದ ಇತರ ಕೊಡುಗೆಗಳು ಹೀಗಿವೆ,

  • ಕಳೆದ 5 ವರ್ಷಗಳಲ್ಲಿ ಪತ್ರಕರ್ತ ನೀಡಲಾಗುವ ಮಾಸಾಶನ 3 ಸಾವಿರದಿಂದ 10 ಸಾವಿರಕ್ಕೆ ಏರಿಕೆ.
  • ಮೃತ ಪತ್ರಕರ್ತರ ಕುಟುಂಬಕ್ಕೆ ನೀಡಲಾಗುವ ಮಾಸಾಶನ 1 ಸಾವಿರದಿಂದ 3 ಸಾವಿರಕ್ಕೆ ಏರಿಕೆ.
  • ಪತ್ರಕರ್ತರಿಗೂ ರಾಜೀವ್ ಆರೋಗ್ಯ ವಿಮೆ ವಿಸ್ತರಣೆ. ಪತ್ರಕರ್ತರ ಪಾಲಿನ ಶುಲ್ಕವನ್ನು ಇಲಾಖೆಯೇ ಭರಿಸಲಿದೆ.
  • ಮಾನ್ಯತೆ ಪಡೆದ ಜಿಲ್ಲಾ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಸಂಚರಿಸಲು ಉಚಿತ ಬಸ್ ಪಾಸ್ ವಿತರಣೆ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+