ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ; ಮುಂದೇನು?
ಬೆಂಗಳೂರು, ಸೆಪ್ಟೆಂಬರ್ 28: ಡ್ರಗ್ಸ್ ಜಾಲದ ಕುರಿತ ಪ್ರಕರಣದಲ್ಲಿ ಬಂಧಿತಾಗಿದ್ದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಜಾಗೊಂಡಿದೆ. ಇದರಿಂದಾಗಿ ಪರಪ್ಪನ ಅಗ್ರಹರ ಜೈಲಿನಲ್ಲಿರುವ ನಟಿಯರಿಗೆ ಹೊಸ ಸಂಕಷ್ಟ ಎದುರಾಗಿದೆ.
ಸೋಮವಾರ ಬೆಂಗಳೂರಿನ ಎನ್ಡಿಪಿಎಸ್ ವಿಶೇಷ ಕೋರ್ಟ್ನ ನ್ಯಾಯಾಧೀಶ ಜಿ. ಎಂ. ಶೀನಪ್ಪ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ ಐದು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
ನಟಿಯರಿಗೆ ಸಂಕಷ್ಟ; ರಾಗಿಣಿ, ಸಂಜನಾ 5 ದಿನ ಇಡಿ ಕಸ್ಟಡಿಗೆ
ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಶಿವಪ್ರಕಾಶ್ ತಲೆ ಮರೆಸಿಕೊಂಡಿದ್ದಾರೆ. ವಕೀಲರ ಮೂಲಕ ನಿರೀಕ್ಷಣಾ ಜಾಮೀನು ನೀಡುವಂತೆ ಎನ್ಡಿಪಿಎಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಪರಪ್ಪನ ಅಗ್ರಹಾರ ಜೈಲಿಗೆ ನಟಿ ರಾಗಿಣಿ ದ್ವಿವೇದಿ
ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ರಾಹುಲ್, ವಿರೇನ್ ಖನ್ನಾ, ಬಿ. ಕೆ. ರವಿಶಂಕರ್ರನ್ನು 5 ದಿನಗಳ ಕಾಲ ಇಡಿ ವಶಕ್ಕೆ ನೀಡಲಾಗಿದೆ. ಆರೋಪಿಗಳ ಆಸ್ತಿ, ಹಣ ವರ್ಗಾವಣೆ ಕುರಿತು ಇಡಿ ಸಹ ತನಿಖೆ ನಡೆಸುತ್ತಿದೆ.
ಡ್ರಗ್ಸ್ ಕೇಸ್ ತನಿಖೆ; ಸಿಸಿಬಿ ಸಿಬ್ಬಂದಿಯಿಂದ ಆರೋಪಿಗೆ ಮಾಹಿತಿ ಲೀಕ್!
ಜಾಮೀನು ಅರ್ಜಿ ತಿರಸ್ಕಾರ
ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ರಾಹುಲ್, ಶಿವಪ್ರಕಾಶ್ ಚಿಪ್ಪಿ, ವಿನಯ್ ಕುಮಾರ್ ಜಾಮೀನು ಅರ್ಜಿಯನ್ನು ಎನ್ಡಿಪಿಎಸ್ ವಿಶೇಷ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಈ ಆರೋಪಿಗಳು ಇನ್ನು ಜಾಮೀನು ಪಡೆಯಲು ಕರ್ನಾಟಕ ಹೈಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಬೇಕಿದೆ.
ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ
ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ರವಿಶಂಕರ್, ಪ್ರಶಾಂತ್ ರಂಕ, ಅಭಿಸ್ವಾಮಿ, ವೈಭವ್ ಜೈನ್, ಪ್ರಶಾಂತ್ ರಾಜು ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ವಿರೇನ್ ಖನ್ನಾ ಅರ್ಜಿಯ ವಿಚಾರಣೆ ಅಕ್ಟೋಬರ್ 1ಕ್ಕೆ ನಡೆಯಲಿದೆ.
ಲುಕ್ ಔಟ್ ನೋಟಿಸ್
ಪೊಲೀಸರು ಎಫ್ಐಆರ್ನಲ್ಲಿ ಉಲ್ಲೇಖಿಸಿರುವ ಶಿವಪ್ರಕಾಶ್ ಚಿಪ್ಪಿ (ಎ1), ಆದಿತ್ಯ ಆಳ್ವಾ (ಎ6) ಇನ್ನೂ ತಲೆಮರೆಸಿಕೊಂಡಿದ್ದಾರೆ. ಶಿವಪ್ರಕಾಶ್ ಚಿಪ್ಪಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಆದಿತ್ಯ ಆಳ್ವಾ ತಮ್ಮನ್ನು ಪ್ರಕರಣದಿಂದ ಕೈಬಿಡುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇಬ್ಬರೂ ಆರೋಪಿಗಳ ಬಂಧನಕ್ಕೆ ಸಿಸಿಬಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.
Recommended Video
ಪರಪ್ಪನ ಅಗ್ರಹಾರವೇ ಗತಿ
ರಾಗಿಣಿ ದ್ವಿವೇದಿ 14 ದಿನದಿಂದ, ಸಂಜನಾ ಗಲ್ರಾನಿ 12 ದಿನದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನಲೆಯಲ್ಲಿ ಅವರನ್ನು ವಿಶೇಷ ಕೊಠಡಿಯಿಂದ ಸೆಲ್ಗೆ ಶಿಫ್ಟ್ ಮಾಡಲಾಗುತ್ತದೆ. ಸೆಲ್ನಲ್ಲಿಯೇ ಇಬ್ಬರು ಸಹ 2ನೇ ಹಂತದ ಕ್ವಾರಂಟೈನ್ ಆಗಬೇಕಿದೆ.