DK Shivakumar: ತುಮಕೂರು ಜನತೆಗೆ ಗುಡ್ ನ್ಯೂಸ್ ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಜುಲೈ 05: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದು, ತುಮಕೂರು ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿಗೆ ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಅವರು ಪೈಪ್ ಲೈನ್ ಹಾಕಬೇಡಿ ತೆರೆದ ಕಾಲುವೆಯಲ್ಲಿ ನೀರು ತೆಗೆದುಕೊಂಡು ಹೋಗಿ ಎಂದು ಹೇಳುತ್ತಿದ್ದಾರೆ. ಪೈಪ್ ಲೈನ್ ಮಾಡುವುದು ಸರ್ಕಾರದ ತೀರ್ಮಾನ ಎಂದು ತಿಳಿಸಿದರು.

ಕೇಂದ್ರ ಸಚಿವ ಸೋಮಣ್ಣ ಅವರು ಭಾರತೀಯ ವಿಜ್ಞಾನ ಸಂಸ್ಥೆ ತಜ್ಞರಿಂದ ಪರಿಶೀಲನೆಗೆ ಶಿಫಾರಸ್ಸು ಮಾಡಿದ್ದು, ಇದಕ್ಕೆ ಒಪ್ಪಿಗೆ ನೀಡಲಾಗಿದೆ. ನಮಗೆ ಕೇವಲ ಕುಣಿಗಲ್ ತಾಲೂಕು ಮಾತ್ರವಲ್ಲ. ಇಡೀ ತುಮಕೂರು ಜಿಲ್ಲೆಗೆ ನೀರು ಒದಗಿಸಬೇಕಿದ್ದು, ಅದಕ್ಕೆ ಪೂರಕವಾಗಿ ನಾನು ಯೋಜನೆ ಸಿದ್ಧಪಡಿಸಿದ್ದೇನೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ನೀರನ್ನು ಹಂಚಲಾಗುವುದು. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಹಿತಕಾಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಮ್ಮ ಸರ್ಕಾರ ಇದ್ದಾಗ ಯೋಜನೆ ಆರಂಭಿಸಿ ಕಾಮಗಾರಿ ನಡೆಸಿದ್ದೆವು. ಬಿಜೆಪಿ ಸರ್ಕಾರ ಇದನ್ನು ನಿಲ್ಲಿಸಿತ್ತು. ನನ್ನ ಕ್ಷೇತ್ರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ವಾಪಸ್ ಪಡೆದರು. ಈ ಯೋಜನೆ ಮುಂದುವರಿಸುವುದಾಗಿ ಯಡಿಯೂರಪ್ಪ ಹೇಳಿದರೂ ನಂತರ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿದರು. ಇದೆಲ್ಲವೂ ಸರ್ಕಾರದ ತೀರ್ಮಾನ. ಮೆಡಿಕಲ್ ಕಾಲೇಜು ನಿರ್ಮಾಣದ ಯೋಜನೆ 600 ಕೋಟಿಯಿಂದ 900 ಕೋಟಿಗೆ ಏರಿಕೆಯಾಗಿದೆ. ಇದಕ್ಕೆ ಜವಾಬ್ದಾರಿ ಯಾರು? ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದರು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications