DK Shivakumar: ತುಮಕೂರು ಜನತೆಗೆ ಗುಡ್ ನ್ಯೂಸ್ ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಜುಲೈ 05: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದು, ತುಮಕೂರು ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿಗೆ ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಅವರು ಪೈಪ್ ಲೈನ್ ಹಾಕಬೇಡಿ ತೆರೆದ ಕಾಲುವೆಯಲ್ಲಿ ನೀರು ತೆಗೆದುಕೊಂಡು ಹೋಗಿ ಎಂದು ಹೇಳುತ್ತಿದ್ದಾರೆ. ಪೈಪ್ ಲೈನ್ ಮಾಡುವುದು ಸರ್ಕಾರದ ತೀರ್ಮಾನ ಎಂದು ತಿಳಿಸಿದರು.

ಕೇಂದ್ರ ಸಚಿವ ಸೋಮಣ್ಣ ಅವರು ಭಾರತೀಯ ವಿಜ್ಞಾನ ಸಂಸ್ಥೆ ತಜ್ಞರಿಂದ ಪರಿಶೀಲನೆಗೆ ಶಿಫಾರಸ್ಸು ಮಾಡಿದ್ದು, ಇದಕ್ಕೆ ಒಪ್ಪಿಗೆ ನೀಡಲಾಗಿದೆ. ನಮಗೆ ಕೇವಲ ಕುಣಿಗಲ್ ತಾಲೂಕು ಮಾತ್ರವಲ್ಲ. ಇಡೀ ತುಮಕೂರು ಜಿಲ್ಲೆಗೆ ನೀರು ಒದಗಿಸಬೇಕಿದ್ದು, ಅದಕ್ಕೆ ಪೂರಕವಾಗಿ ನಾನು ಯೋಜನೆ ಸಿದ್ಧಪಡಿಸಿದ್ದೇನೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ನೀರನ್ನು ಹಂಚಲಾಗುವುದು. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಹಿತಕಾಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಮ್ಮ ಸರ್ಕಾರ ಇದ್ದಾಗ ಯೋಜನೆ ಆರಂಭಿಸಿ ಕಾಮಗಾರಿ ನಡೆಸಿದ್ದೆವು. ಬಿಜೆಪಿ ಸರ್ಕಾರ ಇದನ್ನು ನಿಲ್ಲಿಸಿತ್ತು. ನನ್ನ ಕ್ಷೇತ್ರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ವಾಪಸ್ ಪಡೆದರು. ಈ ಯೋಜನೆ ಮುಂದುವರಿಸುವುದಾಗಿ ಯಡಿಯೂರಪ್ಪ ಹೇಳಿದರೂ ನಂತರ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿದರು. ಇದೆಲ್ಲವೂ ಸರ್ಕಾರದ ತೀರ್ಮಾನ. ಮೆಡಿಕಲ್ ಕಾಲೇಜು ನಿರ್ಮಾಣದ ಯೋಜನೆ 600 ಕೋಟಿಯಿಂದ 900 ಕೋಟಿಗೆ ಏರಿಕೆಯಾಗಿದೆ. ಇದಕ್ಕೆ ಜವಾಬ್ದಾರಿ ಯಾರು? ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದರು.
-
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget: ಹೆಚ್ಚು ಹಾಲು ಕೊಡುವ ಹಸುವಿಗೆ ಹೆಚ್ಚಿನ ಆರೈಕೆ ಬೇಕು: ಬಜೆಟ್ ಭಾಷಣವಿಡೀ ಕೇಂದ್ರಕ್ಕೆ ಕುಟುಕಿದ ಸಿದ್ದರಾಮಯ್ಯ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಬಜೆಟ್ನಲ್ಲಿ ಜನರ ಮೇಲೆ ಸಾಲದ ಹೊರೆ, ಖಾಲಿ ಚೊಂಬು ನೀಡಿದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ -
ಶ್ರೀ ಮಾತಾ ವೈಷ್ಟೋದೇವಿ ಭಕ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಭರ್ಜರಿ ಸುದ್ದಿ | Karnataka Budget 2026 -
ರಾಜ್ಯ ಬಜೆಟ್ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ -
Karnataka Budget 2026: 4.5 ಲಕ್ಷ ಕೋಟಿಯ ರಾಜ್ಯ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಗುವುದೇ ಭರ್ಜರಿ ಕೊಡುಗೆ? -
ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಬಜೆಟ್ನಲ್ಲಿ ಘೋಷಣೆ -
ಸಿನಿಮಾ ಚಿತ್ರೀಕರಣ ಅನುಮತಿಗೆ "ಸಿನಿ ಮಿತ್ರ" ಆನ್ಲೈನ್ ವ್ಯವಸ್ಥೆ: ಸ್ಯಾಂಡಲ್ವುಡ್ಗೆ ಸಿದ್ದರಾಮಯ್ಯ ಬಜೆಟ್ ಕೊಟ್ಟಿದ್ದೇನು? -
Karnataka Budget 2026: ಕರ್ನಾಟಕ ಬಜೆಟ್ 2026ಕ್ಕೆ ಕ್ಷಣಗಣನೆ: ದಾಖಲೆಯ 17ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ












Click it and Unblock the Notifications