ತುರ್ತಾಗಿ ರಕ್ತಬೇಕೆ?, ವೆಬ್ಸೈಟ್ಗೆ ಭೇಟಿ ಕೊಡಿ
ಬೆಂಗಳೂರು, ಜೂ. 19 : ತುರ್ತಾಗಿ ರಕ್ತ ಬೇಕಾದಾಗ ಸಹಾಯವಾಗಲು ಆರೋಗ್ಯ ಇಲಾಖೆ ವೆಬ್ಸೈಟ್ ಆರಂಭಿಸಿದೆ. ವೆಬ್ಸೈಟ್ಗೆ ಭೇಟಿ ಕೊಟ್ಟು ಮಾಹಿತಿ ಪಡೆಯಬಹುದು ಅಥವ ಒಂದು ಕರೆ ಮಾಡಿದರೆ ರಕ್ತ ಎಲ್ಲಿ ಲಭ್ಯವಿದೆ? ಎಂಬ ಮಾಹಿತಿ ಮೊಬೈಲ್ಗೆ ಬರುತ್ತದೆ. ಸ್ಮಾರ್ಟ್ ಪೋನ್ ಬಳಕೆದಾರರಿಗಾಗಿ ಮೊಬೈಲ್ ಅಪ್ಲಿಕೇಶನ್ ಸಹ ಆರಂಭಿಸಲಾಗಿದೆ.
ವಿಧಾನಸೌಧದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ 'ಜೀವ ಸಂಜೀವಿನಿ' ಹೆಸರಿನ ವೆಬ್ಸೈಟ್ ಉದ್ಘಾಟನೆ ಮಾಡಿದ್ದಾರೆ. ಒಂದು ಫೋನ್ ಕರೆ ಮಾಡಿದರೆ, ರಾಜ್ಯದ ಯಾವ ಮೂಲೆಯಲ್ಲಿ ಎಷ್ಟು ರಕ್ತ ಸಂಗ್ರಹವಿದೆ?, ಯಾವ ಗುಂಪಿನ ರಕ್ತದ ಲಭ್ಯತೆ ಎಷ್ಟಿದೆ? ಎಂಬ ವಿವರ ನಿಮ್ಮ ಮೊಬೈಲ್ಗೆ ಸಂದೇಶ ರೂಪದಲ್ಲಿ ಬರಲಿದೆ. [ವೆಬ್ ಸೈಟ್ ವಿಳಾಸ]

ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇದ್ದಾಗ ಜನರು 'ಆರೋಗ್ಯವಾಣಿ ಸಂಖ್ಯೆ 104'ಕ್ಕೆ ಕರೆ ಮಾಡಿದರೆ, ನೀವು ಕೇಳಿದ ಜಿಲ್ಲೆಯ ಯಾವ ಪ್ರದೇಶದಲ್ಲಿ ರಕ್ತ ಲಭ್ಯವಿದೆ? ಯಾವ ಗುಂಪಿನ ರಕ್ತ ಎಷ್ಟಿದೆ? ರಕ್ತ ನಿಧಿ ಕೇಂದ್ರದ ವಿಳಾಸ, ವೈದ್ಯರ ಹೆಸರು, ಮೊಬೈಲ್ ಸಂಖ್ಯೆ ಎಲ್ಲಾ ಮಾಹಿತಿ ಸಂದೇಶ ರೂಪದಲ್ಲಿ ಬರುತ್ತದೆ ಎಂದು ಸಚಿವ ಖಾದರ್ ವಿವರಣೆ ನೀಡಿದರು. [ನಿಮ್ಮ ರಕ್ತ ಯಾವ ಗುಂಪಿಗೆ ಸೇರಿದ್ದು ತಿಳಿದುಕೊಳ್ಳಿ]
2012ರಲ್ಲಿಯೇ ರಕ್ತದ ಲಭ್ಯತೆ ಕುರಿತು ಮಾಹಿತಿ ನೀಡುವ ವೆಬ್ಸೈಟ್ ಆರಂಭಿಸಲಾಗಿತ್ತು. ಸದ್ಯ ಅದನ್ನು ಉನ್ನತೀಕರಿಸಿ, 'ಜೀವ ಸಂಜೀವಿನಿ' ಹೆಸರಿನಲ್ಲಿ ಪರಿಚಯಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಜನರು ಸ್ಮಾರ್ಟ್ ಫೋನ್ ಹೊಂದಿದ್ದರೆ, ಜೀವ ಸಂಜೀವಿನಿ ಮೊಬೈಲ್ ಅಪ್ಲಿಕೇಶನ್ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ವೆಬ್ಸೈಟ್ನಲ್ಲಿಯೇ ಅಪ್ಲಿಕೇಶನ್ ಡೌನ್ಲೋಡ್ ಲಿಂಕ್ಗಳನ್ನು ನೀಡಲಾಗಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications