ನೀಟ್ ಪರೀಕ್ಷೆ: ಅಂಗಿ, ಶೂ, ಮೂಗುತಿ ಬಿಚ್ಚಿಸಿದ ಪರೀಕ್ಷಾ ವೀಕ್ಷಕರು
ಬೆಂಗಳೂರು, ಮೇ 05: ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ದೊರಕಿಸುವ ನೀಟ್ ಪರೀಕ್ಷೆ ಇಂದು ಎರಡು ಗಂಟೆಗೆ ಪ್ರಾರಂಭವಾಗಿದ್ದು, ಪರೀಕ್ಷಾರ್ಥಿಗಳಿಗೆ ಬಹು ಕಠಿಣ ನಿಯಮವನ್ನು ಪರೀಕ್ಷಾ ಕೊಠಡಿಯಲ್ಲಿ ಹೇರಲಾಗಿದೆ.
ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳ ಉಡುಪು, ಪಾದರಕ್ಷೆಗಳ ಬಗೆಗೆ ಸಹ ನಿಯಮವನ್ನು ಸೂಚಿಸಿರುವ ನೀಟ್ ಪರೀಕ್ಷೆ ನಡೆಸುವ ಎನ್ಟಿಎ ಇನ್ನೂ ಹಲವು ಮಾದರಿಯ ಷರತ್ತುಗಳನ್ನು ನೀಡಿದೆ.
ಪರೀಕ್ಷಾರ್ಥಿಗಳು ಉದ್ದನೆಯ ಅಂಗಿಯ ತೋಳು ತೊಡುವುದು, ಶೂ ಧರಿಸುವುದನ್ನು ನಿಷೇಧಿಸಲಾಗಿದೆ. ಅಷ್ಟೆ ಅಲ್ಲದೆ ಪರೀಕ್ಷಾ ಕೊಠಡಿ ಪ್ರವೇಶಕ್ಕೆ ಮುನ್ನಾ ಸಹ ಭಾರಿ ತಪಾಸಣೆಗೆ ಪರೀಕ್ಷಾರ್ಥಿಗಳನ್ನು ಒಳಪಡಿಸಲಾಗುತ್ತಿದೆ.

ಯುವತಿಯರು ಧರಿಸಿದ್ದ ಮೂಗುತಿ, ಕಿವಿ ಓಲೆಗಳನ್ನು ಸಹ ಬಿಚ್ಚಿಸಿ ಪರೀಕ್ಷಾ ಕೊಠಡಿಗೆ ಬಿಡಲಾಗುತ್ತಿದೆ, ಉದ್ದನೆಯ ತೋಳಿನ ಅಂಗಿ ಧರಿಸಿ ಬಂದವರ ಶರ್ಟ್ ಕಳಚಿಸಲಾಗುತ್ತಿದೆ, ಅಥವಾ ಅಂಗಿಯ ತೋಳು ಕತ್ತರಿಸಲಾಗಿದೆ. ಶೂಗಳನ್ನು ಕಳಚಿಟ್ಟು ಹೋಗುವಂತೆ ಹೇಳಲಾಗುತ್ತಿದೆ.
ಕಳೆದ ಬಾರಿ ನೀಟ್ ಪರೀಕ್ಷೆ ಕೊಠಡಿಯ ಬಳಿ ನಡೆದ ಅವಮಾನಕಾರಿ ತಪಾಸಣೆಗಳು ದೇಶದಾದ್ಯಂತ ಸುದ್ದಿ ಆಗಿದ್ದವು. ಯುಕವತಿಯರ ಒಳಧಿರಿಸುಗಳನ್ನು ಸಹ ಕಳೆದ ವರ್ಷ ತಪಾಸಣೆ ಮಾಡಲಾಗಿತ್ತು, ಯುಕವರೂ ಇದೇ ಮಾದರಿ ತಪಾಸಣೆಗೆ ಒಳಗಾಗಿದ್ದರು. ಇದು ಭಾರಿ ವಿರೋಧಕ್ಕೆ ಕಾರಣವಾಗಿತ್ತು.
ಆದರೆ ಎನ್ಟಿಎ (ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ) ತನ್ನ ನಿಯಮಗಳಲ್ಲಿ ಹೆಚ್ಚೇನೂ ಬದಲಾವಣೆ ಮಾಡಿಕೊಂಡಂತಿಲ್ಲ, ಈ ಬಾರಿಯೂ ಇದೇ ಮಾದರಿಯ ಕಠಿನ ನಿಯಮಗಳನ್ನು ಪರೀಕ್ಷಾರ್ಥಿಗಳ ಮೇಲೆ ಹೇರಿದೆ. ಪರೀಕ್ಷೆಯು ಇಂದು ಎರಡು ಗಂಟೆಗೆ ಪ್ರಾರಂಭವಾಗಿದ್ದು, ಸಂಜೆ ಐದು ಗಂಟೆಗೆ ಮುಗಿಯಲಿದೆ.
ಈ ಮಧ್ಯೆ ರಾಜ್ಯದ ಕೆಲವು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಗುವ ಸಾಧ್ಯತೆ ಇದ್ದು, ಭಾರಿ ಆತಂಕ ತಂದಿದೆ. ಹಂಪಿ ಎಕ್ಸ್ಪ್ರೆಸ್ ರೈಲಿನಲ್ಲಿ ನೂರಾರು ವಿದ್ಯಾರ್ಥಿಗಳು ಪರೀಕ್ಷೆಗಾಗಿ ಆಗಮಿಸುತ್ತಿದ್ದರು. ಆದರೆ, ರೈಲ್ವೆ ಇಲಾಖೆ ಮಾರ್ಗ ಬದಲಾವಣೆ ಮಾಡಿದ್ದು, ಅರಸೀಕೆರೆ ಮೂಲಕ ರೈಲು ಬೆಂಗಳೂರಿಗೆ ಆಗಮಿಸುತ್ತಿದೆ, ಇದರಿಂದ ನೂರಾರು ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಳ್ಳುವ ಆತಂಕದಲ್ಲಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications