Breaking: ನೀಟ್ ಅಕ್ರಮ ದಂಧೆಗೆ ಪಿಎಸ್ಐ ಹಗರಣವೇ ಪ್ರೇರಣೆ
ಬೆಂಗಳೂರು ಜುಲೈ 20: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನೀಟ್ ಪರೀಕ್ಷೆ ಪಾಸು ಮಾಡಿಸುವ ಜಾಲ ಸಿಬಿಐ ಬಂಧಿಸಿದ್ದು, ಅದಕ್ಕೆ ಕರ್ನಾಟಕದ ಪಿಎಸ್ಐ ನೇಮಕಾತಿ ಪ್ರಕರಣವೇ ಪ್ರೇರಣೆ ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿ ಕಾರಿದೆ.
ಈ ಕುರಿತು ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್, "ರಾಷ್ಟ್ರಮಟ್ಟದಲ್ಲಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪತ್ರ (ನೀಟ್) ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ವೈದ್ಯಕೀಯ ಸೀಟುಗಳಿಗೆ ಅಗತ್ಯವಾದ ನೀಟ್ ಪರೀಕ್ಷೆ ಪಾಸು ಮಾಡಿಸುವುದಾಗಿ 20 ಲಕ್ಷ ರೂ. ಪಡೆದ ಅಭ್ಯರ್ಥಿಗಳ ಬದಲಿಗೆ ಬೇರೆಯವರನ್ನು ಪರೀಕ್ಷೆ ಬರೆಸುತ್ತಿದ್ದ ಎಂಟು ಮಂದಿಯನ್ನು ಮಂಗಳವಾರ ಸಿಬಿಐ ಬಂಧಿಸಿದೆ.
ಈ ನೀಟ್ ಪರೀಕ್ಷೆ ಪಾಸು ಕುರಿತ ದಂಧೆ ಕರ್ನಾಟಕದ ಪಿಎಸ್ಐ ನೇಮಕಾತಿ ಪ್ರಕರಣವೇ ಸ್ಪೂರ್ತಿಯಾದಂತಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ. ಈ ಮೂಲಕ ಪ್ರತಿಭಾವಂತ ಯುವಜನರ ವೈದ್ಯಕೀಯ ವ್ಯಾಸಂಗದ ಕನಸಿಗೆ ಕೊಳ್ಳಿ ಇಡುವ ಸ್ಥಿತಿ ದೇಶದಲ್ಲಿ, ರಾಜ್ಯದಲ್ಲಿ ನಿರ್ಮಾಣ ಆಗಿದೆ. ಇದಕ್ಕೆ ಭ್ರಷ್ಟ ಸ್ನೇಹಿ ಬಿಜೆಪಿಯ ಅಡಳಿತವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
ರಾಷ್ಟ್ರಮಟ್ಟದಲ್ಲಿ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.
— Karnataka Congress (@INCKarnataka) July 20, 2022
ಇದಕ್ಕೆ ಕರ್ನಾಟಕದ PSI ಅಕ್ರಮವೇ ಪ್ರೇರಣೆಯಾಗಿರುವಂತಿದೆ!
ಪ್ರತಿಭಾವಂತ ಯುವಜನರ ವೈದ್ಯಕೀಯ ವ್ಯಾಸಂಗದ ಕನಸಿಗೆ ಕೊಳ್ಳಿ ಇಡುವ ಸ್ಥಿತಿ ನಿರ್ಮಾಣ ಮಾಡಿದ್ದು ಬಿಜೆಪಿಯ ಭ್ರಷ್ಟ ಸ್ನೇಹಿ ಅಡಳಿತವೇ ಕಾರಣ.#neetscam pic.twitter.com/BCJ4J7QJZU

ಅಭಿವೃದ್ಧಿಗೆ ಹಣವಿಲ್ಲ
ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿ ಡಬಲ್ ಎಂಜಿನ್ ಸರ್ಕಾಗಳಿಗೆ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಕೋಟಿ ಕೋಟಿ ಲೂಟಿ ಮಾಡಲು ಹಣ ಇದೆ. ಕಾಮಗಾರಿಗಳಲ್ಲಿ 40% ಕಮಿಷನ್ ದೋಚಲು ಹಣವಿದೆ. ಮೂಲಭೂತ ಅಭಿವೃದ್ಧಿ, ಜನ ಉಪಯೋಗಿ ಕೆಲಸಗಳನ್ನು ಬಗ್ಗೆ ಕೇಳಿದರೆ ಸರ್ಕಾರದ 'ಬೊಕ್ಕಸದಲ್ಲಿ ಹಣವಿಲ್ಲ' ಎಂಬ ಉತ್ತರ ಕೇಳಿ ಬರುತ್ತದೆ. ಬೊಕ್ಕಸದಲ್ಲಿ ಹಣ ಇಲ್ಲ ಎಂದು ಸಲೀಸಾದ ಉತ್ತರ ಬಿಜೆಪಿ ಯಾವಾಗಲೂ ಸಿದ್ದವಿಟ್ಟುಕೊಂಡಿರುತ್ತದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ.

ರಾಜ್ಯದಲ್ಲಿ ಮಳೆ, ಪ್ರವಾಹಕ್ಕೆ ತುತ್ತಾದ ಸಂತ್ರಸ್ತರಿಗೆ ಇದುವರೆಗೂ ಪರಿಹಾರದ ಪ್ಯಾಕೇಜ್ ಘೋಷಣೇ ಮಾಡಿಲ್ಲ. ನೆರೆ ಸಂತ್ರಸ್ತರನ್ನು ಸರ್ಕಾರ ನಿರ್ಲಕ್ಷಿದೆ. ಸಂತ್ರಸ್ಥರಿಗೆ ಕೇಂದ್ರ ಸರ್ಕಾರದ ನೆರವು ದೊರೆತಿಲ್ಲ. ಇದು ನೋಡಿ ಡಬಲ್ ಎಂಜಿನ್ ಸರ್ಕಾರಗಳ ಅಭಿವೃದ್ಧಿ, ವಿಕಾಸ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications