ಚಾಲಕರಿಗೆ ಕನಿಷ್ಟ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜಕ್ಕೆ ಅನ್ಯಾಯ: ಹೈಕೋರ್ಟ್
ಬೆಂಗಳೂರು, ಮೇ 09: ನಿರ್ಲಕ್ಷ್ಯದಿಂದ ಆಂಬ್ಯುಲೆನ್ಸ್ ಚಲಾಯಿಸಿ ಮತ್ತೊಂದು ಕಾರಿನ ಚಾಲಕನ ಸಾವಿಗೆ ಕಾರಣವಾಗಿದ್ದ ಸವಾರನಿಗೆ ವಿಚಾರಣಾ ನ್ಯಾಯಲಯ ವಿಧಿಸಿದ್ದ 6 ತಿಂಗಳ ಶಿಕ್ಷೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ಅಷ್ಟೇ ಅಲ್ಲ ಅಜಾಗರೂಕವಾಗಿ ವಾಹನ ಚಲಾಯಿಸಿ ಅಪಘಾತಗಳಿಗೆ ಕಾರಣರಾದವರಿಗೆ ಕನಿಷ್ಟ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯಾ ಮಾಡಿದಂತಾಗಲಿದೆ ಎಂದು ಹೇಳಿದೆ. ಹಾಗಾಗಿ ತಪ್ಪೆಸಗಿದ್ದ ಆ ಚಾಲಕನಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿಯಾಗಿದೆ.

ಶಿಕ್ಷೆಯನ್ನು ಖಚಿತ ಪಡಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡಿವಳೆ ತಾಲೂಕಿನ ಸಂತೋಷ್ ಎಂಬುವರು ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಹೈಕೋರ್ಟ್ ಆದೇಶವೇನು?: ರಸ್ತೆ ಅಘಾತದಿಂದ ಒಂದು ಜೀವ ಕಳೆದುಕೊಳ್ಳುವಂತಹ ಪ್ರಕರಣಗಳಲ್ಲಿ ಕನಿಷ್ಟ ಪ್ರಮಾಣದ ಶಿಕ್ಷೆ ಮತ್ತು ಕೆಲವು ರೂ. ಗಳ ದಂಡ ವಿಧಿಸಿದ್ದಲ್ಲಿ ಸಮಾಜ ಮತ್ತು ಸಂತ್ರಸ್ತರ ಕುಟುಂಬಕ್ಕೆ ಅನ್ಯಾಯ ವೆಸಗಿದಂತಾಗಲಿದೆ.
ಅಲ್ಲದೆ, ಚಾಲಕರ ಅಜಾಗರೂಕ ಚಾಲನೆಯನ್ನು ಪ್ರೋತ್ಸಾಹಿಸಿದಂತಾಗಲಿದೆ. ಜತೆಗೆ, ಅವರ ವಾಹನಗಳನ್ನು ಸಂಚಾರ ನಿಯಮಗಳನ್ನು ಪಾಲಿಸದೆ ನಿರ್ಲಕ್ಷ್ಯ ಹೆಚ್ಚಳವಾಗಲು ಕಾರಣವಾಗಲಿದೆ. ಹಾಗೂ ಮನುಷ್ಯನ ಜೀವದ ಮೌಲ್ಯಕ್ಕೆ ಬೆಲೆಯೇ ಇಲ್ಲದಂತಾಗಲಿದೆ ಎಂದು ಪೀಠ ತಿಳಿಸಿದೆ.
ಪ್ರಕರಣದ ಗಂಭೀರತೆ ಮತ್ತು ಸಾಕ್ಷ್ಯಾಧಾರಗಳನ್ನು ಪರಿಗಣಿಸಿರುವ ವಿಚಾರಣಾ ನ್ಯಾಯಾಲಯ ಸರಿಯಾದ ಕಾನೂನು ಪ್ರಕಾರವೇ ಶಿಕ್ಷೆ ವಿಧಿಸಿದೆ. ಈ ಶಿಕ್ಷೆ ಅತ್ಯಂತ ಕಠಿಣವೂ ಅಲ್ಲ ಮತ್ತು ಸರಳವೂ ಅಲ್ಲ. ಆದ್ದರಿಂದ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.
ಪ್ರಕರಣದ ಹಿನ್ನಲೆ: ಅರ್ಜಿದಾರ ತಾನು ಚಾಲನೆ ಮಾಡುತ್ತಿದ್ದ ಆಂಬ್ಯುಲೆನ್ಸ್ ವಾಹನವನ್ನು 2011ರ ಏಪ್ರಿಲ್ 19ರಂದು ಮೂಡಿಗೆರೆಯಿಂದ ಮಂಗಳೂರು ಕಡೆಗೆ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದರು. ಈ ವೇಳೆ ಬಿದರಳ್ಳಿ ಎಂಬ ಗ್ರಾಮದಲ್ಲಿ ಮಾರುತಿ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಿಂದ ಕಾರಿನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇತರೆ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು.
ಪ್ರಕರಣ ದಾಖಲಿಸಿಕೊಂಡಿದ್ದ ಮೂಡಿಗೆರೆ ಪೊಲೀಸರು ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ 6 ತಿಂಗಳು ಸಾಧಾರಣ ಶಿಕ್ಷೆ ಮತ್ತು 4 ಸಾವಿರ ರೂ.ಗಳ ದಂಡ ವಿಧಿಸಿ ಆದೇಶಿಸಿತ್ತು.
ಇದನ್ನು ಅರ್ಜಿದಾರರು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸದ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆದೇಶವನ್ನು ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications