ದೇಶವನ್ನು ಕಟ್ಟುವಲ್ಲಿ ನೆಹರೂ ಅವರ ಪಾತ್ರ ಹಿರಿದು: ಸಿಎಂ ಬೊಮ್ಮಾಯಿ
ಬೆಂಗಳೂರು ನವೆಂಬರ್ 14: ದೇಶವನ್ನು ಕಟ್ಟುವಲ್ಲಿ ನೆಹರೂ ಅವರ ಪಾತ್ರ ಹಿರಿದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ಅವರ 132ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ ನೆಹರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಅವರು ಸ್ವತಂತ್ರ ಹೋರಾಟದಲ್ಲಿ ಹಾಗೂ ಸ್ವಾತಂತ್ರ್ಯದ ನಂತರ ದೇಶವನ್ನು ಕಟ್ಟುವಲ್ಲಿ ಜವಾಹರ್ ಲಾಲ್ ನೆಹರೂ ಅವರ ಪಾತ್ರ ಹಿರಿದು ಎಂದು ಹೇಳಿದರು.
ಇಂದು ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರತಿಮೆಗೆ ನಮನ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಮೊದಲನೇ ಪ್ರಧಾನಮಂತ್ರಿಯಾಗಿ ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತರುವ ಮುಖಾಂತರ ಭಾರತ ಸ್ವಾತಂತ್ರ್ಯದ ನಂತರದ ತನ್ನ ಗುರಿಗಳನ್ನು ಮುಟ್ಟಲು ಭದ್ರ ಅಡಿಪಾಯ ಹಾಕಿದ ಒಬ್ಬ ಶ್ರೇಷ್ಠ ನಾಯಕ. ವಿಶೇಷವಾಗಿ ಭಾರತವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವಲ್ಲಿಯೂ ಅವರ ಪಾತ್ರ ಮಹತ್ವದ್ದು ಎಂದರು. ಮಕ್ಕಳ ಮೇಲಿನ ಅವರ ವಿಶೇಷ ಪ್ರೀತಿಯಿಂದಾಗಿ ಚಾಚಾ ನೆಹರೂ ಎಂಬ ಬಿರಿದು ಬಂದಿದೆ. ಅವರ ಹೆಸರಿನ ಹಲವಾರು ಸಂಸ್ಥೆಗಳು ಭಾರತದ ಉನ್ನತೀಕರಣಕ್ಕೆ ಕಾರಣವಾಗಿದ್ದು, ದೇಶದ ಅಭಿವೃದ್ಧಿಗೆ ಕೆಲಸ ಮಾಡುತ್ತಿರುವುದು ಗಮನಾರ್ಹ ಎಂದರು. ಅವರಿಗೆ ನಮನ ಸಲ್ಲಿಸುವ ಮೂಲಕ ಮತ್ತೊಮ್ಮೆ ದೇಶ ಕಟ್ಟುವ ಕಾರ್ಯಕ್ಕೆ ನಮ್ಮನ್ನು ಸಜ್ಜುಗೊಳಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಉಪಸ್ಥಿತರಿದ್ದರು.
ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಲು ನವೆಂಬರ್ 14 ಅನ್ನು ಮಕ್ಕಳ ದಿನಾಚರಣೆ ಎಂದು ಆಚರಿಸಲಾಗುತ್ತದೆ. 1889 ರಲ್ಲಿ ಜನಿಸಿದ ಜವಹರಲಾಲ್ ನೆಹರೂ ಅವರನ್ನು ಮಕ್ಕಳು ಪ್ರೀತಿಯಿಂದ ಚಾಚಾ ನೆಹರು ಎಂದು ಕರೆಯುತ್ತಿದ್ದರು. ಮಕ್ಕಳ ಮೇಲೆ ಅವರಿಗೆ ವಿಶೇಷವಾದ ಪ್ರೀತಿ, ಕಾಳಜಿ. ಮಕ್ಕಳಿಗಾಗಿಯೇ ಸ್ಥಳೀಯ ಸಿನಿಮಾ ಮಾಡಲು ಮತ್ತು ಪ್ರತಿ ಮಕ್ಕಳ ಮನರಂಜನೆಯ ಹಕ್ಕನ್ನು ಉತ್ತೇಜಿಸಲು ನೆಹರು 1955 ರಲ್ಲಿ ಚಿಲ್ಡ್ರನ್ಸ್ ಫಿಲ್ಮ್ ಸೊಸೈಟಿ ಆಫ್ ಇಂಡಿಯಾವನ್ನು ಸ್ಥಾಪಿಸಿದರು.

ಮಕ್ಕಳ ಮೇಲಿನ ಅವರ ಪ್ರೀತಿಯ ಜೊತೆಗೆ, ರಾಷ್ಟ್ರವನ್ನು ನಿರ್ಮಿಸಲು ಅವರು ನೀಡಿದ ಕೊಡುಗೆಗಾಗಿ ನೆಹರೂ ಅವರನ್ನು ಗೌರವಿಸಲು ಅವರ ಜನ್ಮ ವಾರ್ಷಿಕೋತ್ಸವದ ದಿನವನ್ನು ಸಹ ಈ ದಿನ ಆಚರಿಸಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೆಹರೂ ಅವರನ್ನು ನೆನದು ಮಕ್ಕಳ ದಿನಾಚರಣೆಗೆ ಶುಭಕೋರಿದ್ದಾರೆ. ಇದಲ್ಲೆದೆ ರಾಜ್ಯದ ವಿವಿಧ ನಾಯಕರು ಟ್ವೀಟರ್ ನಲ್ಲಿ ಮಕ್ಕಳ ದಿನಾಚರಣೆ ಶುಭಾಶಯ ಕೋರಿದ್ದಾರೆ.
ದೇಶದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಪ್ರೀತಿಪೂರ್ವಕ ಶುಭಕಾಮನೆಗಳು. #ChildrensDay2021 #JawaharlalNehru pic.twitter.com/xvG4Yprauc
— CM of Karnataka (@CMofKarnataka) November 14, 2021
ದೇಶದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಪ್ರೀತಿಪೂರ್ವಕ ಶುಭಕಾಮನೆಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ನೆಹರೂ ಅವರನ್ನು ನೆನೆದಿದ್ದು ಅವರ ಜನ್ಮಜಯಂತಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಯವರು ನೆಹರೂ ಅವರನ್ನು ನೆನದು ಮಕ್ಕಳ ದಿನಾಚರಣೆಗೆ ಶುಭಕೋರಿದ್ದಾರೆ.
Tributes to Pandit Jawaharlal Nehru Ji on his birth anniversary.
— Narendra Modi (@narendramodi) November 14, 2021
ಸ್ವಾತಂತ್ರ್ಯ ಚಳವಳಿಯ ಮುಂಚೂಣಿ ನಾಯಕ, ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜಯಂತಿಯಂದು, ಅವರ ಸಂಸ್ಮರಣೆಗಳ ಜೊತೆಗೆ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಸದೃಢ, ಸಶಕ್ತ, ಸಮೃದ್ಧ ಭಾರತಕ್ಕಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆ ನಮ್ಮೆಲ್ಲರ ಹೊಣೆಗಾರಿಕೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಶಿಸಿದ್ದಾರೆ.
ಸ್ವಾತಂತ್ರ್ಯ ಚಳವಳಿಯ ಮುಂಚೂಣಿ ನಾಯಕ, ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜಯಂತಿಯಂದು, ಅವರ ಸಂಸ್ಮರಣೆಗಳ ಜೊತೆಗೆ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಸದೃಢ, ಸಶಕ್ತ, ಸಮೃದ್ಧ ಭಾರತಕ್ಕಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆ ನಮ್ಮೆಲ್ಲರ ಹೊಣೆಗಾರಿಕೆ. pic.twitter.com/MHcTvoypx7
— B.S. Yediyurappa (@BSYBJP) November 14, 2021
ಎಲ್ಲಾ ಚಿಕ್ಕ ಮಕ್ಕಳಿಗೆ ಹೃತ್ಪೂರ್ವಕ ಮಕ್ಕಳ ದಿನಾಚರಣೆಯ ಶುಭಾಶಯಗಳು! ಮಕ್ಕಳಿಗೆ ಆ ಮಾಡುವುದಕ್ಕಿಂದ ಶಿಕ್ಷಣ ನೀಡಿ ದೇಶದ ಆಸ್ತಿಯಾಗುವಂತೆ ಮಾಡೋಣ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.
Recommended Video
Heartiest Children's Day wishes to all little kids! Let us give children education rather than property, let us make them wealth of the nation. pic.twitter.com/FZWvremiRZ
— Sadananda Gowda (@DVSadanandGowda) November 14, 2021
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ











Click it and Unblock the Notifications