ಅನುಪಮಾ ಶೆಣೈಗೆ ನ್ಯಾಯ ಸಿಗಬೇಕಿದೆ? ಸರ್ಕಾರಕ್ಕೆ ಜನತೆ ಸವಾಲ್!
ಬೆಂಗಳೂರು, ಜೂನ್ 05: ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಸಬ್ ವಿಭಾಗದ ಡಿವೈಎಸ್ಪಿ ಅನುಪಮಾ ಶೆಣೈ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಕಣ್ಮರೆಯಾಗಿದ್ದ ಅನುಪಮಾ ಅವರು ಫೇಸ್ ಬುಕ್ ನಲ್ಲಿ ಪ್ರತ್ಯಕ್ಷವಾಗಿದ್ದಾರೆ. ಲಿಕ್ಕರ್ ಲಾಬಿಗೆ ಮಣಿದಿರುವ ಸಿದ್ದರಾಮಯ್ಯಅವರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, 'ರಮ್' ರಾಜ್ಯ ಎಂದು ಹೇಳಿದ್ದಾರೆ. ಈ ನಡುವೆ ಅನುಪಮಾ ಶೆಣೈ ಅವರಿಗೆ ನ್ಯಾಯ ಸಿಗಬೇಕಿದೆ ಎಂದು ಆನ್ ಲೈನ್ ಅಭಿಯಾನ ಆರಂಭವಾಗಿದೆ.
ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರ ಹೆಸರಿನ ಭವನದ ಪಕ್ಕದಲ್ಲಿ ವೈನ್ ಶಾಪ್ ಕಟ್ಟುವುದನ್ನು ವಿರೋಧಿಸಿದ್ದ ಅನುಪಮಾ ಅವರು ಇತ್ತೀಚೆಗೆ ಶಾಪ್ ಓನರ್ ರವಿ ಹಾಗೂ ಇನ್ನಿತರರನ್ನು ಬಂಧಿಸಿದ್ದರು. ಸಿಆರ್ ಪಿಸಿ 107 ಅನ್ವಯ ಅವರನ್ನು ಶನಿವಾರದಂದು ತಾಲೂಕು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು.

ಆದರೆ, ಜನಕ್ಕೆ ಒಳ್ಳೆಯದು ಮಾಡಲು ಹೊರಟ ಅನುಪಮಾ ಅವರ ವಿರುದ್ಧವೇ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದರಿಂದ ಮನನೊಂದ ಅನುಪಮಾ ಅವರು ಜಿಲ್ಲಾ ಎಸ್ಪಿ ಆರ್ ಚೇತನ್ ಅವರಿಗೆ ರಾಜೀನಾಮೆ ಸಲ್ಲಿಸಿ ಯಾರ ಸಂಪರ್ಕಕ್ಕೂ ಸಿಗದೆ ಕಣ್ಮರೆಯಾಗಿದ್ದರು. [ಅನುಪಮಾ ಶೆಣೈ ಬಗ್ಗೆ ಒಂದಿಷ್ಟು]
ಅನುಪಮಾ ಶೆಣೈ ಅವರು ಭಾನುವಾರ ತಮ್ಮ ಅಳಲನ್ನು ತಮ್ಮ ಫೇಸ್ಬುಕ್ ಅಕೌಂಟ್ ನಲ್ಲಿ ತೋಡಿಕೊಂಡಿದ್ದಾರೆ.ಈಗ ಪ್ರೊಫೈಲ್ ಪಿಕ್ಚರ್ ಕೂಡಾ ಬದಲಾಯಿಸಿಕೊಂಡಿದ್ದಾರೆ. "ಯಾವಾಗ ಅನ್ಯಾಯವೇ ಕಾನೂನಾಗುತ್ತದೆ, ಆಗ ಬಂಡಾಯವೇಳುವುದು ನಮ್ಮ ಕರ್ತವ್ಯ ವಾಗುತ್ತದೆ" (when injustice become the law, rebellion becomes the duty) ಎಂಬ ಚಿತ್ರ ಹಾಕಿದ್ದಾರೆ. ಶೆಣೈ ಅವರ ಬೆಂಬಲಕ್ಕೆ ಅನೇಕ ಮಂದಿ ನಿಂತಿದ್ದಾರೆ.
ಅನುಪಮಾ ಶೆಣೈಗೆ ನ್ಯಾಯ ಸಿಗಬೇಕಿದೆ? ಜನತೆ ಸವಾಲ್!
ಈ ಹಿಂದೆ ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ ಅವರನ್ನು ಸರ್ಕಾರ ವಿಜಯಪುರದ ಇಂಡಿಯ ಡಿವೈಎಸ್ ಪಿಯಾಗಿ ವರ್ಗಾವಣೆ ಮಾಡಿರುವುದು ಭಾರೀ ವಿವಾದಕ್ಕೆ ಈಡಾಗಿತ್ತು. ಸರ್ಕಾರದ ನಿರ್ಧಾರ ವಿರೋಧಿಸಿ ಕೂಡ್ಲಿಗಿ ಜನತೆ ಬಂದ್ ಗೆ ಕರೆ ನೀಡಿದ್ದರು. ಆಗಲೂ ಸಾಮಾಜಿಕ ಜಾಲತಾಣಗಳಲ್ಲಿಯೂ ಅನುಪಮಾ ಶೆಣೈ ಅವರಿಗೆ ನೈತಿಕ ಬೆಂಬಲ ವ್ಯಕ್ತವಾಗಿತ್ತು.[ಕೂಡ್ಲಗಿ ಡಿವೈಎಸ್ಪಿ ಅನುಪಮಾ ಶೆಣೈ ದಿಢೀರ್ ರಾಜೀನಾಮೆ]
ಮೂಲತಃ ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪದ ಫಣಿಯೂರಿನವರಾದ ಅನುಪಮಾ ಅವರ ತಂದೆ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದರೆ, ತಾಯಿ ಬಿಡಿ ಕಟ್ಟುವ ಮೂಲಕ ಜೀವನೋಪಾಯ ಸಾಗಿಸುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications