ವಾಟ್ಸಪ್ನಲ್ಲಿ ಬಂದಿದ್ದೆಲ್ಲ ನಿಜವಲ್ಲ ಪಾಟೀಲ್ರೇ! ಪ್ರಧಾನಿ ಮೋದಿ ಎಂದು ವಿಡಿಯೋ ಹಂಚಿಕೊಂಡು ಟ್ರೋಲ್ ಆದ ಮಾಜಿ ಸಚಿವ
ಈಗೇನಿದ್ರು ಸೋಷಿಯಲ್ ಮೀಡಿಯಾ ಕಾಲ, ವಾಟ್ಸಾಪ್ನಲ್ಲಿ ದಿನಕ್ಕೆ ಸಾವಿರ ಸಾವಿರ ವಿಡಿಯೋಗಳು, ಸುದ್ದಿಗಳು ಶೇರ್ ಆಗುತ್ತವೆ. ಅದರಲ್ಲಿ ಕೆಲವು ನಿಜವಾಗಿದ್ದರೆ, ಇನ್ನೂ ಕೆಲವು ಸುಳ್ಳಾಗಿರುತ್ತವೆ. ಕೆಲವೊಮ್ಮೆ ಎಂತಹವರೂ ಕೂಡ ಈ ನಕಲಿ ಸುದ್ದಿಗಳನ್ನು ನಂಬಿ ಯಾಮಾರುತ್ತಾರೆ, ಈಗ ಮಾಜಿ ಸಚಿವ ಬಿಸಿ ಪಾಟೀಲ್ ಕೂಡ ಇಂತಹ ಎಡವಟ್ಟು ಮಾಡಿಕೊಂಡಿದ್ದಾರೆ.
ಮಾಜಿ ಸಚಿವ, ಬಿಜೆಪಿ ನಾಯಕ ಬಿಸಿ ಪಾಟೀಲ್ ಸದ್ಯ ಮೋದಿ ಅವರದ್ದು ಎಂದು ಹೇಳಿರುವ ವಿಡಿಯೋ ಹಂಚಿಕೊಂಡಿದ್ದು, ಟ್ರೋಲ್ಗೆ ಒಳಗಾಗಿದ್ದಾರೆ. ಹಲವರು ಬಿಸಿ ಪಾಟೀಲ್ ಹಂಚಿಕೊಂಡಿರುವ ವಿಡಿಯೋಗೆ ಕಾಮೆಂಟ್ ಮಾಡಿದ್ದು ವಾಟ್ಸಾಪ್ನಲ್ಲಿ ಬಂದಿದ್ದನ್ನೆಲ್ಲ ನಂಬಬೇಡಿ ಎಂದು ಸಲಹೆ ನೀಡಿದ್ದಾರೆ.

ವಿಡಿಯೋದಲ್ಲಿ ಏನಿದೆ?
ವ್ಯಕ್ತಿಯೊಬ್ಬರು ಕಾಲ್ಗಳನ್ನು ಮೇಲೆತ್ತಿ ಕೈಯಿಂದ ನಡೆಯುತ್ತಾ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕುತ್ತಿರುವ ವಿಡಿಯೋ ಹಂಚಿಕೊಂಡಿರುವ ಬಿಸಿ ಪಾಟೀಲ್, "ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅವರು 26 ವರ್ಷ ವಯಸ್ಸಿನವರಾಗಿದ್ದಾಗ, ಅವರು ಕೇದಾರನಾಥವನ್ನು ಹೇಗೆ ಪ್ರದಕ್ಷಿಣೆ ಮಾಡಿದರು, ನೀವೆಲ್ಲರೂ ಒಮ್ಮೆ ನೋಡಿ." ಎಂದು ಟ್ವೀಟ್ ಮಾಡಿದ್ದಾರೆ.
ಭಾರಿ ಟ್ರೋಲ್ ಮಾಡಿದ ನೆಟ್ಟಿಗರು
ಬಿಸಿ ಪಾಟೀಲ್ ಹಂಚಿಕೊಂಡಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದು, ಹಲವು ನೆಟ್ಟಿಗರು ಮಾಜಿ ಸಚಿವರನ್ನು ಸುಳ್ಳು ಮಾಹಿತಿ ಹಂಚಿಕೊಂಡಿರುವುದಕ್ಕೆ ಟೀಕಿಸಿದ್ದಾರೆ. ಪ್ರತಿಕ್ರಿಯೆ ನೀಡಿರುವ ಒಬ್ಬರು, ಈ ರೀತಿ ಸರಿಯಾಗಿ ಮಾಹಿತಿ ಇಲ್ಲದೆ, ಸುಳ್ಳು ಸುದ್ದಿಯನ್ನು ಹಂಚಬೇಡಿ ಎಂದು ಬುದ್ದಿ ಹೇಳಿದ್ದಾರೆ.
ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ, ಅವರು 26 ವರ್ಷ ವಯಸ್ಸಿನವರಾಗಿದ್ದಾಗ, ಅವರು ಕೇದಾರನಾಥವನ್ನು ಹೇಗೆ ಪ್ರದಕ್ಷಿಣೆ ಮಾಡಿದರು, ನೀವೆಲ್ಲರೂ ಒಮ್ಮೆ ನೋಡಿ. pic.twitter.com/YnQekOLSH9
— B C Patil (@bcpatilkourava) January 6, 2024
ರಾಜ್ಯದ ಮಾಜಿ ಆರಕ್ಷಕರಾಗಿ, ಜನಪ್ರತಿನಿಧಿಯಾಗಿ, ಸಚಿವರಾಗಿ ಇಂಥ ಸುಳ್ಳು ಸುದ್ದಿಯನ್ನ ಹಂಚಿಕೊಳ್ಳುವುದು ಶೋಭೆಯಲ್ಲ ಎಂದು ಮತ್ತೊಬ್ಬರು ಬಿಸಿ ಪಾಟೀಲ್ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಮತ್ತೊಬ್ಬರು ಟ್ವೀಟ್ ಮಾಡಿ, ಪಾಟೀಲ್ರೆ ಅದು ಫೇಕ್ ವಿಡಿಯೋ ಕಣ್ರಿ, ವಾಟ್ಸಾಪ್ನಲ್ಲಿ ಕಳಿಸಿದವನಿಗೆ ಉಗಿಯಿರಿ ಎಂದಿದ್ದಾರೆ. ಮತ್ತೊಬ್ಬರು "ಪಾಟೀಲ್ರೆ ಪೂರ್ತಿ ವಿಡಿಯೋ ಇಲ್ಲಿದೆ ಫ್ರೀ ಮಾಡ್ಕೊಂಡ್ ಒಮ್ಮೆ ನೋಡಿ. ಈ ಟ್ವೀಟ್ ಡಿಲಿಟ್ ಮಾಡಿದ್ರೆ ಅಷ್ಟೇ ಮತ್ತೆ" ಎಂದಿದ್ದಾರೆ.
ಬಿಸಿ ಪಾಟೀಲ್ ಟ್ವೀಟ್ಗೆ ಪತ್ರಕರ್ತ ಮೊಹಮ್ಮದ್ ಜುಬೈರ್ ಕೂಡ ಪ್ರತಿಕ್ರಿಯೆ ನೀಡಿದ್ದು, "ಸರ್, ವಾಟ್ಸಾಪ್ ಗ್ರೂಪ್ನಲ್ಲಿ ಬರುವ ಪ್ರತಿಯೊಂದು ವಿಷಯವೂ ನಿಜವಲ್ಲ. ವಿಡಿಯೋದಲ್ಲಿರುವುದು 26 ವರ್ಷದವರಾಗಿದ್ದಾಗ ಪ್ರಧಾನಿ ಮೋದಿ ಅಲ್ಲ.
ಈ ವೀಡಿಯೊ 2021 ರಲ್ಲಿ ಅಂತರಾಷ್ಟ್ರೀಯ ಯೋಗ ದಿನದಂದು ರೆಕಾರ್ಡ್ ಮಾಡಿದ ಕೇದಾರನಾಥ ದೇವಾಲಯದ ಅರ್ಚಕ ಸಂತೋಷ್ ತ್ರಿವೇದಿ ಅವರದ್ದು." ಎಂದು ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications