ಕಾಂಗ್ರೆಸಿಗೆ ಹೋಗಲ್ಲ ಎಂದ 'ಅತೃಪ್ತ' ಸೋಮಣ್ಣ
ಬೆಂಗಳೂರು, ಜನವರಿ 20: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಅಸಮಧಾನಗೊಂಡವರ ಸಾಲಿಗೆ ವಿ. ಸೋಮಣ್ಣ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ರಾಜ್ಯ ಬಿಜೆಪಿಯ 'ರಾಯಣ್ಣ ಬ್ರಿಗೇಡ್' ವಿವಾದದ ಬೆಂಕಿಗೆ ಸೋಮಣ್ನ ಅತೃಪ್ತಿ ತುಪ್ಪ ಸುರಿದಂತಾಗಿದೆ.
ಹಿರಿಯ ಮುಖಂಡ ಹಾಗೂ ಲಿಂಗಾಯುತರ ನಾಯಕ ವಿ. ಸೋಮಣ್ಣ ಯಡಿಯೂರಪ್ಪ ವಿರುದ್ಧ ಅಸಮಧಾನಗೊಂಡಿದ್ದಾರೆ. ತಮ್ಮನ್ನು ಬಿಜೆಪಿಗೆ ಕರೆ ತಂದು ಈಗ ಕೀಳಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂಬುದು ಅವರ ದೂರು ಎನ್ನಲಾಗಿದೆ. ಈ ವಿಚಾರವಾಗಿ ಇಂದು ಸೋಮಣ್ಣ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ಪಡಸಾಲೆಯಿಂದ ಕೇಳಿ ಬರುತ್ತಿದ್ದವು.[ಕಿತ್ತಾಡುತ್ತಿರುವ ಬಿಜೆಪಿ ನಾಯಕರಿಗೆ ನೊಂದ ಕಾರ್ಯಕರ್ತನ ಮುಕ್ತಪತ್ರ]

ಆದರೆ ಇಂದು ಆರ್. ಅಶೋಕ್ ಜತೆ ಮಾತನಾಡಿರುವ "ಸೋಮಣ್ಣ ನಾನು ಕಾಂಗ್ರೆಸ್ಸಿಗೆ ಸೇರುವುದಿಲ್ಲ. ನನಗೆ ಬಿಜೆಪಿ ಎಲ್ಲಾ ಕೊಟ್ಟಿದೆ ನಾನ್ಯಾಕೆ ಬಿಜೆಪಿ ಬಿಡಲಿ. ನನಗೆ ಅಸಮಧಾನ ಇರುವುದು ಯಡಿಯೂರಪ್ಪ ಜತೆಗೆ ಮಾತ್ರ. ನನಗೆ ಹಳೆ ಯಡಿಯೂರಪ್ಪ ಬೇಕು. ಈಗಿನ ಹೊಸ ಯಡಿಯೂರಪ್ಪ ಬೇಡ," ಎಂದಿದ್ದಾರೆ.
ಭೇಟಿ ವೇಳೆ ಆರ್. ಅಶೋಕ್ ಪಕ್ಷ ಬಿಡದಂತೆ ಸೋಮಣ್ಣ ನವರಿಗೆ ಮನವೊಲಿಸಿದ್ದಾರೆ. ತಮ್ಮ ಗೆಳೆಯ ಅಶೋಕ್ ಮಾತಿಗೆ ಸೋಮಣ್ಣ ಒಪ್ಪಿಕೊಂಡು ಬಿಜೆಪಿಯಲ್ಲೇ ಇರಲು ಒಪ್ಪಿದ್ದಾರೆ ಎನ್ನಲಾಗಿದೆ.[ಯಡಿಯೂರಪ್ಪನವರೇ ಹೆಣ್ಣಿನ ಮಾತನ್ನು ಕೇಳಿದ್ರೆ ಸರ್ವನಾಶವಾಗ್ತೀರಾ]
ಮೂಲಗಳ ಪ್ರಕಾರ ಶೋಭಾ ಕರಂದ್ಲಾಜೆ ಮತ್ತು ಸೋಮಣ್ಣ ಇಬ್ಬರ ನಡುವೆ ಸಂಘರ್ಷ ನಡೆದಿದೆ. ಈ ಕಾರಣಕ್ಕೆ ಯಡಿಯೂರಪ್ಪ ಸೋಮಣ್ಣರನ್ನು ಕಡೆಗಣಿಸುತ್ತಿದ್ದಾರೆ ಎನ್ನಲಾಗಿದೆ. ಏನೇ ಆದರೂ ಚುನಾವಣಾ ಸಮಯದಲ್ಲಿಯೇ ಬಿಜೆಪಿ ಒಂದಾದ ಮೇಲೊಂದು ಭಿನ್ನಮತಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುವುದು ಮಾತ್ರ ವಿಪರ್ಯಾಸ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications