Ration Card: ರೇಷನ್ ಕಾರ್ಡ್ದಾರರಿಗೆ ಸಿಹಿ ಸುದ್ದಿ ಕೊಟ್ಟ ಆಹಾರ ಇಲಾಖೆ
ಪಡಿತರ ಚೀಟಿ ತಿದ್ದುಪಡಿ ಮಾಡುವವರಿಗೆ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ಗಡುವು ಮತ್ತೆ ಬದಲಾಗಿದ್ದು, ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ 10ರವರೆಗೆ ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಬಹುದು.
ಪಡಿತರ ಚೀಟಿಯಲ್ಲಿ ಮಾಹಿತಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿತ್ತು.ಆದರೆ ಸೋಮವಾರ ಸರ್ವರ್ ದೋಷದಿಂದ ಹಲವರು ತೊಂದರೆ ಅನುಭವಿಸಿದರು. ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿ, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಆಗಸ್ಟ್ 23 ರಂದು ಒಂದು ದಿನ ವಿಸ್ತರಣೆ ಮಾಡಲಾಗಿದೆ.

ಇದೀಗ, ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿಗಳನ್ನು ಸೆಪ್ಟೆಂಬರ್ 1 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸ್ವೀಕರಿಸಲಾಗುವುದು ಎಂದು ಆಹಾರ ಇಲಾಖೆ ತಿಳಸಿದೆ.
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಫಲಾನುಭವಿಗಳು ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ. ಆಗಸ್ಟ್ 23ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಸರ್ವರ್ ಸಮಸ್ಯೆ ಇರುವ ಕಾರಣ ಹಂತ ಹಂತವಾಗಿ ಗ್ರಾಹಕರಿಗೆ ಅವಕಾಶ ನೀಡಲಾಗುತ್ತದೆ. ಆನ್ಲೈನ್ ಅಥವಾ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ವಿಳಾಸ, ಬದಲಾವಣೆ ಮಾಡಲು ಅರ್ಜಿ ಸಲ್ಲಿಸಬಹುದು.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಿದ್ದ ಹಿನ್ನಲೆಯಲ್ಲಿ ಏಪ್ರಿಲ್-ಮೇನಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್ ವಿತರಣೆ, ಹೆಸರು ತಿದ್ದುಪಡಿಗೆ ಬ್ರೇಕ್ ಬಿದ್ದಿತ್ತು. ಹೊಸ ಸರ್ಕಾರ ಅಧಿಕಾರಕ್ಕೆ ಬಂದರೂ, ನಾಲ್ಕೂವರೆ ತಿಂಗಳಿನಿಂದ ತಾತ್ಕಾಲಿಕ ಸ್ಥಗಿತಕಾರ್ಯ ಮುಂದುವರೆಸಲಾಗಿತ್ತು. ಈಗ ತಿದ್ದುಪಡಿಗೆ ಮಾತ್ರ ಅವಕಾಶ ನೀಡಿದ್ದು, ಹೊಸ ಕಾರ್ಡ್ ವಿತರಣೆ ಯಾವಾಗ ಎಂದು ಸರ್ಕಾರ ಇನ್ನೂ ತಿಳಿಸಿಲ್ಲ.
ಹೊಸ ಪಡಿತರ ಚೀಟಿಗೆ ಅರ್ಜಿ ಸ್ವೀಕಾರ ತಡ
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ವಿತರಣೆ ಸ್ಥಗಿತವಾಗಿದ್ದು, ಶೀಘ್ರದಲ್ಲೇ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡುವ ಸಾಧ್ಯತೆ ಇದೆ. 2017ರಿಂದ ಸಲ್ಲಿಕೆಯಾಗಿರುವ ಬಿಪಿಎಲ್ ಕಾರ್ಡ್ ಅರ್ಜಿಗಳನ್ನು ಪರಿಶೀಲಿಸಿ, ಕಾರ್ಡ್ ಹಂಚಿಕೆ ವಿತರಿಸುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ ಭರವಸೆ ನೀಡಿದ್ದಾರೆ.
2017 ರಿಂದ ರಾಜ್ಯದಲ್ಲಿ 3.90 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿಲಾಗಿದೆ. ಬಿಪಿಎಲ್ ಕಾರ್ಡ್ಗಳನ್ನು ಎರಡು ಗುಂಪುಗಳಾಗಿ ವಿತರಿಸಲು ಪ್ರಯೋಗ ಮಾಡುವುದಾಗಿ ಹೇಳಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications