ಎನ್ ಡಿಎ ಅಧಿಕಾರಕ್ಕೆ ಬಂದ್ರೆ ರಾಜ್ಯಪಾಲರು ಮನೆಗೆ
ಬೆಂಗಳೂರು, ಮೇ.6 : ಲೋಕಸಭೆ ಚುನಾವಣೆ ಮುಗಿಯುತ್ತ ಬಂದಿದೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ. ಕೇಂದ್ರದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕರ್ನಾಟಕ ಸೇರಿ ಹಲವು ರಾಜ್ಯಗಳ ರಾಜ್ಯಪಾಲರು ಬದಲಾವಣೆಯಾಗುವ ಸಾಧ್ಯತೆ ಇದೆ.
ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿರುವ ಕನಿಷ್ಠ ಅರ್ಧ ಡಜನ್ ರಾಜ್ಯಪಾಲರ ಬದಲಾವಣೆಯಾಗಲಿದೆ. ರಾಜಸ್ಥಾನ ರಾಜ್ಯಪಾಲೆ ಮರ್ಗಾರೆಟ್ ಆಳ್ವ, ಮಹಾರಾಷ್ಟ್ರದ ಶಂಕರನಾರಾಯಣ, ಗುಜರಾತ್ ನ ಕಮಲಾ ಬೆನಿವಾಲ್, ಜಾರ್ಖಂಡ್ ನ ಸಹೀದ್ ಅಹ್ಮದ್, ಕೇರಳದ ಶೀಲಾದೀಕ್ಷಿತ್ ಮತ್ತು ಪಂಜಾಬ್ ನ ಶಿವರಾಜ್ ಪಾಟೀಲ್ ಮತ್ತು ಕರ್ನಾಟಕ ಎಚ್.ಆರ್.ಭಾರದ್ವಾಜ್ ಅವರು ಬದಲಾವಣೆಯಾಗಲಿದ್ದಾರೆ. [ರಾಜ್ಯಪಾಲರ ಬದಲಾವಣೆಗೆ ಬಿಜೆಪಿ ಮನವಿ]

ಕರ್ನಾಟಕದ ರಾಜ್ಯಪಾಲರು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಸರ್ಕಾರದೊಂದಿಗೆ ಸದಾ ಸಂಘರ್ಷಕ್ಕೆ ಇಳಿದಿದ್ದರು. ಸಾರ್ವಜನಿಕವಾಗಿ ಸರ್ಕಾರದ ಆಡಳಿತ ವೈಖರಿಯನ್ನು ಟೀಕಿಸುವ, ಚಾಟಿ ಬೀಸುವ ಕೆಲಸ ಮಾಡುತ್ತಿದ್ದರು. ಆದ್ದರಿಂದ ಎಚ್.ಆರ್.ಭಾರದ್ವಾಜ್ ಮೇಲೆ ಬಿಜೆಪಿ ನಾಯಕರಿಗೆ ಅಸಮಾಧಾನವಿದೆ.
ಸದ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ರಾಜ್ಯಪಾಲರ ಟೀಕೆ-ಟಿಪ್ಪಣಿಗಳು ನಿಂತಿಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೇಲೆ ಅವರು ಈಗಾಲೂ ಚಾಟಿ ಬೀಸುತ್ತಿದ್ದಾರೆ. ಆದ್ದರಿಂದ ರಾಜ್ಯಪಾಲರನ್ನು ಬದಲಾವಣೆ ಮಾಡುವ ಮಾತು ದೆಹಲಿ ವಲಯದಿಂದಲೇ ಕೇಳಿಬರುತ್ತಲಿದೆ. [ಸಿಎಂ ಸಿದ್ದು ಕಿವಿ ಹಿಂಡಿದ ರಾಜ್ಯಪಾಲರು]
ಹಿಂದೆಯೂ ಆಗಿತ್ತು : ಹೊಸ ಸರ್ಕಾರ ಬಂದ ನಂತರ ರಾಜ್ಯಪಾಲರು ಬದಲಾವಣೆ ಆಗುವುದು ಹೊಸದೇನಲ್ಲ ಹಿಂದೆಯೂ ಈ ರೀತಿ ನಡೆದಿತ್ತು. 2004ರಲ್ಲಿ ಅಧಿಕಾರಕ್ಕೆ ಬಂದ ಯುಪಿಎ ಸರ್ಕಾರ, ಆರ್ಎಸ್ಎಸ್ ಹಿನ್ನೆಲೆಯ ಉತ್ತರ ಪ್ರದೇಶ ರಾಜ್ಯಪಾಲ ವಿಷ್ಣುಕಾಂತ್ ಶಾಸ್ತ್ರಿ, ಗುಜರಾತ್ ನ ಕೈಲಾಸಪತಿ ಮಿಶ್ರಾ, ಗೋವಾದ ಬಾಬು ಪರಮಾನಂದ ಅವರನ್ನು ಬದಲಾವಣೆ ಮಾಡಿ ಬಿಜೆಪಿ ವಿರುದ್ಧ ಸೇಡು ತೀರಿಸಿಕೊಂಡಿತ್ತು.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications