ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೈದಿಗಳ ಬಿಡುಗಡೆಗೆ ಹೊಸ ಮಾರ್ಗಸೂಚಿ

|
Google Oneindia Kannada News

ಬೆಂಗಳೂರು, ಜುಲೈ 20 : ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಗೂ ವಯೋವೃದ್ಧ ಜೀವಾವಧಿ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಗೆ ಮುನ್ನವೇ ಬಿಡುಗಡೆ ಮಾಡುವ ಮಾರ್ಗಸೂಚಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಕೈದಿಗಳ ಬಿಡುಗಡೆಗೆ ಅನುಕೂಲವಾಗುವಂತೆ ರಚಿಸಿದ್ದ ನೂತನ ಮಾರ್ಗಸೂಚಿಗಳಿಗೆ ಅನುಮೋದನೆ ನೀಡಲಾಯಿತು.[ಕಲಬುರಗಿ ಜೈಲಿನ ಗೋಡೆ ಕೊರೆದು ನಾಲ್ವರು ಕೈದಿಗಳು ಪರಾರಿ]

jail

ನೂತನ ಮಾರ್ಗಸೂಚಿಗಳಂತೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆಯ ಪರಿಚ್ಛೇಧ 433 ಎ ಅನ್ವಯ 14 ವರ್ಷಗಳ ಜೀವಾವಧಿ ಶಿಕ್ಷೆ ಪೂರ್ಣಗೊಳಿಸಿರುವ ಕೈದಿಗಳನ್ನು ಸನ್ನಡತೆಯ ಆಧಾರದ ಮೇರೆಗೆ ಬಿಡುಗಡೆ ಮಾಡಲು ಪರಿಗಣಿಸಬಹುದಾಗಿದೆ.[ಪುನಃ ಜೈಲಿಗೆ ಹಾಕಿ ಎನ್ನುವ ಮೈಸೂರು ಮಹಿಳೆ ಗೋಳು ಏನು?]

ಈ ಪರಿಚ್ಛೇಧದ ವ್ಯಾಪ್ತಿಗೆ ಒಳಪಡದ 14 ವರ್ಷಗಳ ಜೀವಾವಧಿ ಶಿಕ್ಷೆಗೆ ಒಳಪಟ್ಟಿರುವ ಪುರುಷ ಕೈದಿಯು ಶಿಕ್ಷಾ ಅವಧಿಯಲ್ಲಿ ಯಾವುದೇ ಕಡಿತವಿಲ್ಲದೆಯೇ ಸತತ 10 ವರ್ಷಗಳ ಕಾರಾಗೃಹ ವಾಸವನ್ನು ಪೂರ್ಣಗೊಳಿಸಿದ್ದಲ್ಲಿ ಹಾಗೂ ಮಹಿಳಾ ಕೈದಿ ಶಿಕ್ಷಾ ಏಳು ವರ್ಷ ಕಾಲ ಕಾರಾಗೃಹ ವಾಸವನ್ನು ಪೂರ್ಣಗೊಳಿಸಿದ್ದಲ್ಲಿ ಅಂತಹ ಕೈದಿಗಳನ್ನು ಅವಧಿಗೆ ಮೊದಲೇ ಬಿಡುಗಡೆಗೆ ಪರಿಗಣಿಸಬಹುದು.[ಮೈಸೂರಿನಲ್ಲಿ ಸೆಂಟ್ರಲ್ ಜೈಲು ಕಟ್ಟಲು ಜಾಗ ಬೇಕಾಗಿದೆ]

ಶಿಕ್ಷಾ ಅವಧಿಯಲ್ಲಿ ಕಡಿತವಿದ್ದರೂ 65 ವರ್ಷ ವಯೋಮಾನ ದಾಟಿರುವ 14 ವರ್ಷಗಳ ವಾಸ್ತವ ಶಿಕ್ಷೆಯನ್ನು ಅನುಭವಿಸಿರುವ ಜೀವಾವಧಿ ಶಿಕ್ಷೆಗೆ ಒಳಪಟ್ಟಿರುವ ಪುರುಷ ಕೈದಿಗಳನ್ನು ಹಾಗೂ 60 ವರ್ಷ ವಯೋಮಾನ ದಾಟಿರುವ 12 ವರ್ಷಗಳ ವಾಸ್ತವ ಶಿಕ್ಷೆಯನ್ನು ಅನುಭವಿಸಿರುವ ಜೀವಾವಧಿ ಶಿಕ್ಷೆಗೆ ಒಳಪಟ್ಟಿರುವ ಮಹಿಳಾ ಕೈದಿಗಳನ್ನು ಬಿಡುಗಡೆಗೆ ಪರಿಗಣಿಸಬಹುದಾಗಿದೆ.

ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿಗಳನ್ನು ರಚಿಸುವಂತೆ ಸುಪ್ರೀಂಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ನೂತನ ಮಾರ್ಗಸೂಚಿ ರಚನೆ ಮಾಡಲಾಗಿದೆ.

English summary
In a cabinet meeting led by Karnataka Chief Minister Siddaramaiah cleared a new set of guidelines for release of prisoners. Meeting held on July 20, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X