ದೀಪಾವಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ: ಹಸಿರು ಪಟಾಕಿಗೆ ಮಾತ್ರ ಅವಕಾಶ
ಬೆಂಗಳೂರು ಅಕ್ಟೋಬರ್ 30: ದೀಪದಿಂದ ದೀಪ ಹಚ್ಚೋ ದೀಪಾವಳಿ ಹಬ್ಬ ಬಂದೇ ಬಿಡ್ತು. ಕೊರೊನಾ ಕಾರಣದಿಂದ ಸುಮಾರು ಎರಡು ವರ್ಷವೂ ದೀಪಾವಳಿ ಹಬ್ಬವನ್ನು ಬಹುತೇಕ ಜನರು ಆಚರಿಸಲಾಗಲಿಲ್ಲ. ಆದರೀಗ ಅಧಿಕ ಜನ ದೀಪಾವಳಿ ಹಬ್ಬವನ್ನು ಆಚರಿಸಲು ಕಾತುರದಿಂದ ಕಾಯುತ್ತಿದ್ದಾರೆ. ಹೀಗಾಗಿ ಈ ಬಾರಿ ದೀಪಾವಳಿ ಹಬ್ಬ ಅತ್ಯಂತ ಸಡಗರ ಸಂಭ್ರಮದಿಂದ ಕೂಡಿರುವುದರಲ್ಲಿ ಯಾವ ಅನುಮಾನವೇ ಇಲ್ಲ.
ಆದರೆ ಹಬ್ಬದ ಆಚರಣೆಯಲ್ಲಿ ಮೈಮರೆತು ಅನಾರೋಗ್ಯಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕೊರೊನಾ ಮಾಹಾಮಾರಿ ರಾಜ್ಯದಲ್ಲಿ ಸೃಷ್ಟಿಸಿದ ಅವಾಂತರಗಳಿಂದ ಜನ ಈಗಿನ್ನು ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಒಂದು ದಿನ ಹಬ್ಬದ ಸಡಗರದಲ್ಲಿ ಮೈಮರೆತು ಅಪತ್ತಿಗೆ ಸಿಲುಕಿಕೊಳ್ಳದಿರಲು ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೂ ಹೊಸ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.
ದೀಪಾವಳಿ ಅಂದರೆ ಪಟಾಕಿ ಸಿಡಿಸಿ ಆಚರಿಸುವುದು ಎಲ್ಲೆಡೆ ರೂಢಿಯಲ್ಲಿದೆ. ಆದರೆ ಪರಿಸರ ಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಾತ್ರವಲ್ಲದೇ ಮಾರಾಟಗಾರರೂ ಸಹ ಬೇರೆ ಯಾವ ಪಟಾಕಿಯನ್ನೂ ಮಾರುವಂತಿಲ್ಲ ಎಂದು ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. ನವೆಂಬರ್ 1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು ಎಂದು ರಾಜ್ಯ ಸರ್ಕಾರದಿಂದ ದೀಪಾವಳಿಗೆ ಗೈಡ್ಲೈನ್ಸ್ ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಬೇರೆ ಪಟಾಕಿ ಮಾರಾಟ ಮಾಡುವುದಕ್ಕೆ ಅಥವಾ ಬೇರೆ ಪಟಾಕಿ ಹಚ್ಚಲು ಅವಕಾಶ ಇಲ್ಲ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಪಟಾಕಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೊತೆಗೆ ಬೇರೆ ಪಟಾಕಿಗಳನ್ನು ಹಚ್ಚಲೂ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೆ, ನವೆಂಬರ್ ಒಂದರಿಂದ ಹತ್ತನೇ ತಾರೀಕಿನವರೆಗೆ ಮಾತ್ರ ಹಸಿರು ಪಟಾಕಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ದೀಪಾವಳಿ ಹಬ್ಬಕ್ಕೆ ಮನೆಮಂದಿಯಲ್ಲ ಸೇರಿ ಸಂಬಂಧಿಗಳೊಂದಿಗೆ ಸ್ನೇಹಿತರೊಂದಿಗೆ ಒಗ್ಗಟ್ಟಿನಿಂದ ದೀಪ ಹಚ್ಚುತ್ತಾರೆ. ಆದರೆ ಕೊರೊನಾ ಹಾವಳಿ ಮರುಕಳಿಸುವ ಆತಂಕ ಇರುವುದರಿಂದ ಇದಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಿದ್ದು ಹೆಚ್ಚಿನ ಜನ ಸೇರದಿರಲು ಮನವಿ ಮಾಡಿಕೊಂಡಿದೆ. ನವೆಂಬರ್ 1 ರಿಂದ ನವೆಂಬರ್ 10 ರವರೆಗೆ ಪಟಾಕಿ ಮಾರಾಟಕ್ಕೆ ಅನುಮತಿ ಪಡೆದ ವಿತರಕರು ಗೊತ್ತುಪಡಿಸಿದ ಪ್ರದೇಶಗಳಲ್ಲಿ ಅಂಗಡಿಗಳನ್ನು ಸ್ಥಾಪಿಸಲು ಅನುಮತಿಸಲಾಗುವುದು ಎಂದು ಮಾರ್ಗಸೂಚಿಗಳು ನಿರ್ದಿಷ್ಟಪಡಿಸುತ್ತವೆ.

ಕನ್ನಡ ರಾಜ್ಯೋತ್ಸವ ಆಚರಣೆಗೆ 500 ಜನರಿಗೆ ಮಾತ್ರ ಅವಕಾಶ ನೀಡಿದೆ. ಕನ್ನಡ ರಾಜ್ಯೋತ್ಸವ, ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕನ್ನಡ ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ದೈಹಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗುವುದು.
ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಎಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಣೆಗೆ 500 ಜನರಿಗೆ ಮಾತ್ರ ಅವಕಾಶ ಇರುತ್ತದೆ. ಇದು ಬೆಂಗಳೂರಿಗೆ ಮಾತ್ರ ಸೀಮಿತವಲ್ಲ. ಸಾಮಾಜಿಕ ಅಂತರವಿಲ್ಲದೇ ನಡೆಸುವ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುತ್ತದೆ ಎಂದು ತಿಳಿಸಲಾಗಿದೆ.
ಪ್ರಸ್ತುತ ಇರುವ ಕೊರೊನಾವೈರಸ್ ಪರಿಸ್ಥಿತಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಮಟ್ಟಗಳಿಂದಾಗಿ ಈ ಹಬ್ಬದಂದು ರಾಜಿ ಮಾಡಿಕೊಳ್ಳಬೇಕಾಗಿದೆ. ಹೀಗಾಗಿ ದೀಪಾವಳಿ ಆಚರಿಸುವ ವೇಳೆ ಜನರ ಮಧ್ಯ ಇರುವಾಗ ಮಾಸ್ಕ್ ಹಾಕಿಕೊಳ್ಳುವುದು, ಆಗಾಗ ಹ್ಯಾಂಡ್ ಸ್ಯಾನಿಟೈಸರ್ ಮಾಡಿಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಲಾಗಿದೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications