LPG Connection: ಹೊಸ ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ, ದಾಖಲೆ ಸಲ್ಲಿಕೆ ಹೇಗೆ?
ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಸುವ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) ಗ್ಯಾಸ್ ಏಜೆನ್ಸಿಗಳಿಂದ ಉಜ್ವಲ-3 ಅಡಿಯಲ್ಲಿ ಹೊಸ ಗ್ಯಾಸ್ ಸಂಪರ್ಕ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟದಲ್ಲಿ ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅರ್ಹ ಫಲಾನುಭವಿಗಳು ಏಜೆನ್ಸಿಗಳಿಗೆ ನೇರವಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಈ ಸೌಕರ್ಯ ಪಡೆಯಬಹುದು.
18 ವರ್ಷ ಮೇಲ್ಪಟ್ಟ ವಯಸ್ಕ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಕುಟುಂಬದಲ್ಲಿ ಈಗಾಗಲೇ ಗ್ಯಾಸ್ ಸಂಪರ್ಕ ಇದ್ದರೆ, ಹೊಸ ಸಂಪರ್ಕ ಸಿಗುವುದಿಲ್ಲ. ಕುಟುಂಬದ ಯಾವುದೇ ಸದಸ್ಯರಿಗೆ ತಿಂಗಳಿಗೆ ₹10,000 ಆದಾಯ ಇರಬಾರದು. ಸರ್ಕಾರಿ ಉದ್ಯೋಗಿಗಳಿಗೆ ಈ ಸೌಲಭ್ಯವಿಲ್ಲ. ಸುಮಾರು 2.5 ಎಕರೆ ನೀರಾವರಿ ಅಥವಾ 5 ಎಕರೆ ಕೃಷಿ ಭೂಮಿ, ಕಿಸಾನ್ ಕ್ರೆಡಿಟ್ ಕಾರ್ಡ್ನಲ್ಲಿ ₹50,000ಕ್ಕಿಂತ ಹೆಚ್ಚು ಸಾಲ ಇರುವಂತಿಲ್ಲ. 30 ಚದರ ಅಡಿ ಮನೆ ಅಥವಾ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರಬಾರದು. ಈ ಅರ್ಹತೆಗಳಿರುವ ಬಡ ಮಹಿಳೆಯರು ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸಬಹುದು.

ಅಗತ್ಯ ದಾಖಲೆಗಳು
ಬಿಪಿಎಲ್ ರೇಷನ್ ಕಾರ್ಡ್, ಆಧಾರ್ ಕಾರ್ಡ್, ವಯಸ್ಸು ಪ್ರಮಾಣಪತ್ರ, ಬ್ಯಾಂಕ್ ಪಾಸ್ಬುಕ್ ಫೋಟೋ, ಪಾಸ್ಪೋರ್ಟ್ ಫೋಟೋ, ಪಡಿತರ ಚೀಟಿ, ಕೆವೈಸಿ ಅರ್ಜಿ, ಘೋಷಣೆ ಪತ್ರ ಈ ದಾಖಲೆ ಮೂಲಕ ಸಕಾಲದಲ್ಲಿ ಅರ್ಜಿ ಸಲ್ಲಿಸಬಹುದು. ಪುರುಷರು ಈ ಯೋಜನೆಗೆ ಅರ್ಹರಲ್ಲ.
ಬಡ ಮಹಿಳೆಯರು ತಮ್ಮ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಹಾಗೂ ಎಲ್ಲ ದಾಖಲಾತಿಗಳೊಂದಿಗೆ ನಿಮ್ಮ ಜಿಲ್ಲೆಯಲ್ಲಿ ಹೊಸ ಗ್ಯಾಸ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು. ಈಗಾಗಲೇ ಈ ಸಂಬಂಧ ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಕೊಪ್ಪಳ ಜಿಲ್ಲಾ ಉಜ್ವಲ್ ಸಮಿತಿ (ಡಿವಿಸಿ) ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮಹಿಳಾ ಫಲಾನುಭವಿಗಳಿಗೆ ಮಾತ್ರವೇ ಇದೆ. ಪುರುಷರು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅವಕಾಶವಿಲ್ಲ. 18 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಎಲ್ಪಿಜಿ ಸಿಲಿಂಡರ್ ಸೇವೆಗೆ ಅರ್ಹತೆ ಪಡೆಯಬಹುದು. ಒಂದು ವೇಳೆ ಈಗಾಗಲೇ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನೀವು ಹೊಂದಿದ್ದರೆ, ನಿಮ್ಮ ಅರ್ಜಿ ರದ್ದಾಗಲಿದೆ.
ಇತ್ತೀಚೆಗೆ ವಾಣಿಜ್ಯ ಬಳಕೆ ಸಿಲಿಂಡರ್ ದರ ಕಡಿಮೆಯಾಗಿದೆ. ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 10 ರೂಪಾಯಿವರೆಗೆ ಕಡಿಮೆಯಾಗಿದ್ದು, ಈಗಾಗಲೇ ಜಾರಿಯಲ್ಲಿರುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 25 ಲಕ್ಷ ಹೆಚ್ಚುವರಿ ಎಲ್ಪಿಜಿ ಸಂಪರ್ಕಗಳನ್ನು ನೀಡಲು ಕೇಂದ್ರ ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿದೆ. ಇದರಿಂದ ಹಲವು ಮಹಿಳೆಯರಿಗೆ ಹೊಸ ಎಲ್ಪಿಜಿ ಸಂಪರ್ಕ ಸಿಗಲಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications