ಪ್ರಮಾಣ ವಚನಕ್ಕೆ ಕಾರ್ಯಕ್ರಮಕ್ಕೆ ಸಿದ್ಧತೆ: ಯಾರಿಗೆ ಸಚಿವ ಸ್ಥಾನ?
ಬೆಂಗಳೂರು, ಫೆಬ್ರವರಿ 05: ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜಭವನದಲ್ಲಿ ಭರದ ಸಿದ್ಧತೆ ಆರಂಭವಾಗಿದೆ. 24 ಗಂಟೆ ಒಳಗೆ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ ಸಚಿವರ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.
ರಾಜಭವನದಲ್ಲಿ ಸಕಲ ಸಿದ್ಧತೆ ಭರದಿಂದ ಸಾಗಿದ್ದು, ನಾಳೆ ಪ್ರಮಾಣ ವಚನ ಸ್ವೀಕರಿಸಲಿರುವ ಆಯ್ದ ಶಾಸಕರಿಗೆ ಯಡಿಯೂರಪ್ಪ ಅವರೇ ಖುದ್ದಾಗಿ ಕರೆ ಮಾಡಿ ಪ್ರಮಾಣ ವಚನಕ್ಕೆ ಆಹ್ವಾನಿಸಿದ್ದಾರೆ. ಈ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಸಹ ಬರೆದುಕೊಂಡಿದ್ದಾರೆ.
ಮೂಲಗಳ ಪ್ರಕಾರ ಹನ್ನೆರಡು ಮಂದಿ ಮಾತ್ರವೇ ನಾಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹತ್ತು ಮಂದಿಯಲ್ಲಿ ಕೆಲವರಿಗೆ ಮಾಜಿ ಅನರ್ಹರು ಹಾಗೂ ಮೂಲ ಬಿಜೆಪಿಯ ಕೆಲವರು, ಚುನಾವಣೆ ಸೋತ ಒಬ್ಬಿಬ್ಬರು ಸೇರಿದ್ದಾರೆ.

ಬಿ.ಸಿ.ಪಾಟೀಲ್ ಟ್ವಿಟ್ಟರ್ ಪೋಸ್ಟ್
ಯಡಿಯೂರಪ್ಪ ಅವರು ತಮಗೆ ಕರೆ ಮಾಡಿ ಪ್ರಮಾಣ ವಚನಕ್ಕೆ ಸಿದ್ಧರಾಗಿರುವಂತೆ ಹೇಳಿರುವ ಬಗ್ಗೆ ಬಿ.ಸಿ.ಪಾಟೀಲ್ ಅವರು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ. ಇನ್ನು ಎಸ್.ಟಿ.ಸೋಮಶೇಖರ್, ಗೋಪಾಲಯ್ಯ ಅವರುಗಳು ಭರ್ಜರಿಯಾಗಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

ಸಚಿವ ಸ್ಥಾನ ಪಕ್ಕಾ ಆಗಿರುವವರ ಪಟ್ಟಿ
ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಸೋಮಶೇಖರ್, ನಾರಾಯಣಗೌಡ, ಶಿವರಾಂ ಹೆಬ್ಬಾರ್, ಆನಂದ್ ಸಿಂಗ್, ಕೆ.ಸುಧಾಕರ್, ಬೈರತಿ ಬಸವರಾಜು, ಬಿ.ಸಿ.ಪಾಟೀಲ್, ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ಪಕ್ಕಾ ಆಗಿದೆ. ಈ ಪಟ್ಟಿಯಲ್ಲಿ ಅರವಿಂದ ಲಿಂಬಾವಳಿ ಹಾಗೂ ಯೋಗೇಶ್ವರ್ ಹೆಸರೂ ಸಹ ಇದೆ.

ಹಲವು ಹಿರಿಯರ ಹೆಸರು ಪಟ್ಟಿಯಲ್ಲಿಲ್ಲ
ಶ್ರೀಮಂತ ಪಾಟೀಲ್, ಆರ್.ಶಂಕರ್ ಸೇರಿದಂತೆ ಸೋತ ಅನರ್ಹರ ಹೆಸರು ಪಟ್ಟಿಯಲ್ಲಿ ಇಲ್ಲವೆನ್ನಲಾಗುತ್ತಿದೆ. ಜೊತೆಗೆ ಹಿರಿಯರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಉಮೇಶ್ ಕತ್ತಿ, ಮುರಗೇಶ ನಿರಾಣಿ, ಎಸ್.ಅಂಗಾರ ಸೇರಿ ಹಲವರಿಗೆ ನಿರಾಸೆ ಕಾದಿದೆ.

ನಾಳೆ ಬೆಳಿಗ್ಗೆ ನೂತನ ಸಚಿವರ ಪ್ರಮಾಣ ವಚನ
ನಾಳೆ ಬೆಳಿಗ್ಗೆ ಹೊಸ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ರಾಜಭವನದಲ್ಲಿ ನಡೆಯಲಿದ್ದು, ಎಲ್ಲ ಶಾಸಕರು ಹಾಜರಿರಬೇಕೆಂದು ಯಡಿಯೂರಪ್ಪ ಸೂಚಿಸಿದ್ದಾರೆ. ಆದರೆ ಅತೃಪ್ತರು ಆಗಮಿಸುತ್ತಾರೆಯೋ ಇಲ್ಲವೋ ಎಂಬ ಅನುಮಾನ ಇದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications