ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾಕ್ಕೆ ಹೊಸ ಪದಾಧಿಕಾರಿಗಳ ನೇಮಕ

|
Google Oneindia Kannada News

ಬೆಂಗಳೂರು, ಆಗಸ್ಟ್ 25: ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಅಶೋಕ್ ಗಸ್ತಿ, ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಒಟ್ಟು 16 ಮಂದಿ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

Recommended Video

R Ashwin , ಬೌಲರ್‌ಗಳ ನೆರವಿಗೆ ಹೊಸ ಐಡಿಯಾ ಕೊಟ್ಟಿದ್ದಾರೆ | Oneindia Kannada

ಉಪಾಧ್ಯಕ್ಷರ ಸ್ಥಾನಗಳಿಗೆ ಬೆಂಗಳೂರು ಕೇಂದ್ರ ಭಾಗದ ಗೋವಿಂದರಾಜ್, ಚಿತ್ರದುರ್ಗದ ಸಿದ್ದೇಶ್ ಯಾದವ್, ಶಿವಮೊಗ್ಗದ ಅಶೋಕಮೂರ್ತಿ, ಕಲಬುರಗಿಯ ಶರಣಪ್ಪ ತಳವಾರ, ಬೆಂಗಳೂರು ದಕ್ಷಿಣ ವಿಭಾಗದ ಎ.ಎಚ್. ಬಸವರಾಜು ಮತ್ತು ಮೈಸೂರು ಗ್ರಾಮಾಂತರ ಭಾಗದ ಭೋಜರಾಜ ಕರೋದಿ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿಗೆ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಜನರಿಗೆ ಬರೆದ ಪತ್ರಬಿಜೆಪಿಗೆ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಜನರಿಗೆ ಬರೆದ ಪತ್ರ

ಪ್ರಧಾನ ಕಾರ್ಯದರ್ಶಿಗಳಾಗಿ ಮೈಸೂರು ಗ್ರಾಮಾಂತರ ಭಾಗದ ಸುರೇಶ್ ಬಾಬು, ವಿಜಯಪುರದ ವಿವೇಕಾನಂದ ಡಬ್ಬಿ ಅವರನ್ನು ನೇಮಿಸಲಾಗಿದೆ. ಹಾಸನ ಕೊಟ್ರೇಶ್, ಗದಗದ ರವಿದಂಡಿನ, ಹುಬ್ಬಳ್ಳಿಯ ಸತೀಶ್ ಶೇಜೆವಾಡಕರ್, ಉಡುಪಿಯ ವಿಠಲ ಪೂಜಾರಿ, ಬೆಳಗಾವಿಯ ಕಿರಣ ಜಾಧವ, ಕೊಪ್ಪಳದ ಉಮೇಶ್ ಸಜ್ಜನ್ ಅವರನ್ನು ನೇಮಿಸಲಾಗಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ? ಅಥವಾ ನಾಯಕತ್ವ ಬದಲಾವಣೆ?ರಾಜ್ಯ ಸಚಿವ ಸಂಪುಟ ವಿಸ್ತರಣೆ? ಅಥವಾ ನಾಯಕತ್ವ ಬದಲಾವಣೆ?

New Office Bearers Appointed For Karnataka BJP Backward Classes Morcha

ಬೆಂಗಳೂರು ದಕ್ಷಿಣ ಭಾಗದ ಆರ್. ಗೋವಿಂದ ನಾಯ್ಡು ಅವರನ್ನು ಕೋಶಾಧ್ಯಕ್ಷರು ಮತ್ತು ಜಯದೇವ ಅವರನ್ನು ಕಾರ್ಯಾಲಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಅಶೋಕ್ ಗಸ್ತಿ ಆದೇಶ ಹೊರಡಿಸಿದ್ದಾರೆ.

English summary
Karnataka BJP Backward Classes Morcha President Ashok Gasti appoints 16 new office bearers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X