ಹೊಸ ಶಾಲೆಗಳನ್ನು ತೆರೆಯುವುದು ಇನ್ನುಮುಂದೆ ಸುಲಭವಲ್ಲ!
ಬೆಂಗಳೂರು, ಏಪ್ರಿಲ್ 07: ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ತೆರೆಯುವುದು ಇನ್ನುಮುಂದೆ ಸುಲಭದ ಕೆಲಸವಲ್ಲ. ಶಾಲೆ ತೆರೆಯುವ ಮೊದಲು ವಿದ್ಯಾರ್ಥಿಗಳ ಭದ್ರತೆಗೆ ಒತ್ತು ನೀಡಬೇಕಾಗುತ್ತದೆ.
ಹೊಸ ಶಾಲೆ ತೆರೆಯುವ ಕುರಿತು ಶಿಕ್ಷಣ ಇಲಾಖೆಯ ಮುಂದೆ ಅರ್ಜಿಯನ್ನು ಸಲ್ಲಿಸುವಾಗ ಶಾಲೆಯಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳನ್ನು ಪಟ್ಟಿಮಾಡಬೇಕಿದೆ. ವಿದ್ಯಾರ್ಥಿನಿರಿಗೆ ಭದ್ರತೆ, ಸೈಬರ್ ಸೇಫ್ಟಿ, ದೈಹಿಕ ಹಲ್ಲೆಯಾಗದಂತೆ ನೋಡಿಕೊಳ್ಳುವುದು ಹೀಗೆ ಅನೇಕ ಕ್ರಮಗಳನ್ನು ಪಾಲಿಸಬೇಕಾಗುತ್ತದೆ.
ಯಾರು ಹೊಸ ಶಾಲೆಗಳನ್ನು ತೆರೆಯಲು ಯೋಜನೆಗಳನ್ನು ಹಾಕಿಕೊಂಡಿರುತ್ತಾರೋ ಅವರಿಗೆ ಪ್ರಾಥಮಿಕ ಶಿಕ್ಷಣ ಇಲಾಖೆಯು ಕೆಲವು ಕಠಿಣ ನಿಯಮಗಳನ್ನು ವಿಧಿಸಿದೆ. ಶಾಲೆಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು, ಮಕ್ಕಳ ನೀಡುವ ಕಠಿಣ ಶಿಕ್ಷೆ, ದೈಹಿಕ ಹಲ್ಲೆ, ಆರೋಗ್ಯದ ಕುರಿತು ಭರವಸೆ ನೀಡಬೇಕು. ಜತೆಗೆ ವಾಹನ ವ್ಯವಸ್ಥೆಯನ್ನು ಒದಗಿಸಿಕೊಡಬೇಕು. ಕೆಲವು ಶಾಲೆಗಳಲ್ಲಿ ಶೌಚಾಲಯಗಳು, ಕುಡಿಯುವ ನೀರಿನ ವ್ಯವಸ್ಥೆಯಂತಹ ಮೂಲಭೂತ ಸೌಕರ್ಯಗಳೇ ಇಲ್ಲದಾಗಿದೆ.

ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಾಗ ಆ ಶಾಲೆಯಲ್ಲಿ ಶಿಕ್ಷಕರು ಭದ್ರತೆಗಾಗಿ ಯಾವ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ವಿಚಾರಿಸಬೇಕಿದೆ. ಜತೆಗೆ ಮೂಲಭೂತ ಸೌಕರ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರೆ ಒಳಿತು. ದೈಹಿಕ ಸುರಕ್ಷತೆ ಕುರಿತು ಗಮನಿಸುವುದಾದರೆ ಪ್ರತಿಯೊಂದು ಶಾಲೆಯೂ ಕಾಂಪೌಂಡ್ ಗಳನ್ನು ಹೊಂದಿರಲೇ ಬೇಕು. ಜತೆಗೆ ಶಾಲಾ ಕೊಠಡಿಯಲ್ಲಿ ಬಾಗಲು ಕಿಟಕಿಗಳು ಸುವ್ಯಸ್ಥಿತವಾಗಿರಬೇಕು.
ಇನ್ನು ಲೈಂಗಿಕ ಭದ್ರತೆ ಕುರಿತು ಒಂದನೇ ತರಗತಿಯಿಂದ 12ರವರೆಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳಿಗೆ ತರಬೇತಿ ನೀಡಬೇಕು. ಈ ಎಲ್ಲಾ ವಿಷಯಗಳ ಕುರಿತು ಅರ್ಜಿಯಲ್ಲಿ ನಮೂದಿಸಬೇಕಾಗುತ್ತದೆ. ಇಲಾಖೆಯ ಸಿಬ್ಬಂದಿಗಳು ಶಾಲೆಗೆ ಭೇಟಿ ನೀಡಿದಾಗ ಬೇಕಾದ ದಾಖಲೆಗಳಲ್ಲಿ ಒಂದು ದಾಖಲೆಯನ್ನು ನೀಡಲು ಅಸಮರ್ಥರಾದರೂ ಕೂಡ ಶಾಲೆಯನ್ನು ತೆರೆಯಲು ಪರವಾನಗಿ ನೀಡಲಾಗುವುದಿಲ್ಲ . ಈಗಿರುವ ಶಾಲೆಗಳು ಕೂಡ ವಿದ್ಯಾರ್ಥಿಗಳ ಭದ್ರತೆಗಾಗಿ ಏನೇನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗಮನಿಸಬೇಕಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications