ಹೊಸ ಶಾಲೆಗಳನ್ನು ತೆರೆಯುವುದು ಇನ್ನುಮುಂದೆ ಸುಲಭವಲ್ಲ!
ಬೆಂಗಳೂರು, ಏಪ್ರಿಲ್ 07: ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ತೆರೆಯುವುದು ಇನ್ನುಮುಂದೆ ಸುಲಭದ ಕೆಲಸವಲ್ಲ. ಶಾಲೆ ತೆರೆಯುವ ಮೊದಲು ವಿದ್ಯಾರ್ಥಿಗಳ ಭದ್ರತೆಗೆ ಒತ್ತು ನೀಡಬೇಕಾಗುತ್ತದೆ.
ಹೊಸ ಶಾಲೆ ತೆರೆಯುವ ಕುರಿತು ಶಿಕ್ಷಣ ಇಲಾಖೆಯ ಮುಂದೆ ಅರ್ಜಿಯನ್ನು ಸಲ್ಲಿಸುವಾಗ ಶಾಲೆಯಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳನ್ನು ಪಟ್ಟಿಮಾಡಬೇಕಿದೆ. ವಿದ್ಯಾರ್ಥಿನಿರಿಗೆ ಭದ್ರತೆ, ಸೈಬರ್ ಸೇಫ್ಟಿ, ದೈಹಿಕ ಹಲ್ಲೆಯಾಗದಂತೆ ನೋಡಿಕೊಳ್ಳುವುದು ಹೀಗೆ ಅನೇಕ ಕ್ರಮಗಳನ್ನು ಪಾಲಿಸಬೇಕಾಗುತ್ತದೆ.
ಯಾರು ಹೊಸ ಶಾಲೆಗಳನ್ನು ತೆರೆಯಲು ಯೋಜನೆಗಳನ್ನು ಹಾಕಿಕೊಂಡಿರುತ್ತಾರೋ ಅವರಿಗೆ ಪ್ರಾಥಮಿಕ ಶಿಕ್ಷಣ ಇಲಾಖೆಯು ಕೆಲವು ಕಠಿಣ ನಿಯಮಗಳನ್ನು ವಿಧಿಸಿದೆ. ಶಾಲೆಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು, ಮಕ್ಕಳ ನೀಡುವ ಕಠಿಣ ಶಿಕ್ಷೆ, ದೈಹಿಕ ಹಲ್ಲೆ, ಆರೋಗ್ಯದ ಕುರಿತು ಭರವಸೆ ನೀಡಬೇಕು. ಜತೆಗೆ ವಾಹನ ವ್ಯವಸ್ಥೆಯನ್ನು ಒದಗಿಸಿಕೊಡಬೇಕು. ಕೆಲವು ಶಾಲೆಗಳಲ್ಲಿ ಶೌಚಾಲಯಗಳು, ಕುಡಿಯುವ ನೀರಿನ ವ್ಯವಸ್ಥೆಯಂತಹ ಮೂಲಭೂತ ಸೌಕರ್ಯಗಳೇ ಇಲ್ಲದಾಗಿದೆ.

ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಾಗ ಆ ಶಾಲೆಯಲ್ಲಿ ಶಿಕ್ಷಕರು ಭದ್ರತೆಗಾಗಿ ಯಾವ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ವಿಚಾರಿಸಬೇಕಿದೆ. ಜತೆಗೆ ಮೂಲಭೂತ ಸೌಕರ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರೆ ಒಳಿತು. ದೈಹಿಕ ಸುರಕ್ಷತೆ ಕುರಿತು ಗಮನಿಸುವುದಾದರೆ ಪ್ರತಿಯೊಂದು ಶಾಲೆಯೂ ಕಾಂಪೌಂಡ್ ಗಳನ್ನು ಹೊಂದಿರಲೇ ಬೇಕು. ಜತೆಗೆ ಶಾಲಾ ಕೊಠಡಿಯಲ್ಲಿ ಬಾಗಲು ಕಿಟಕಿಗಳು ಸುವ್ಯಸ್ಥಿತವಾಗಿರಬೇಕು.
ಇನ್ನು ಲೈಂಗಿಕ ಭದ್ರತೆ ಕುರಿತು ಒಂದನೇ ತರಗತಿಯಿಂದ 12ರವರೆಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳಿಗೆ ತರಬೇತಿ ನೀಡಬೇಕು. ಈ ಎಲ್ಲಾ ವಿಷಯಗಳ ಕುರಿತು ಅರ್ಜಿಯಲ್ಲಿ ನಮೂದಿಸಬೇಕಾಗುತ್ತದೆ. ಇಲಾಖೆಯ ಸಿಬ್ಬಂದಿಗಳು ಶಾಲೆಗೆ ಭೇಟಿ ನೀಡಿದಾಗ ಬೇಕಾದ ದಾಖಲೆಗಳಲ್ಲಿ ಒಂದು ದಾಖಲೆಯನ್ನು ನೀಡಲು ಅಸಮರ್ಥರಾದರೂ ಕೂಡ ಶಾಲೆಯನ್ನು ತೆರೆಯಲು ಪರವಾನಗಿ ನೀಡಲಾಗುವುದಿಲ್ಲ . ಈಗಿರುವ ಶಾಲೆಗಳು ಕೂಡ ವಿದ್ಯಾರ್ಥಿಗಳ ಭದ್ರತೆಗಾಗಿ ಏನೇನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗಮನಿಸಬೇಕಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications