ಬಿಸಿಲಿನ ತಾಪ: ರಾಜ್ಯದ ಸರ್ಕಾರಿ ಕಚೇರಿಗಳ ಕೆಲಸದ ಅವಧಿ ಬದಲು!
ಬೆಂಗಳೂರು, ಏಪ್ರಿಲ್ 11: ಕರ್ನಾಟಕದಲ್ಲಿ ಬಿಸಿಲಿನ ತಾಪಕ್ಕೆ ಜನರು ಮನೆಗಳಿಂದ ಹೊರ ಬಾರದಂಥ ಸ್ಥಿತಿ ನಿರ್ಮಾಣವಾಗಿದೆ. ರಣ ಬಿಸಿಲು ಹೆಚ್ಚಾಗುತ್ತಿರುವ ಹಿನ್ನೆಲೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ನೌಕರರ ಕೆಲಸದ ಸಮಯವನ್ನು ಬದಲಾಯಿಸಲಾಗಿದೆ.
ಏಪ್ರಿಲ್ 12ರಿಂದ ಹೊಸ ವೇಳಾಪಟ್ಟಿಯಂತೆ ಸರ್ಕಾರಿ ಕಚೇರಿಗಳು ಕಾರ್ಯಾರಂಭ ಮಾಡಲಿವೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರವರೆಗೂ ಸರ್ಕಾರಿ ಕಚೇರಿಗಳನ್ನು ತೆರೆಯುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆ ಕೆಲಸ ಅವಧಿಯನ್ನು ಬದಲಾಯಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಸರ್ಕಾರ ವಿಜಯಪುರ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ವಿಭಾಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಿದೆ.

ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯ:
ಉತ್ತರ ಕರ್ನಾಟಕದಲ್ಲಿ ಗುರುತಿಸಿದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಕಾರ್ಯ ನಿರ್ವಹಿಸಲಿವೆ. ನಿಗದಿತ ಜಿಲ್ಲೆಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 1.30ರವರೆಗೂ ತೆರೆದಿರುತ್ತವೆ. ಈ ಅವಧಿಯಲ್ಲೇ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಲು ಸರ್ಕಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯಾಧಿಕಾರಿಗಳಿಂದ ಕೊವಿಡ್-19 ತುರ್ತು ಕಾರ್ಯಕ್ಕಾಗಿ ನೇಮಕಗೊಂಡ ಅಧಿಕಾರಿಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಸರ್ಕಾರವು ಸ್ಪಷ್ಟಪಡಿಸಿದೆ.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications