ಸಮಾಜ ಗಟ್ಟಿಯಾಗಿ ನಿಂತದ್ದು ಊಹೆಗೂ ಮೀರಿದ್ದು; ರಾಘವೇಶ್ವರ ಶ್ರೀ
ಬೆಂಗಳೂರು, ಮಾ 29: ಅಖಿಲ ಹವ್ಯಕ ಮಹಾಸಭಾ(ರಿ)ದ ನೂತನ ಆಡಳಿತ ಮಂಡಳಿ ಸದಸ್ಯರು ಗಿರಿನಗರದ ರಾಮಶ್ರಮದಲ್ಲಿ, ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳನ್ನು ಭೇಟಿಮಾಡಿ ಆಶೀರ್ವಾದ ಪಡೆದಿದ್ದಾರೆ.
ಚುನಾವಣೆಯಲ್ಲಿ ಅಭೂತಪೂರ್ವವಾಗಿ ಜಯಸಾಧಿಸಿ ಆಯ್ಕೆಯಾದ ನೂತನ ಪದಾಧಿಕಾರಿಗಳನ್ನು ಹರಸಿದ ಶ್ರೀಗಳು, ಇದು ನಂಬಿಕೆಗೆ ಸಿಕ್ಕ ಜಯ, ಕೇವಲ ಬಹುಮತವಲ್ಲ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. (ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ಸಹಾಯಹಸ್ತ)

ಗುರು ನಿಷ್ಠರಾದ ನಿಮ್ಮನ್ನು ಸಮಾಜ ಸರ್ವಾನುಮತದಿಂದ ಆಯ್ಕೆಮಾಡಿದೆ. ಸಮಾಜದ ಈ ರೀತಿಯ ಸ್ಪಂದನೆ ವಿಶೇಷವಾಗಿದ್ದು, ಇಷ್ಟೆಲ್ಲಾ ಕೆಸರೆರೆಚುವ ಪ್ರಯತ್ನ ನೆಡೆದಾಗಲೂ ಸಮಾಜ ಇಷ್ಟು ಗಟ್ಟಿಯಾಗಿ ಬೆಂಬಲಿಸುತ್ತಿರುವುದು ಊಹೆಗೂ ಮೀರಿದ್ದಾಗಿದೆಯೆಂದು ರಾಘವೇಶ್ವರ ಶ್ರೀಗಳು ಹೇಳಿದ್ದಾರೆ.
ಹವ್ಯಕ ಮಹಾಸಭೆಯಿಂದ ಶ್ರೀಮಠಕ್ಕೆ ಯಾವುದೇ ಅಪೇಕ್ಷೆ ಇಲ್ಲ, ಆದರೆ ಗುರುಪೀಠಕ್ಕೆ ಯಥೋಚಿತವಾದ ಗೌರವವನ್ನು ಕೊಡುವುದು ಮಹಾಸಭೆಯ ಕರ್ತವ್ಯ. ಗುರುಪೀಠಕ್ಕೆ ಗೌರವವನ್ನು ಕೊಡಲು ಶಂಕರಾಚಾರ್ಯರ ಆದೇಶವಿದೆ.
ಮಹಾಸಭೆಯ ಕಾನೂನಿನ ಪ್ರಕಾರ ಗುರುಪೀಠಕ್ಕೆ ಗೌರವವನ್ನು ನೀಡುವುದು ಸಂಸ್ಥೆಯ ಕರ್ತವ್ಯವಾಗಿದೆ, ಈಗ ಮತದಾನದ ಮೂಲಕ ಗುರುಪೀಠಕ್ಕೆ ಗೌರವವನ್ನು ನೀಡಲು ಸಮಾಜ ಆಗ್ರಹಿಸಿದೆ.
ಹವ್ಯಕರ ಪ್ರಾತಿನಿಧಿಕ ಸಂಸ್ಥೆಯಾದ ಹವ್ಯಕ ಮಹಾಸಭೆಯು ಸಮಾಜದ ಹಿತಬಯಸುವವರ ಕೈಯಲ್ಲಿ ಇರಬೇಕು ಎಂದು ಶ್ರೀಗಳು ಕಿವಿಮಾತನ್ನು ಹೇಳಿದ್ದಾರೆ.

ಸಮಾಜಕ್ಕೆ ತೊಂದರೆ ಎದುರಾದಾಗ ಹೇಡಿಗಳಾಗಿ ಕೂರದೇ ಸಂಸ್ಥೆಗೆ ಉತ್ತಮ ಕಾಯಕಲ್ಪಕೊಡಿ, ಕ್ರಾಂತಿಯನ್ನು ಮಾಡಿ, ಸಮಾಜದ ಗೌರವವನ್ನು ಉಳಿಸಿ ಬೆಳಸಿ, ಸಮಾಜದ ಸರ್ವತೋಮುಖ ಅಭಿವೃದ್ದಿಗೆ ಶ್ರಮವಹಿಸಿ ಎಂದು ಆದೇಶಿಸಿದ ಶ್ರೀಗಳು, ಮಹಾಸಭೆಯ ಉತ್ತಮ ಕಾರ್ಯಗಳಿಗೆ ನಮ್ಮ ಬೆಂಬಲ ಸದಾ ಇದೆ ಎಂದು ಆಶೀರ್ವದಿಸಿದ್ದಾರೆ.
ಹವ್ಯಕ ಮಹಾಸಭೆಯ ನೂತನ ಅಧ್ಯಕ್ಷರಾದ ಡಾ. ಗಿರಿಧರ ಕಜೆ ಮಾತನಾಡಿ, ಹವ್ಯಕ ಸಮಾಜದಲ್ಲಿ ಒಡಕಿದೆ ಎಂಬ ಸುಳ್ಳು ವದಂತಿಗಳಿಗೆ ಸಮಾಜ ಮತದಾನದ ಮೂಲಕ ಉತ್ತರಿಸಿದ್ದು, ಎಲ್ಲಾ 15 ಸ್ಥಾನಗಳಲ್ಲಿಯೂ ಶ್ರೀಮಠಕ್ಕೆ ನಿಷ್ಟರಾದವರನ್ನೇ ಭಾರಿ ಬಹುಮತದ ಮೂಲಕ ಸಮಾಜ ಚುನಾಯಿಸಿದೆ. (ನಮ್ಮ ನೆಲವನ್ನು ಮರೆಯದಿರಿ)
ಗುರುಪೀಠಕ್ಕೆ ಯಥೋಚಿತವಾದ ಗೌರವವನ್ನು ನೀಡಿ ಎಂಬ ಸಂದೇಶವನ್ನು ನೀಡಿದೆ. ಗುರುಪೀಠಗಳ ಮಾರ್ಗದರ್ಶನದಲ್ಲಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮವಹಿಸುತ್ತೇವೆ, ಅದಕ್ಕೆ ಶ್ರೀಗಳ ಆಶೀರ್ವಾದ ಸರ್ವದಾ ಇರಲಿ ಎಂದು ಗಿರಿಧರ ಕಜೆ ಪ್ರಾರ್ಥಿಸಿದ್ದಾರೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications