Get Updates
Get notified of breaking news, exclusive insights, and must-see stories!

ಮುಂದಿನ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲಟ್‌ ಪೇಪರ್‌ ಬಳಕೆ: ಡಿ.ಕೆ.ಶಿವಕುಮಾರ್‌

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮತಗಳ್ಳತನದ ಆರೋಪ ಮಾಡಿದ್ದಾರೆ. ಈ ಅಭಿಯಾನವನ್ನು ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರು ಕೂಡ ಮುಂದುವರಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್‌ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯದಲ್ಲಿ ನಡೆದ ವೋಟ್ ಚೋರಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಮತಗಳ್ಳತನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ನೂತನ ಪಾಲಿಕೆಗಳಿಗೂ ಸಹ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು, ಇದರಲ್ಲೂ ಇವಿಎಂಗೆ ಗುಡ್‌ಬೈ ಹೇಳುವ ಸಾಧ್ಯತೆ ಇದೆ.

ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನದಡಿ ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹವಾಗಿದೆ ಎಂದಿದ್ದಾರೆ. ಪ್ರಜಾಪ್ರಭುತ್ವದ ಶಕ್ತಿಯಾದ ಮತವನ್ನು ಕದಿಯುವ ಪ್ರಯತ್ನಗಳ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಧ್ವನಿ ಎತ್ತಿದ್ದಾರೆ. ಮಹದೇವಪುರ, ಆಳಂದ ಮಾತ್ರವಲ್ಲದೆ ವ್ಯಾಪಕವಾಗಿ ಹೊರ ರಾಜ್ಯಗಳಲ್ಲಿಯೂ ಮತಗಳ್ಳತನ ಪ್ರಕರಣಗಳು ನಡೆದಿರುವ ಬಗ್ಗೆ ಸಾಕ್ಷಿಸಮೇತ ಮಾಹಿತಿ ನೀಡಿ, ಮತದಾರರ ಹಕ್ಕುಗಳ ಉಳಿವಿಗಾಗಿ ಹೋರಾಟ ಮುಂದುವರೆಸಿದ್ದಾರೆ. ಈ ಹಿಂದೆ ಚಿಲುಮೆ ಸಂಸ್ಥೆಯನ್ನು ಬಳಸಿಕೊಂಡು ಯಾವ ರೀತಿಯಲ್ಲಿ ಮತದಾರರ ಮಾಹಿತಿ ಕಳ್ಳತನ ಮಾಡಲಾಯಿತು ಎಂಬುದು ರಾಜ್ಯದ ಜನರು ಗಮನಿಸಿದ್ದಾರೆ ಎಂದಿದ್ದಾರೆ.

Next Elections May Use Ballot Papers Instead Of EVM DCM DK Shivakumar

ಆಳಂದ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಮುನ್ನ 6,018 ಮತಗಳನ್ನು ಅಳಿಸಲು ಪ್ರಯತ್ನ ನಡೆದಿತ್ತು. ಇದೇ ರೀತಿ ರಾಜಸ್ಥಾನ, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಹಲವಾರು ಇತರ ರಾಜ್ಯಗಳಲ್ಲಿ ಅಕ್ರಮಗಳು ಕಂಡುಬಂದಿವೆ. ಮತ ಕಳ್ಳತನ ತಡೆದು ಪ್ರಜಾಪ್ರಭುತ್ವ ಉಳಿಸಲು ಕರ್ನಾಟಕದಿಂದ ಧ್ವನಿ ಎತ್ತಿರುವ ರಾಹುಲ್‌ ಗಾಂಧಿ ಅವರಿಗೆ ಕಾಂಗ್ರೆಸ್‌ ಪಕ್ಷ ಸೇರಿದಂತೆ ಎಲ್ಲ ಸಾರ್ವಜನಿಕರು ಪಕ್ಷಬೇಧ ಮರೆತು ಪ್ರತಿಯೊಬ್ಬರು ಸಹಕಾರ ನೀಡಬೇಕಿದೆ. ಮತದಾನದ ಹಕ್ಕಿನ ರಕ್ಷಣೆಗಾಗಿ ಸಹಿ ಸಂಗ್ರಹ ಅಭಿಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ನಾನು ಕೂಡ ಪಾಲ್ಗೊಂಡಿದ್ದೇವೆ ಎಂದು ಕರೆ ನೀಡಿದ್ದಾರೆ.

Next Elections May Use Ballot Papers Instead Of EVM DCM DK Shivakumar

ಸಹಿ ಸಂಗ್ರಹ ದಾಖಲೆಗಳು ದೆಹಲಿಗೆ

ವೋಟ್‌ ಚೋರಿ ವಿರುದ್ಧದ ಸಹಿ ಸಂಗ್ರಹ ಅಭಿಯಾನದಲ್ಲಿ ರಾಜ್ಯದಲ್ಲಿ ಇದುವರೆಗೆ 1,12,41,000 ಮತದಾರರು ಸಹಿ ಮಾಡಿ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಸಹಿ ಸಂಗ್ರಹಕ್ಕೆ ಸಂಬಂಧಿಸಿದ ದಾಖಲೆಗಳನ್ನು 10ನೇ ತಾರೀಖಿನಂದು ದೆಹಲಿಯ ಎಐಸಿಸಿ ಕಚೇರಿಗೆ ತೆಗೆದುಕೊಂಡು ಹೋಗಿ ಮಾಹಿತಿ ನೀಡಲಾಗುವುದು. ಮತಗಳ್ಳತನ ವಿರುದ್ಧ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಕಳವು ವಿರುದ್ಧ ಅಭಿಯಾನದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಅಲ್ಲದೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಡಿಕೆ.ಶಿವಕುಮಾರ್‌ ಅವರು ಸುಳಿವು ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+