ಮತ್ತೆ ಸುದ್ದಿಯಾದ ಮೇಕೆದಾಟು ವಿವಾದ; ಸಮಿತಿ ರಚಿಸಿದ ಎನ್ಜಿಟಿ
ಬೆಂಗಳೂರು, ಮೇ 26; ಮೇಕೆದಾಟು ಬಳಿ ಅಕ್ರಮವಾಗಿ ನಿರ್ಮಾಣ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಈ ಬಗ್ಗೆ ಪರಿಶೀಲನೆ ನಡೆಸಲು ಜಂಟಿ ಸಮಿತಿಯನ್ನು ರಚನೆ ಮಾಡಿದೆ.
ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ಉದ್ದೇಶಿಸಿದೆ. ಆದರೆ ತಮಿಳುನಾಡು ಸರ್ಕಾರ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಸುಪ್ರೀಂಕೋರ್ಟ್ಗೆ ಸಹ ಅರ್ಜಿಯನ್ನು ಸಲ್ಲಿಕೆ ಮಾಡಿದೆ.
2021ರ ಏಪ್ರಿಲ್ 15ರಂದು ಪತ್ರಿಕೆಗಳಲ್ಲಿ ಬಂದ ವರದಿ ಅನ್ವಯ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಸ್ವಯಂ ಪ್ರೇರಿತ ಅರ್ಜಿಯನ್ನು ದಾಖಲು ಮಾಡಿಕೊಂಡಿದೆ. ಈ ಕುರಿತು ವಿಚಾರಣೆ ನಡೆಸುವಾಗ ಜಂಟಿ ಸಮಿತಿಯನ್ನು ರಚನೆ ಮಾಡಿದೆ.
ನ್ಯಾಯಮೂರ್ತಿ ಕೆ. ರಾಮಕೃಷ್ಣ ಮತ್ತು ತಜ್ಞರ ಸಮಿತಿಯ ಸದಸ್ಯ ಡಾ. ಕೆ. ಸತ್ಯಗೋಪಾಲ್ ಅಕ್ರಮ ನಿರ್ಮಾಣ ಚಟುವಟಿಕೆ ಕುರಿತು ತನಿಖೆ ಕೈಗೊಂಡು ಜುಲೈ 5ರೊಳಗೆ ವರದಿ ಸಲ್ಲಿಕೆ ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ.

ಅಕ್ರಮ ನಿರ್ಮಾಣ ಕಾಮಗಾರಿ
ಏಪ್ರಿಲ್ 15ರಂದು ಪ್ರಕಟಗೊಂಡ ವರದಿಯಲ್ಲಿ ಮೇಕೆದಾಟು ಬಳಿ ನಿರ್ಮಾಣ ಹಂತದ ಕಾಮಗಾರಿ ಆರಂಭಿಸಲಾಗಿದೆ. ಹಲವಾರು ನಿರ್ಮಾಣ ಚಟುವಟಿಕೆ ವಸ್ತುಗಳನ್ನು ಸಂಗ್ರಹ ಮಾಡಲಾಗಿದೆ ಎಂದು ತಿಳಿಸಲಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಹೇಳಿದೆ.

ಪರಿಸರಕ್ಕೆ ಆಗುವ ಹಾನಿ
ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಿದರೆ ಪರಿಸರಕ್ಕೆ ಹಾನಿಯಾಗಲಿದೆ. ಯಾವುದೇ ರಾಜ್ಯ ಸಹ ಪರಿಸರ ಇಲಾಖೆ ಒಪ್ಪಿಗೆ ಇಲ್ಲದೇ ನಿರ್ಮಾಣ ಕಾಮಗಾರಿ ಆರಂಭಿಸುವಂತಿಲ್ಲ. ಕಾಮಗಾರಿ ಆರಂಭಿಸಿದರೆ ಕಾವೇರಿ ನ್ಯಾಯಾಧೀಕರಣದ ತೀರ್ಪಿನ ಉಲ್ಲಂಘನೆಯಾಗುತ್ತದೆ ಎಂದು ಹಸಿರು ನ್ಯಾಯಾಧೀಕರಣ ಹೇಳಿದೆ.

ಆಯಾ ರಾಜ್ಯಗಳೇ ದಂಡ ಕಟ್ಟಬೇಕು
ಮೇಕೆದಾಟು ಬಳಿ ಪರಿಸರಕ್ಕೆ ಹಾನಿಯಾಗುವಂತೆ ನಿರ್ಮಾಣ ಚಟುವಟಿಕೆ ನಡೆಯುತ್ತಿದೆಯೇ?. ಒಂದು ವೇಳೆ ಅಂತಹ ಚಟುವಟಿಕೆ ಪರಿಸರ ಇಲಾಖೆ ಅನುಮತಿ ಇಲ್ಲದೆಯೋ ನಡೆಯುತ್ತಿರುದ್ದರೆ ಅದಕ್ಕೆ ಆಯಾ ರಾಜ್ಯಗಳೇ ಹೊಣೆ. ಇದರಿಂದಾಗಿ ಪರಿಸರಕ್ಕೆ ಆದ ಹಾನಿಯ ನಷ್ಟವನ್ನು ರಾಜ್ಯಗಳೇ ಭರಿಸಬೇಕು ಎಂದು ನ್ಯಾಯಾಧೀಕರಣ ಹೇಳಿದೆ.

ಕರ್ನಾಟಕದ ಸರ್ಕಾರದ ಯೋಜನೆ
ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಿ ಹೆಚ್ಚುವರಿ ಕಾವೇರಿ ನೀರನ್ನು ಬಳಕೆ ಮಾಡಿಕೊಂಡು ಬೆಂಗಳೂರು ಹಾಗೂ ಸುತ್ತಮುತ್ತಲಿನ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಯನ್ನು ಕರ್ನಾಟಕ ಸರ್ಕಾರ ರೂಪಿಸಿದೆ. ಇದಕ್ಕಾಗಿ 45 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಆದರೆ, ತಮಿಳುನಾಡು ಸರ್ಕಾರ ಈ ಯೋಜನೆ ವಿರುದ್ಧ ಸುಪ್ರೀಂ ಮೆಟ್ಟಿಲೇರಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications