ಎತ್ತಿನಹೊಳೆ ಯೋಜನೆಗಿದ್ದ ಕಾನೂನು ತೊಡಕು ನಿವಾರಣೆ
ಬೆಂಗಳೂರು, ಮೇ 26 : ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಇದ್ದ ಕಾನೂನು ತೊಡಕು ನಿವಾರಣೆಯಾಗಿದೆ. ಯೋಜನೆಗೆ ಅರಣ್ಯ ಇಲಾಖೆ ಒಪ್ಪಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಜಾಗೊಳಿಸಿದೆ.
ಶುಕ್ರವಾರ ಎನ್ಜಿಟಿ ಮುಖ್ಯಸ್ಥ ನ್ಯಾಯಮೂರ್ತಿ ಅದರ್ಶ ಕುಮಾರ್ ಗೋಯೆಲ್ ಅವರನ್ನು ಒಳಗೊಂಡ ಪೀಠ ಯೋಜನೆಗೆ ಇದ್ದ ತೊಡಕನ್ನು ನಿವಾರಿಸಿ, ಅರ್ಜಿಗಳನ್ನು ವಜಾಗೊಳಿಸಿದೆ. ಎನ್ಜಿಟಿ ನೀಡಿರುವ ಆದೇಶದ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಹೋರಾಟಗಾರ ಕೌಲನಹಳ್ಳಿ ಸೋಮಶೇಖರ್ ಮುಂದಾಗಿದ್ದಾರೆ.

ಎತ್ತಿನಹೊಳೆ ಯೋಜನೆಗೆ ಪರಿಸರ ಮತ್ತು ಅರಣ್ಯ ಇಲಾಖೆ ನೀಡಿರುವ ಒಪ್ಪಿಗೆಯನ್ನು ಪ್ರಶ್ನಿಸಿ ಬೆಂಗಳೂರಿನ ಕೆ.ಎನ್.ಸೋಮಶೇಖರ್ ಮತ್ತು ಹಾಸನದ ಎಚ್.ಎ.ಕಿಶೋರ್ ಕುಮಾರ್ ಸಲ್ಲಿಸಿದ್ದ ಅರ್ಜಿಗಳನ್ನು ಎನ್ಜಿಟಿ ವಜಾಗೊಳಿಸಿದೆ.
'ಯೋಜನೆಯಲ್ಲಿ ದೊರೆಯುವ ನೀರನ್ನು ನೀರಾವರಿ ಉದ್ದೇಶಕ್ಕೆ ಬಳಸುವುದಿಲ್ಲ. ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡುತ್ತೇವೆ ಎಂದು ಕರ್ನಾಟಕ ಸರ್ಕಾರ ಮುಚ್ಚಳಿಕೆ ಬರೆದುಕೊಟ್ಟಿದೆ. ಈ ಯೋಜನೆ ಪರಿಸರ ಪರಿಣಾಂ ಅಧ್ಯಯನ ಅಧಿಸೂಚನೆ 2006ಕ್ಕೆ ಒಳಪಡುವುದಿಲ್ಲ. ಆದ್ದರಿಂದ, ಪರಿಸರ ಇಲಾಖೆ ಅನುಮೋದನೆ ಅಗತ್ಯವಿಲ್ಲವೆಂದು' ನ್ಯಾಯಪೀಠ ಹೇಳಿದೆ.
ಎನ್ಜಿಟಿ 2017ರ ಅಕ್ಟೋಬರ್ 6ರಂದು ಎತ್ತಿನಹೊಳೆ ಯೋಜನೆಗೆ ಷರತ್ತು ಬದ್ಧ ಅನುಮತಿ ನೀಡಿತ್ತು. ಕೆ.ಎನ್.ಸೋಮಶೇಖರ್, ಕಿಶೋರ್ ಕುಮಾರ್, ಪುರುಷೋತ್ತಮ ಚಿತ್ರಾಪುರ ಎಂಬುವವರು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿ ಇದನ್ನು ಪಶ್ನೆ ಮಾಡಿದ್ದರು.
ಯೋಜನೆ ಕೈಗೊಳ್ಳುವಾಗ ಪರಿಸರಕ್ಕೆ ಸಂಬಂಧಿಸಿದ ಕಾನೂನುಗಳನ್ನು ಉಲ್ಲಂಘಟನೆ ಮಾಡಲಾಗಿದೆ. ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಇರುವ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸರ್ಕಾರ ಪಡೆದಿರುವ ಪರಿಸರ ಇಲಾಖೆ ಅನುಮತಿಯೇ ಕಾನೂನು ಬಾಹಿರ ಎಂದು ವಾದ ಮಂಡನೆ ಮಾಡಿದ್ದರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications