ಬೆಂಗಳೂರು: ಉಕ್ಕಿನ ಸೇತುವೆ ನಿರ್ಮಾಣಕ್ಕೆ ತಾತ್ಕಾಲಿಕ ತಡೆ!
ಬೆಂಗಳೂರು, ಅಕ್ಟೋಬರ್.28: ವಿವಾದಿತ ಬೆಂಗಳೂರು: ಉಕ್ಕಿನ ಸೇತುವೆ ನಿರ್ಮಾಣಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ 4 ವಾರಗಳ ತಾತ್ಕಾಲಿಕ ತಡೆ ನೀಡಿದೆ. ಇದರಿಂದ, ನವೆಂಬರ್ 1ರಿಂದ ಯೋಜನೆ ಆರಂಭಿಸಲು ಉದ್ದೇಶಿಸಿದ್ದ ಬಿಡಿಎಗೆ ಹಿನ್ನಡೆಯಾಗಿದೆ.
ಸ್ಟೀಲ್ ಫ್ಲೈ ಓವರ್ ನಿರ್ಮಾಣವಾದರೆ 800ಕ್ಕೂ ಹೆಚ್ಚು ಮರಗಳು ನಾಶವಾಗುತ್ತದೆ. ಇದರಿಂದ ವಾತಾವರಣದ ಉಷ್ಣತೆ ಮತ್ತು ಶಬ್ಧ ಮಾಲಿನ್ಯ ಜಾಸ್ತಿ ಆಗುತ್ತದೆ. ಹೀಗಾಗಿ ಈ ಯೋಜನೆಗೆ ತಡೆಯಾಜ್ಞೆ ನೀಡಬೇಕೆಂದು ಬೆಂಗಳೂರಿನ ಸಿಟಿಜನ್ ಫೋರಂ ದೂರು ಸಲ್ಲಿಸಿತ್ತು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ತಮಿಳುನಾಡಿನ ಚೆನ್ನೈನಲ್ಲಿರುವ ಹಸಿರು ನ್ಯಾಯಮಂಡಳಿ ಕಾಮಗಾರಿಗೆ ತಾತಾಲ್ಕಿಕ ಬ್ರೇಕ್ ಹಾಕಿದೆ. [ಉಕ್ಕಿನ ಮೇಲ್ಸೇತುವೆಗೆ ಪರಿಸರ ಪ್ರಾಧಿಕಾರದಿಂದ ಗ್ರೀನ್ ಸಿಗ್ನಲ್!]

ಸ್ಟೀಲ್ ಫ್ಲೈ ಓವರ್ ಬೇಡವೆಂದು ನಗರದಲ್ಲಿ ಹಲವು ಪ್ರತಿಭಟನೆಗಳು, ಚಳವಳಿಗಳು, ಚರ್ಚೆಗಳು ನಡೆದಿದ್ದವು. ಆದರೆ ಇದ್ಯಾವುದಕ್ಕೆ ಕಿವಿಗೊಡದ ಸರ್ಕಾರ ಇದನ್ನು ಮಾಡಿಯೇ ತೀರುತ್ತೇವೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದು ಬೆಂಗಳೂರು ನಗರಾಭಿವೃದ್ದಿ ಸಚಿವ ಕೆ.ಜೆ. ಹಾಗೂ ಸಿಎಂ ಸಿದ್ದರಾಮಯ್ಯ ಹೇಳಿದ್ದರು. [ಉಕ್ಕಿನ ಸೇತುವೆ ವಿರುದ್ಧ ನಾಗರಿಕರ ಉಗ್ರ ಹೋರಾಟ]
ಆದರೆ, ಈಗ ಹಸಿರು ನ್ಯಾಯಮಂಡಳಿ ನೀಡಿರುವ ತಾತ್ಕಾಲಿಕ ತಡೆಯಿಂದಾಗಿ ಉಕ್ಕಿನ ಸೇತುವೆ ಬೇಡ ಎನ್ನುವರಿಗೆ ತಾತ್ಕಾಲಿಕ ಜಯ ಸಿಕ್ಕಿದಂತಾಗಿದೆ. [ಉಕ್ಕಿನ ಸೇತುವೆ ನಿರ್ಮಿಸಿದರೆ ಆಗಸದಲ್ಲಿ ನಕ್ಷತ್ರ ಕಾಣಿಸಲ್ಲ :ಪ್ರೊ ರಾವ್]
ಯೋಜನೆಗಾಗಿ 800 ಮರಗಳನ್ನು ಕಡಿಯಲು ಬಿಡಿಎ ನಿರ್ಧರಿಸಿತ್ತು. ಇದರಿಂದ ಬೆಂಗಳೂರು ನಾಗರೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದವು. ಭಾರೀ ವಿರೋಧದ ನಡುವೆಯೂ ಬಿಡಿಎ ಸ್ಟೀಲ್ ಫ್ಲೈ ಓವರ್ ಕಾಮಗಾರಿಗೆ ಗ್ರೀನ್ ಸಿಗ್ನಲ್ ನೀಡಿತ್ತು. ಯೋಜನೆಯ ಕಾಮಗಾರಿ ನಡೆಸುವುದಕ್ಕೆ ಎಲ್ಅಂಡ್ ಟಿ ಕಂಪನಿಗೆ ಒಪ್ಪಿಗೆ ಪತ್ರ ನೀಡಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಪತ್ರ ನೀಡಿದ್ದ ಬಿಡಿಎ ಟೆಂಡರ್ ಮೊತ್ತ 1791 ಕೋಟಿ ರೂಪಾಯಿಗೆ ಒಪ್ಪಿಗೆ ಸೂಚಿಸಿತ್ತು. ಪತ್ರ ನೀಡಿದ ದಿನದಿಂದಲೇ ಯೋಜನೆ ಅವಧಿ ಶುರುವಾಗುತ್ತೆ ಕೆಲಸ ನಿರ್ವಹಿಸಿ ಎಂದು ಸೂಚಿಸಲಾಗಿತ್ತು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications