ಉತ್ತರ ಪ್ರದೇಶದ ಬಾಂಬ್ ಸ್ಫೋಟಕ್ಕೆ ಕರ್ನಾಟಕದ ನಂಟು
ಬೆಂಗಳೂರು, ಮಾರ್ಚ್ 08 : ರಾಷ್ಟ್ರೀಯ ತನಿಖಾ ದಳದ ತಂಡ ಕರ್ನಾಟಕಕ್ಕೆ ಆಗಮಿಸಿದ್ದು, ಉತ್ತರ ಪ್ರದೇಶದ ಬಿಜನೂರಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡುತ್ತಿದೆ. ಈ ಬಾಂಬ್ ಸ್ಫೋಟದ ಆರೋಪಿಗಳು ಕರ್ನಾಟಕದಲ್ಲಿ ವಾಸ್ತವ್ಯ ಹೂಡಿದ್ದರು ಎಂಬುದು ತನಿಖೆಯಿಂದ ಬಹಿರಂಗವಾಗಿದೆ.
2013ರಲ್ಲಿ ಮಧ್ಯಪ್ರದೇಶದ ಜೈಲಿನಿಂದ ಪರಾರಿಯಾದ ನಿಷೇಧಿತ ಸಿಮಿ ಸಂಘಟನೆಯ ಐವರು ಸದಸ್ಯರು ಈ ಸ್ಫೋಟದ ಆರೋಪಿಗಳಾಗಿದ್ದಾರೆ. ಜೈಲಿನಿಂದ ಪರಾರಿಯಾದವರಲ್ಲಿ ಇಬ್ಬರನ್ನು ತೆಲಂಗಾಣದಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿತ್ತು. ಉಳಿದ ಮೂವರು ಆರೋಪಿಗಳನ್ನು ಕೆಲವು ದಿನಗಳ ಹಿಂದೆ ಒರಿಸ್ಸಾದಲ್ಲಿ ಬಂಧಿಸಲಾಗಿತ್ತು. [ಒರಿಸ್ಸಾದಲ್ಲಿ ನಾಲ್ವರು ಸಿಮಿ ಉಗ್ರರ ಬಂಧನ]

ಮೂವರು ಆರೋಪಿಗಳ ವಿಚಾರಣೆ ನಡೆಸಿದ ಎನ್ಐಎ ಅವರು ಕರ್ನಾಟಕದಲ್ಲಿ ನೆಲೆಸಿದ್ದರು ಎಂಬ ಮಾಹಿತಿ ಸಂಗ್ರಹಣೆ ಮಾಡಿತ್ತು. ಈ ಉಗ್ರರು ಯಾದಗಿರಿ, ಧಾರವಾಡ, ಹೊಸಪೇಟೆಯಲ್ಲಿ ವಾಸ್ತವ್ಯ ಹೂಡಿದ್ದರು. ಕರೀಂನಗರ ಮತ್ತು ತೆಲಂಗಾಣದಲ್ಲಿ ದರೋಡೆ ನಡೆಸುವ ಸಂಚನ್ನು ಕರ್ನಾಟದಲ್ಲಿಯೇ ರೂಪಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. [ಸಿಮಿ ಉಗ್ರರು ಧಾರವಾಡದಲ್ಲಿ 10 ತಿಂಗಳಿದ್ದರೂ ತಿಳಿಯಲಿಲ್ಲ ಏಕೆ?]
ಕರ್ನಾಟಕದಲ್ಲಿ ಈ ಉಗ್ರರಿಗೆ ಯಾರ ಜೊತೆ ಸಂಪರ್ಕವಿತ್ತು ಎಂದು ಎನ್ಐಎ ತಂಡ ತನಿಖೆ ನಡೆಸಲು ಆಗಮಿಸಿದೆ. ಚೆನ್ನೈನಲ್ಲಿ ರೈಲಿನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಈ ಉಗ್ರರ ಪಾತ್ರವಿದೆಯೇ?, ಅಲ್ಲಿನ ಕೆಲವರು ಇವರನ್ನು ಸಂಪರ್ಕಿಸಿದ್ದರೆ ಎಂದು ಮಾಹಿತಿ ಸಂಗ್ರಹಣೆ ಮಾಡಲಿದೆ. [ಗೊತ್ತೇ... ಸಿಮಿ ಉಗ್ರವಾದ ತಳೆದಿದ್ದೇ ಕರ್ನಾಟಕದಲ್ಲಿ..!]
ಈ ಮೂವರು ಉಗ್ರರ ವಿರುದ್ಧ ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಕರೀಂ ನಗರದಲ್ಲಿ ದರೋಡೆ ಮಾಡಿರುವ ಪ್ರಕರಣಗಳಿವೆ. ಬಿಜನೂರು ಮತ್ತು ಚೆನ್ನೈನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಭಾಗಿಯಾದ ಆರೋಪಗಳಿವೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications