ಉತ್ತರ ಪ್ರದೇಶದ ಬಾಂಬ್ ಸ್ಫೋಟಕ್ಕೆ ಕರ್ನಾಟಕದ ನಂಟು

ಬೆಂಗಳೂರು, ಮಾರ್ಚ್ 08 : ರಾಷ್ಟ್ರೀಯ ತನಿಖಾ ದಳದ ತಂಡ ಕರ್ನಾಟಕಕ್ಕೆ ಆಗಮಿಸಿದ್ದು, ಉತ್ತರ ಪ್ರದೇಶದ ಬಿಜನೂರಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡುತ್ತಿದೆ. ಈ ಬಾಂಬ್ ಸ್ಫೋಟದ ಆರೋಪಿಗಳು ಕರ್ನಾಟಕದಲ್ಲಿ ವಾಸ್ತವ್ಯ ಹೂಡಿದ್ದರು ಎಂಬುದು ತನಿಖೆಯಿಂದ ಬಹಿರಂಗವಾಗಿದೆ.

2013ರಲ್ಲಿ ಮಧ್ಯಪ್ರದೇಶದ ಜೈಲಿನಿಂದ ಪರಾರಿಯಾದ ನಿಷೇಧಿತ ಸಿಮಿ ಸಂಘಟನೆಯ ಐವರು ಸದಸ್ಯರು ಈ ಸ್ಫೋಟದ ಆರೋಪಿಗಳಾಗಿದ್ದಾರೆ. ಜೈಲಿನಿಂದ ಪರಾರಿಯಾದವರಲ್ಲಿ ಇಬ್ಬರನ್ನು ತೆಲಂಗಾಣದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿತ್ತು. ಉಳಿದ ಮೂವರು ಆರೋಪಿಗಳನ್ನು ಕೆಲವು ದಿನಗಳ ಹಿಂದೆ ಒರಿಸ್ಸಾದಲ್ಲಿ ಬಂಧಿಸಲಾಗಿತ್ತು. [ಒರಿಸ್ಸಾದಲ್ಲಿ ನಾಲ್ವರು ಸಿಮಿ ಉಗ್ರರ ಬಂಧನ]

nia

ಮೂವರು ಆರೋಪಿಗಳ ವಿಚಾರಣೆ ನಡೆಸಿದ ಎನ್‌ಐಎ ಅವರು ಕರ್ನಾಟಕದಲ್ಲಿ ನೆಲೆಸಿದ್ದರು ಎಂಬ ಮಾಹಿತಿ ಸಂಗ್ರಹಣೆ ಮಾಡಿತ್ತು. ಈ ಉಗ್ರರು ಯಾದಗಿರಿ, ಧಾರವಾಡ, ಹೊಸಪೇಟೆಯಲ್ಲಿ ವಾಸ್ತವ್ಯ ಹೂಡಿದ್ದರು. ಕರೀಂನಗರ ಮತ್ತು ತೆಲಂಗಾಣದಲ್ಲಿ ದರೋಡೆ ನಡೆಸುವ ಸಂಚನ್ನು ಕರ್ನಾಟದಲ್ಲಿಯೇ ರೂಪಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. [ಸಿಮಿ ಉಗ್ರರು ಧಾರವಾಡದಲ್ಲಿ 10 ತಿಂಗಳಿದ್ದರೂ ತಿಳಿಯಲಿಲ್ಲ ಏಕೆ?]

ಕರ್ನಾಟಕದಲ್ಲಿ ಈ ಉಗ್ರರಿಗೆ ಯಾರ ಜೊತೆ ಸಂಪರ್ಕವಿತ್ತು ಎಂದು ಎನ್‌ಐಎ ತಂಡ ತನಿಖೆ ನಡೆಸಲು ಆಗಮಿಸಿದೆ. ಚೆನ್ನೈನಲ್ಲಿ ರೈಲಿನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಈ ಉಗ್ರರ ಪಾತ್ರವಿದೆಯೇ?, ಅಲ್ಲಿನ ಕೆಲವರು ಇವರನ್ನು ಸಂಪರ್ಕಿಸಿದ್ದರೆ ಎಂದು ಮಾಹಿತಿ ಸಂಗ್ರಹಣೆ ಮಾಡಲಿದೆ. [ಗೊತ್ತೇ... ಸಿಮಿ ಉಗ್ರವಾದ ತಳೆದಿದ್ದೇ ಕರ್ನಾಟಕದಲ್ಲಿ..!]

ಈ ಮೂವರು ಉಗ್ರರ ವಿರುದ್ಧ ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಕರೀಂ ನಗರದಲ್ಲಿ ದರೋಡೆ ಮಾಡಿರುವ ಪ್ರಕರಣಗಳಿವೆ. ಬಿಜನೂರು ಮತ್ತು ಚೆನ್ನೈನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಭಾಗಿಯಾದ ಆರೋಪಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+