ಕಲಬುರ್ಗಿ ಹತ್ಯೆ ತನಿಖೆ ಮಾಡುವುದಿಲ್ಲ ಎಂದ ಎನ್ಐಎ, ಕಾರಣ ಏನು?
ಬೆಂಗಳೂರು, ಮಾರ್ಚ್ 24: ವಿಚಾರವಾದಿ, ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆ ತನಿಖೆ ಆಮೆ ಗತಿಯಲ್ಲಿ ಸಾಗುತ್ತಿದ್ದ ಕಾರಣ ಕಲಬುರ್ಗಿ ಅವರ ಪತ್ನಿ ಉಮಾದೇವಿ ಅವರು ತನಿಖೆಯನ್ನು ಸಿಬಿಐ ಅಥವಾ ಎನ್ಐಎ ಗೆ ವಹಿಸಬೇಕು ಎಂದು ಸುಪ್ರಿಂ ಕೋರ್ಟ್ಗೆ ಮನವಿ ಮಾಡಿದ್ದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಈ ವಿಚಾರವಾಗಿ ಸ್ಪಷ್ಟಣೆ ನೀಡಿರುವ ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ), 'ಎನ್ಐಎಯು ರಾಜ್ಯ ಮತ್ತು ಅಂತರರಾಜ್ಯದ ಭಯೋತ್ಪಾಧನಾ ಚಟುವಟಿಕೆಗಳನ್ನು ಮಾತ್ರವೇ ತನಿಖೆ ನಡೆಸುತ್ತದೆ, ಕೊಲೆಯಂತಹಾ ಘಟನೆಗಳ ತನಿಖೆ ನಡೆಸುವುದು ಎನ್ಐಎ ನಿಯಮಗಳಿಗೆ ಬಾಹಿರ' ಎಂದು ಹೇಳಿದೆ.
ನಿನ್ನೆ (ಮಾರ್ಚ್ 24) ಸುಪ್ರಿಂ ಕೋರ್ಟ್ಗೆ ಮಾಹಿತಿ ನೀಡಿದ ಕೇಂದ್ರ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ಅವರು ಸಂಶೋಧಕ ಕಲುಬುರ್ಗಿ ಅವರ ಹತ್ಯೆಯನ್ನು ಭಯೋತ್ಪಾದನಾ ಕೃತ್ಯ ಎಂದು ಪರಿಗಣಸಲಾಗದು, ಹಾಗಾಗಿ ಎಐಎ ಕಾಯ್ದೆ ಅನ್ವಯ ಎನ್ಐಎ ಸಂಸ್ಥೆಯು ತನಿಖೆ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಎನ್ಐಎ ವಾದವನ್ನು ಪರಿಗಣಿಸಿರುವ ಸುಪ್ರಿಂಕೋರ್ಟ್ ಸಿಬಿಐ ಮತ್ತು ಕರ್ನಾಟಕ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಜುಲೈ ಮೊದಲ ವಾರದೊಳಗೆ ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಅದೇಶಿಸಿದೆ.
ಸಂಶೋಧಕ ಎಂಎಂ ಕಲಬುರ್ಗಿ ಅವರು ಆಗಸ್ಟ್ 30, 2015 ರಂದು ತಮ್ಮ ನಿವಾಸದ ಬಳಿಯೇ ಗುಂಡೇಟಿಗೆ ಬಲಿಯಾದರು. ಅಂದಿನಿಂದಲೂ ತನಿಖೆ ನಡೆಯುತ್ತಿದೆಯಾದರೂ ಯಾವುದೇ ಪ್ರಗತಿ ಕಂಡು ಬಂದಿಲ್ಲ. ಮಹಾರಾಷ್ಟ್ರದ ವಿಚಾರವಾದಿ ದಾಬೋಲ್ಕರ್ ಅವರ ಹತ್ಯೆಗೂ ಕಲಬುರ್ಗಿ ಅವರ ಹತ್ಯೆಗೂ ಸಾಮ್ಯತೆ ಇದೆ ಎನ್ನಲಾಗಿದೆ ಆದರೂ ತನಿಖೆ ಕುಂಟಿತವಾಗಿಯೇ ನಡೆಯುತ್ತಿದೆ.
ಕಲಬುರ್ಗಿ ಹತ್ಯೆ ತನಿಖೆ ಆಮೆ ಗಾತಿಯಲ್ಲಿ ಸಾಗುತ್ತಿರುವ ಕಾರಣ ತನಿಖೆ ಜವಾಬ್ದಾರಿಯನ್ನು ಸಿಬಿಐ ಅಥವಾ ಎನ್ಐಎಗೆ ವಹಿಸಬೇಕೆಂದು ಉಮಾದೇವಿ ಅವರು ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಸಿಬಿಐ ಹಾಗೂ ಮಹಾರಾಷ್ಟ್ರ ಮತ್ತು ಕರ್ನಾಟಕ ಸರ್ಕಾರಕ್ಕೆ ನೊಟೀಸ್ ನೀಡಿದ್ದು ಸಿಬಿಐ ಮತ್ತು ಎರಡೂ ಸರ್ಕಾರಗಳು ಒಪ್ಪಿಕೊಂಡರೆ ಪ್ರಕರಣವನ್ನು ಸಿಬಿಐ ವಹಿಸಿಕೊಳ್ಳುವ ಸಾಧ್ಯತೆ ಇದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications