'ಜನರನ್ನು ನಿರಾಶೆಗೊಳಿಸಿದರೆ, ಅವರು ಪಕ್ಷದಿಂದ ದೂರವಾಗುತ್ತಾರೆ'
ಇಂದು ಕೆಲವು ಸ್ವಾಮೀಜಿಗಳು ಬೇಡವಾದ ಕಾರಣಕ್ಕೆ ಸುದ್ದಿಯಾಗುತ್ತಿದ್ದಾರಲ್ಲ?
ಎಲ್ಲಾ ಸಮಾಜದಲ್ಲಿಯೂ ಅನಾಚಾರ ನಡೆಯುತ್ತದೆ. ಜಾಗತಿಕ ಮಟ್ಟದಲ್ಲಿಯೂ ಗುಪ್ತವಾಗಿ ನಡೆಸಿದ ಇಂತಹ ಘಟನೆಗಳು ಬೆಳಕಿಗೆ ಬಂದಿವೆ. ಕೆಲವು ಬಹಿರಂಗಗೊಳ್ಳುತ್ತವೆ. ಕೆಲವು ಅಲ್ಲೇ ಉಳಿದುಕೊಳ್ಳುತ್ತವೆ. ಹತ್ತಾರು ಸಾವಿರ ಮಠಗಳು, ಆಶ್ರಮಗಳು ಇವೆ. ಕೆಲವರು ತಪ್ಪು ಮಾಡಿ ತಿದ್ದಿಕೊಳ್ಳುತ್ತಾರೆ. ಕೆಲವರು ಅದನ್ನು ಮುಂದುವರೆಸುತ್ತಾರೆ.
ಒಬ್ಬ ಸನ್ಯಾಸಿ ಮಾದರಿಯಾಗಬೇಕು ಎಂದರೆ ಹೇಗಿರಬೇಕು?
ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗಳಿಮದ ಜನರು ಯಾವಾಗಲೂ ಹೆಚ್ಚು ನಿರೀಕ್ಷೆ ಮಾಡುತ್ತಾರೆ. ಆದ್ದರಿಂದ ಅವರು ಮೌಲ್ಯಗಳಿಗೆ, ತತ್ವಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕು. ಅಲ್ಲಿರುವವರು ಮನುಷ್ಯರೇ, ಕೆಲವರು ತಪ್ಪು ಮಾಡಿ ತಿದ್ದಿಕೊಳ್ಳುತ್ತಾರೆ. ಕೆಲವು ಕಡೆ ಅದು ಪುನರಾವರ್ತನೆಯಾಗುತ್ತದೆ. ಮಾರ್ದರ್ಶನ ಮಾಡುವವರು ನಡೆ-ನುಡಿಗಳನ್ನು ಸರಿಯಾದ ರೀತಿಯಲ್ಲಿ ಇಟ್ಟುಕೊಳ್ಳಬೇಕು. ಸಮಾಜಕ್ಕೆ ಮಾರ್ಗದರ್ಶಕರಾಗಿರಬೇಕೆ ಹೊರತು ದಾರಿ ತಪ್ಪಿಸಬಾರದು.

ಸಿದ್ದರಾಮಯ್ಯ ಅವರ ಸರ್ಕಾರದ ಬಗ್ಗೆ ಏನು ಹೇಳುವಿರಿ?
ಹಿಂದುಳಿದ ವರ್ಗದವರು ಹಿಂದೆಯೂ ಮುಖ್ಯಮಂತ್ರಿಗಳಾಗಿದ್ದರು. ಮುಂದೆಯೂ ಆಗುತ್ತಾರೆ. ಬಹಳ ವರ್ಷಗಳ ನಂತರ ಸಂಪೂರ್ಣ ಬಹುಮತದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಜನರು ಸಹ ಸರ್ಕಾರದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟು ಕೊಂಡಿದ್ದಾರೆ. ಆದರೆ, ಅವರಿಗೆ ನಿರಾಸೆಯಾದರೆ ಪಕ್ಷದಿಂದ ದೂರ ಸರಿಯಲಿದ್ದಾರೆ. ಈ ಸರ್ಕಾರಕ್ಕೆ ಇನ್ನೂ ಕಾಲಾವಕಾಶ ಬೇಕಾಗುತ್ತದೆ. ಜನರ ಕನಸುಗಳಿಗೆ ಪುಷ್ಠಿ ನೀಡುವ ಉತ್ತಮ ಆಡಳಿತ ನೀಡಿದರೆ ರಾಜ್ಯವೂ ಅಭಿವೃದ್ಧಿಯಾಗುತ್ತದೆ.
ನಿಡುಮಾಮಿಡಿ ಮಠದ ಮೂಲ ಮಠ ಎಲ್ಲಿದೆ?
ನಿಡುಮಾಮಿಡಿ ಮಠದ ಮೂಲ ಸಂಸ್ಥಾನ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ಗ್ರಾಮ. ಈ ಮಠಕ್ಕೆ ಒಂದು ಸಾವಿರ ವರ್ಷಗಳ ಪ್ರಾಚೀನತೆ ಇದೆ. ಪೀಠದಲ್ಲಿ 39 ಪೀಠಾಧಿಪತಿಗಳಿದ್ದರು. ನಾನು ಇದಕ್ಕೆ 40ನೇ ಪೀಠಾಧಿಪತಿ. ತಮಿಳುನಾಡು ಸೇರಿದಂತೆ ಮೂರು ರಾಜ್ಯಗಳಲ್ಲಿ ಮಠದ ಶಾಖೆಗಳಿದ್ದು, ಲಕ್ಷಾಂತರ ಭಕ್ತರಿದ್ದಾರೆ.
ನಿಡುಮಾಮಿಡಿ ಮಠದ ವಿಶೇಷವೆಂದರೆ ಇಲ್ಲಿ ಜಾತಿ ಮತದ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಅದರಲ್ಲೂ ಮುಖ್ಯವಾಗಿ ಶೋಷಿತ ಮತ್ತು ದುರ್ಬಲ ವರ್ಗದವರ ಏಳಿಗೆಗಾಗಿ ಕಾರ್ಯಗಳನ್ನು ಮಾಡಲಾಗುತ್ತದೆ.
ಸಂದರ್ಶನ : ಬಾಲರಾಜ್ ತಂತ್ರಿ, ಗುರು ಕುಂಟವಳ್ಳಿ
-
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್












Click it and Unblock the Notifications