ಕರ್ನಾಟಕ ವರ್ಷದ ವ್ಯಕ್ತಿಗೆ ಅಭಿನಂದನೆಗಳು
ಬೆಂಗಳೂರು, ಡಿ. 31 : ಮುಖ್ಯಮಂತ್ರಿಯಿರಲಿ, ಶಾಸಕನಿರಲಿ, ಕೋಟ್ಯಾಧಿಪತಿಯಾಗಿರಲಿ, ಆ ವ್ಯಕ್ತಿ ಎಷ್ಟೇ ಪ್ರಭಾವಿತನಾಗಿರಲಿ, 'ಇವನೇ ಆ ಅಕ್ರಮ ಎಸಗುತ್ತಿರುವ ವ್ಯಕ್ತಿ' ಎಂದು ಯಾವುದೇ ಹೆದರಿಕೆಯಿಲ್ಲದೆ, ನಿರ್ಭಿಡೆಯಾಗಿ ಬೆರಳು ಮಾಡಿ ತೋರಿಸುವ ದಿಟ್ಟಿಗರಲ್ಲಿ ಅಗ್ರಸ್ಥಾನದಲ್ಲಿರುವ ಸಾಮಾಜಿಕ ಚಳವಳಿಗಾರ ಸಂಗಯ್ಯ ರಾಚಯ್ಯ ಹಿರೇಮಠ (69) ಅವರನ್ನು 'ಕರ್ನಾಟಕದ ವರ್ಷದ ವ್ಯಕ್ತಿ 2013' ಪ್ರಶಸ್ತಿಗೆ ಒನ್ಇಂಡಿಯಾ ಓದುಗರೇ ಆಯ್ಕೆ ಮಾಡಿದ್ದಾರೆ.
ಐಷಾರಾಮಿ ಜೀವನ ನಡೆಸುವಷ್ಟು ಭರ್ಜರಿ ಸಂಬಳ ನೀಡುತ್ತಿದ್ದ ಅಮೆರಿಕದಲ್ಲಿನ ಕೆಲಸವನ್ನು ತ್ಯಜಿಸಿ ಸಮಾಜಸೇವೆ ಮಾಡಬೇಕು, ಗ್ರಾಮೀಣ ಕರ್ನಾಟಕವನ್ನು ಉದ್ಧಾರ ಮಾಡಬೇಕೆಂಬ ಒಂದೇ ಉದ್ದೇಶದಿಂದ, ನಿಸ್ವಾರ್ಥದಿಂದ ದುಡಿಯುತ್ತಿರುವ 69 ವರ್ಷದ ಎಸ್ಆರ್ ಹಿರೇಮಠ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅತ್ಯಂತ ಅರ್ಹ ವ್ಯಕ್ತಿಯನ್ನು ಗುರುತಿಸಿ, ಹೆಚ್ಚು ಮತಗಳನ್ನು ನೀಡಿ ಆಯ್ಕೆ ಮಾಡಿದ ಒನ್ಇಂಡಿಯಾ ಕನ್ನಡ ಓದುಗ ಬಂಧುಗಳಿಗೆ ಅನಂತಾನಂತ ಧನ್ಯವಾದಗಳು. [ಎಸ್ಆರ್ ಹಿರೇಮಠ ಯಾರು? ಸಂಕ್ಷಿಪ್ತ ಪರಿಚಯ]

ಈ ವರ್ಷದ ವ್ಯಕ್ತಿ ಪ್ರಶಸ್ತಿಗೆ ಯಾರ್ಯಾರನ್ನು ಶಾರ್ಟ್ ಲಿಸ್ಟ್ ಮಾಡಬೇಕೆಂದು ಚಿಂತನೆ ನಡೆಸಿದಾಗ ನಮ್ಮ ಕಣ್ಣಿಗೆ ಬಿದ್ದವರು ಇವರುಗಳು : ವಿಜ್ಞಾನಿ ಪ್ರೊ. ಸಿಎನ್ಆರ್ ರಾವ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕ ಹೋರಾಟಗಾರ ವೈಜನಾಥ ಪಾಟೀಲ, ವಿಜ್ಞಾನಿ ಡಾ. ಯುಆರ್ ರಾವ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಎಟಿಎಂ ಹಲ್ಲೆಗೊಳಗಾದ ಜ್ಯೋತಿ ಉದಯ್, ಜ್ಞಾನಪೀಠ ವಿಜೇತ ಚಂದ್ರಶೇಖರ ಕಂಬಾರ, ಭೂಗಳ್ಳರಿಗೆ ಸಿಂಹಸ್ವಪ್ನವಾಗಿರುವ ಎಸ್ಆರ್ ಹಿರೇಮಠ, ಸೌಜನ್ಯ ಪರ ಹೋರಾಟಕ್ಕಿಳಿದಿರುವ ಕೇಮಾರು ಸ್ವಾಮಿ, ಮಂಡ್ಯದ ಸಂಸದೆ ನಟಿ ರಮ್ಯಾ.
ಇವರಲ್ಲಿ ಇವರನ್ಯಾಕೆ ಆಯ್ಕೆ ಮಾಡಿದಿರಿ ಎಂದು ಕೆಲ ವ್ಯಕ್ತಿಗಳ ಬಗ್ಗೆ ಕೆಲ ಓದುಗರು ಪ್ರಶ್ನಿಸಿದರು. ಅವರ ಅಭಿಪ್ರಾಯಗಳಿಗೆ ನಾವು ಮನ್ನಣೆ ನೀಡುತ್ತೇವೆ. ಕೇವಲ ಸಾಧನೆಯೊಂದನ್ನೇ ಮಾನದಂಡವನ್ನಾಗಿ ಮಾಡುವುದಾದರೆ ಒಂದೇ ಕೈನ ಬೆರಳೆಣಿಕೆಯಷ್ಟು ವ್ಯಕ್ತಿಗಳು ಕೂಡ ಸಿಗದಿದ್ದ ಕಾರಣ ಈ ವರ್ಷ ಸಾಧನೆ ಮಾಡಿದವರ ಜೊತೆಗೆ ಹೆಚ್ಚು ಸುದ್ದಿಯಲ್ಲಿರುವ ವ್ಯಕ್ತಿಗಳನ್ನು ಕೂಡ ಆಯ್ಕೆ ಮಾಡಬೇಕಾಯಿತು. ಆ ಕಾರಣ, ಈ ವ್ಯಕ್ತಿಗಳನ್ನು ಹೊರತುಪಡಿಸಿ ನಿಮ್ಮ ಮನದಲ್ಲಿರುವ ಅರ್ಹ ವ್ಯಕ್ತಿ ಯಾರಾದರೂ ಇದ್ದರೆ ನಮ್ಮ ಗಮನಕ್ಕೆ ತನ್ನಿ ಎಂಬ ಕರೆಯನ್ನೂ ನೀಡಿದ್ದೆವು.
ಯಾಕೆ ರಮ್ಯಾ ಹೆಸರನ್ನು ಸೇರಿಸಿದ್ದೀರಿ? ಈ ಪಟ್ಟಿಯಲ್ಲಿ ಇರುವುದಕ್ಕೆ ಯಡಿಯೂರಪ್ಪನವರಿಗೆ ಇರುವ ಅರ್ಹತೆಯಾದರೂ ಏನು? ಎಟಿಎಂ ಹಲ್ಲೆಗೊಳಗಾಗಿರುವ ಜ್ಯೋತಿ ಉದಯ್ ಅವರ ಸಾಧನೆ ಏನು ಅಂತ ಗೊತ್ತಾಗಲಿಲ್ಲ? ಇಷ್ಟು ದಿನಗಳಲ್ಲಿ ಮುಖ್ಯಮಂತ್ರಿಯಾಗಿ 'ಶಾದಿಭಾಗ್ಯ' ಹೊರತಾಗಿ ಸಿದ್ದರಾಮಯ್ಯ ಮಾಡಿರುವ ಸಾಧನೆಯಾದರೂ ಏನು? ಮುಂತಾದ ಪ್ರಶ್ನೆಗಳ ಬಾಣಗಳನ್ನು ಪ್ರೀತಿಯ ಓದುಗರು ಕಾಮೆಂಟ್ ಸ್ಥಳದಲ್ಲಿ ಎಸೆದಿದ್ದಾರೆ. ಕೆಲ ಅಭಿಮಾನಿಗಳು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಕೂಡ ಸೂಚಿಸಿದ್ದರು. ಎಲ್ಲ ಕಾಮೆಂಟುಗಳನ್ನೂ ಲೇಖನದಲ್ಲಿ ಪ್ರಕಟಿಸಲಾಗಿದೆ. ಧನ್ಯವಾದಗಳು.
ಅತಿಹೆಚ್ಚು ಮತಗಳನ್ನು ಪಡೆದಿರುವ ಎಸ್ಆರ್ ಹಿರೇಮಠ ಅವರು ಮೊದಲ ಸ್ಥಾನದಲ್ಲಿದ್ದರೆ, 'ಭಾರತರತ್ನ' ಪ್ರೊ. ಸಿಎನ್ಆರ್ ರಾವ್ ಅವರು ಎರಡನೇ ಸ್ಥಾನ ಅಲಂಕರಿಸಿದ್ದಾರೆ. ಅಚ್ಚರಿಯ ಸಂಗತಿಯೆಂದರೆ ಹೊಸಪಕ್ಷ ಕಟ್ಟಿ ಸೋತ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಮೂರನೇ ಸ್ಥಾನದಲ್ಲಿದ್ದಾರೆ. ಬಿಜೆಸಿ ಸರಕಾರ ಉರುಳಿಸಿ, ಪಕ್ಷದಲ್ಲಿನ ವಿರೋಧ ಮೆಟ್ಟಿನಿಂತು ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ನಾಲ್ಕನೇ ಸ್ಥಾನದಲ್ಲಿದ್ದರೆ, ಕಳೆದ ವರ್ಷ ಭೀಕರವಾಗಿ ಹತ್ಯೆಗೀಡಾಗಿದ್ದ ಸೌಮ್ಯಳ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಹೋರಾಟ ನಡೆಸಿರುವ ಕೇಮಾರು ಶ್ರೀಗಳು ಐದನೇ ಸ್ಥಾನ ಪಡೆದಿದ್ದಾರೆ.
ಆದರೆ, ನಮ್ಮ ಓದುಗರು ದಡ್ಡರಲ್ಲ. ಕೊನೆಗೂ ಸೂಕ್ತವಾದ ವ್ಯಕ್ತಿಯನ್ನೇ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಈ ವರ್ಷವೇ ಪ್ರತಿಷ್ಠಿತ 'ಭಾರತರತ್ನ' ಪ್ರಶಸ್ತಿಗೆ ಭಾಜನರಾಗಿರುವ ನಾಡಿನ ಹೆಮ್ಮೆಯ ವಿಜ್ಞಾನಿ ಪ್ರೊ. ಸಿಎನ್ಆರ್ ರಾವ್ ಅವರು ಕೂಡ, ಓದುಗರ ಪ್ರಕಾರ ಈ ಪ್ರಶಸ್ತಿಗೆ ಅರ್ಹರು ಎಂಬುದರಲ್ಲಿ ಎರಡು ಮಾತಿಲ್ಲ. ಮತದಾನ ಶುರುವಾದಂದಿನಿಂದ ಕೊನೆಯ ದಿನವಾದ ಡಿಸೆಂಬರ್ 31ರವರೆಗೆ ಸಿಆರ್ ಹಿರೇಮಠ ಮತ್ತು ಪ್ರೊ. ಸಿಎನ್ಆರ್ ರಾವ್ ಅವರ ನಡುವೆ ಭಾರೀ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ಹಿರೇಮಠ ಅವರನ್ನು ವಿಜಯಿಶಾಲಿಯನ್ನಾಗಿ ಓದುಗರು ಮಾಡಿದ್ದಾರೆ. ಎರಡನೇ ಸ್ಥಾನದಲ್ಲಿ ಸಿಎನ್ಆರ್ ರಾವ್ ಅವರು ಇದ್ದಾರೆ.
ಎಸ್ಆರ್ ಹಿರೇಮಠ ಅವರು ಮಾಡುತ್ತಿರುವ ಹೋರಾಟಕ್ಕೆ ಇನ್ನಷ್ಟು ಶಕ್ತಿ ದೊರೆಯಲಿ ಎಂಬ ಆಶಯದೊಂದಿಗೆ 2013ನೇ ವರ್ಷಕ್ಕೆ ತೆರೆ ಎಳೆಯೋಣ. ಹಾಗೆಯೆ, ಭ್ರಷ್ಟಾಚಾರದ ವಿರುದ್ಧ ಅವರು ನಡೆಸುತ್ತಿರುವ ಹೋರಾಟದಲ್ಲಿ ನಾವೂ ಭಾಗಿಯಾಗೋಣ ಎಂಬ ಸಂಕಲ್ಪದೊಂದಿಗೆ ಹೊಸ ವರ್ಷಕ್ಕೆ ಹೆಜ್ಜೆಯಿಡೋಣ. 'ಕರ್ನಾಟಕ ವರ್ಷದ ವ್ಯಕ್ತಿ 2013' ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಮತಗಳು ಬಿದ್ದಿವೆ ಎಂಬುದನ್ನು ಕೆಳಗೆ ನೀಡಲಾಗಿದೆ. ಇಡೀ ವರ್ಷ ನಮ್ಮೊಂದಿಗೆ ನಮ್ಮವರಾಗಿ, ನಮ್ಮನ್ನು ತಿದ್ದಿತೀಡಿ ಕೈಹಿಡಿದು ನಡೆಸುತ್ತಿರುವ ಎಲ್ಲ ಓದುಗ ಬಾಂಧವರಿಗೆ ಹೊಸವರ್ಷದ ಹಾರ್ದಿಕ ಶುಭಾಶಯಗಳು. ನಿಮ್ಮ ಪ್ರೀತಿ ಹೀಗೆಯೇ ಇರಲಿ.

-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications