"2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ..."
ಬೆಂಗಳೂರು, ನವೆಂಬರ್ 19: ತುಂಗಭದ್ರಾ ಡ್ಯಾಮ್ ನಿಂದ ಎರಡನೇ ಬೆಳೆಗೆ ನೀರು ಹರಿಸುವಂತೆ ಒತ್ತಾಯಿಸಿ, ತುಂಗಭದ್ರಾ ಡ್ಯಾಮ್ ಗೇಟ್ ಅಳವಡಿಕೆ ವಿಳಂಬ ಧೋರಣೆ ಖಂಡಿಸಿ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಸಾವಿರಾರು ರೈತರ ನೇತೃತ್ವದಲ್ಲಿ ನವೆಂಬರ್ 25 ರಂದು ಬೃಹತ್ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ಈ ಬಗ್ಗೆ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ ಭವನದಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ ವ್ಯಾಪ್ತಿಯ 4 ಜಿಲ್ಲೆಗಳ 2ನೇ ಬೆಳೆಗೆ ನೀರು ಹರಿಸಲು ಸಾಧ್ಯವಾಗದಿದ್ದರೆ ಪ್ರತಿ ಎಕರೆಗೆ 50,000 ರೂ.ಪರಿಹಾರ ನೀಡಬೇಕು. ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರಗಳನ್ನ ತೆರೆಯ ಬೇಕೆಂದು ರೈತರ ಜತೆ ಹೋರಾಟ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿ ಕೆಲಸ ಮಾಡುತ್ತಿದೆ. ಅತಿವೃಷ್ಟಿಗೆ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಇನ್ನು ಸಂಕಷ್ಟದಲ್ಲಿರುವ ರೈತರ ಎರಡನೇ ಬೆಳೆಗೂ ನೀರು ಅಂದ್ರೆ ಹೇಗೆ.? ರೈತರ ಸಮಸ್ಯೆಗಳಿಗೆ ಈ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಇನ್ನು ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದೆ. ಭತ್ತದ ದರವು ಕುಸಿದಿದೆ. ಸರ್ಕಾರ ಈವರೆಗೂ ಖರೀದಿ ಕೇಂದ್ರ ಆರಂಭಿಸಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಈ ನಾಲ್ಕು ಜಿಲ್ಲೆಗಳ 10 ಲಕ್ಷ ಎಕರೆ ಜಮೀನು ಬದುಕೇ ತುಂಗಭದ್ರಾ ಜಲಾಶಯದ ಮೇಲೆ ನಿಂತಿದೆ. ಜಲಾಶಯದ ಕ್ರಸ್ಟ್ ಕಿತ್ತು ಹೋಗಿದ್ದರಿಂದ ಸಾವಿರಾರು ಕ್ಯೂಸೆಕ್ ನೀರು ಸಮುದ್ರ ಪಾಲಾಗಿದೆ. ಸರ್ಕಾರ ಆಂಧ್ರ, ತೆಲಂಗಾಣದ ಸಿಎಂಗಳ ಜತೆ ಸರ್ಕಾರ ಚರ್ಚೆ ಮಾಡಲಿ. ನಾವು ಕುಮಾರಣ್ಣ ಅವರ ಮೂಲಕ ಆಂಧ್ರದ ಸಿಎಂಗೆ ಒಪ್ಪಿಸ್ತೇವೆ ಎಂದು ಹೇಳಿದರು. ಜಲಾಶಯನೋ ಅಥವಾ ಬೆಳೆಯೋ ಅನ್ನೋ ವಿಚಾರದಲ್ಲಿ ಸರ್ಕಾರ ರೈತರ ಜೊತೆಗೆ ಚರ್ಚೆ ಮಾಡಬೇಕು.ಎಲ್ಲಾ ಪಕ್ಷದ ನಾಯಕರು ಹಾಗೂ ನೀರಾವರಿ ತಜ್ಞರ ಸಭೆ ಕರೆಯಬೇಕು. ಎಂದು ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.
ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು. ಬಾಡಿಗೆಗೆ ಬದಲು ಖರೀದಿಗೆ ಕಡಿಮೆ ವೆಚ್ಚ. ಇದು ತಪ್ಪು ಲೆಕ್ಕಾಚಾರವಲ್ಲ. ಗಣಿತವನ್ನು ಮಧ್ಯಾಹ್ನದ ಬೆಳಕಲ್ಲೇ ಕೊಂದು, ಹೂತು, ದಹನ ಮಾಡಿದಂತದ್ದು ಎಂದು ನಿಖಿಲ್ ಅವರು ಗಂಭೀರವಾಗಿ ಆರೋಪಿಸಿದರು.
ಬೆಂಗಳೂರಿನಲ್ಲಿ ಬಿಬಿಎಂಪಿ ಯಾರ್ಡ್ಗಳಲ್ಲಿ 26 ಕಸ ಗುಡಿಸುವ ಯಂತ್ರಗಳು ಬಳಕೆಯಾಗದೆ ಬಿದ್ದಿವೆ. ಆದರೆ ಡಿಸಿಎಂ ನೇತೃತ್ವದ ಕಾಂಗ್ರೆಸ್ ಸರ್ಕಾರವು ಈಗ ₹613 ಕೋಟಿ ಖರ್ಚು ಮಾಡಿ, ಪ್ರತಿ ಯಂತ್ರಕ್ಕೆ ₹1.9 ಕೋಟಿಯಂತೆ 46 ಹೆಚ್ಚುವರಿ ಬಾಡಿಗೆ ನೀಡಲು ಬಯಸಿದೆ. ಅದೇ ಯಂತ್ರಗಳನ್ನು ಖರೀದಿಸಲು ಕೇವಲ ₹1.3-3 ಕೋಟಿ ವೆಚ್ಚವಾಗುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಯಂತ್ರಗಳನ್ನು ಖರೀದಿಸಲು ತಜ್ಞರ ಸಮಿತಿಯು ಶಿಫಾರಸು ಮಾಡಿತು. ಆದರೆ ಬಿಸಿಜಿ ಕಾರ್ಯಕ್ಷಮತೆಗಾಗಿ ಪಾವತಿ ಮಾದರಿಯನ್ನು ಪ್ರತಿಪಾದಿಸಿತು. ಆದರೂ ಡಿಸಿಎಂ ಮತ್ತು ಅವರ ತಂಡ ಅತ್ಯಂತ ದುಬಾರಿ ಆಯ್ಕೆಯನ್ನು ಆರಿಸಿ, ಅದನ್ನು ಆಡಳಿತ ಎಂದು ಲೇಬಲ್ ಮಾಡಿ ಹೊಸ ಆರ್ಥಿಕ ಸಿದ್ಧಾಂತವನ್ನು ರಚಿಸಿದೆ ಎಂದು ನಿಖಿಲ್ ಅವರು ದೂರಿದ್ದಾರೆ.
-
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications