ಲೋಕಸಭೆ ಚುನಾವಣೆ ನಂತರ 5 ಗ್ಯಾರಂಟಿ ರದ್ದು; ಶಾಸಕರ ಮೂಲಕವೇ ಕಾಂಗ್ರೆಸ್ ಈ ಮಾತು ಹೇಳಿಸಿದೆ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು, ಫೆಬ್ರವರಿ 01: ಲೋಕಸಭೆ ಚುನಾವಣೆ ಮುಗಿದ ನಂತರ ರಾಜ್ಯ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನು ವಾಪಸ್ ಪಡೆಯಲಿದೆ. ಅದೇ ಮಾತನ್ನು ತನ್ನ ಶಾಸಕರೊಬ್ಬರಿಂದ ಹೇಳಿಸಿದೆ ಎಂದು ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಾಗಡಿ ಶಾಸಕ ಬಾಲಕೃಷ್ಣ ಅವರು "ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ" ಎಂದು ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರು ಹೇಳಿರುವುದು ಕಾಂಗ್ರೆಸ್ ಸರಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ. ಕೊಟ್ಟ ಕೈಯ್ಯಲ್ಲೆ ಕಸಿದುಕೊಳ್ಳುವ ಹುನ್ನಾರ ಇಲ್ಲಿ ಸ್ಫುಟವಾಗಿ ಗೋಚರಿಸುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಪಕ್ಷ, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಅಪ್ಪಣೆ ಇಲ್ಲದೆ ಶಾಸಕರು ಇಂಥ ಮಹತ್ವದ ಹೇಳಿಕೆಯನ್ನು ಅದೂ ಚುನಾವಣೆ ಹೊತ್ತಿನಲ್ಲಿ ಕೊಡಲು ಸಾಧ್ಯವೇ? ಅಲ್ಲಿಗೆ ಯುದ್ಧಕ್ಕೆ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ ಎಂದಿರುವ ಅವರು, ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಒದ್ದಾಡುತ್ತಿರುವ ಸರಕಾರವು, ತನ್ನ ಶಾಸಕರೊಬ್ಬರ ಮೂಲಕ ರದ್ದು ಮಾಡುತ್ತೇವೆ ಎಂದು ಹೇಳಿಸಿದೆ ಎಂದೇ ಭಾವಿಸಬೇಕಾಗುತ್ತದೆ. ಅದು ನಿಜವೂ ಹೌದು ಎನ್ನುವುದು ನನ್ನ ಭಾವನೆ ಎಂದು ಅವರು ತಿಳಿಸಿದ್ದಾರೆ.
ಆ ಶಾಸಕರ ಹೇಳಿಕೆಯ ಧಾಟಿ ಹೇಗಿದೆ ಎಂದರೆ, ಅವರು ಜನರಿಗೆ ಸ್ಪಷ್ಟವಾದ ಬೆದರಿಕೆ ಒಡ್ಡಿದ್ದಿದ್ದಾರೆ. "ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ.. ಇಲ್ಲವಾದರೆ ನಿಮಗೆ ಕೊಟ್ಟಿರುವ ಗ್ಯಾರಂಟಿಗಳನ್ನು ಮುಲಾಜಿಲ್ಲದೆ ರದ್ದು ಮಾಡುತ್ತೇವೆ" ಎಂದು ಅವರು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ, ಜನರ ನಂಬಿಕೆಗೆ ಎಸಗಿದ ಅಪಚಾರ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷ ಅರ್ಥ ಮಾಡಿಕೊಳ್ಳಬೇಕು. ಚುನಾವಣೆಯಲ್ಲಿ ಗೆಲ್ಲುವ ಏಕೈಕ ಉದ್ದೇಶದಿಂದ ನೀವು ಪಂಚ ಗ್ಯಾರಂಟಿಗಳ ಭರವಸೆ ಕೊಟ್ಟಿದ್ದಿರಿ. ಆಮೇಲೆ ಅವುಗಳನ್ನು ಜಾರಿ ಮಾಡಿದ್ದೀರಿ. ಗ್ಯಾರಂಟಿ ಕೊಡಿ, ನಿಮಗೆ ವೋಟು ಹಾಕುತ್ತೇವೆ ಎಂದು ಜನರೇನು ಕೇಳಿರಲಿಲ್ಲ. ವಾಸ್ತವ ಸ್ಥಿತಿ ಹೀಗಿದ್ದ ಮೇಲೆ ಈಗ ಗ್ಯಾರಂಟಿಗಳನ್ನು ಅದ್ಹೇಗೆ ವಾಪಸ್ ಪಡೆಯುತ್ತೀರಿ? ಕಾಂಗ್ರೆಸ್ ಸರಕಾರದ ವರ್ತನೆಗೆ ನನ್ನ ಹಾಗೂ ನಮ್ಮ ಪಕ್ಷದ ತೀವ್ರ ವಿರೋಧವಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ












Click it and Unblock the Notifications