Nikhil Kumaraswamy: ಸಿಎಂ ಕುರ್ಚಿ ಉಳಿಸಿಕೊಳ್ಳುವುದಕ್ಕೆ ಹಾಸನದಲ್ಲಿ ಸಮಾವೇಶ ಮಾಡ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು,ನವೆಂಬರ್ 30: ರಾಜ್ಯದ ಮುಖ್ಯಮಂತ್ರಿಗಳು ಕುರ್ಚಿ ಬಲಪಡಿಸಿಕೊಳ್ಳೋಕೆ ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದಾರೆ. ನಿನ್ನೆ ದಿನ ಸ್ವ ಪಕ್ಷದಲ್ಲಿಯೇ ಪಕ್ಷವನ್ನು ಬಿಟ್ಟು ವೈಯಕ್ತಿಕವಾಗಿ ಸಮಾವೇಶ ಮಾಡಲಾಗುತ್ತಿದೆ ಎಂದು ಆಕ್ಷೇಪ ಬಂದಿದೆ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ಜೆಪಿ ನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು,ರಾಷ್ಟ್ರೀಯ ನಾಯಕರ ಗಮನ ಸೆಳೆಯೋಕೆ ಶಕ್ತಿ ಪ್ರದರ್ಶನ ಸಮಾವೇಶ ಮಾಡ್ತಿದ್ದಾರೆ. ಅನ್ನೊಂದು ನಮ್ಮ ಅನಿಸಿಕೆ ಜೆಡಿಎಸ್ ಮತ್ತು ಬಿಜೆಪಿಗೆ ಈ ಸಮಾವೇಶದ ಮೂಲಕ ಏನು ಸಂದೇಶ ಕೊಡೋಕೆ ಅಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಹಾಸನದಲ್ಲಿ ಸಮಾವೇಶ ಮಾಡುವುದರಿಂದ ಜೆಡಿಎಸ್ ಗೆ ಹಿನ್ನಡೆ ವಿಚಾರಕ್ಕೆ ಮಾತನಾಡಿದ ಅವರು, ಸಮಾವೇಶ ಯಾರು ಎಲ್ಲಿ ಬೇಕಾದರು ಮಾಡಬಹುದು ಇದ್ರಿಂದ ಹಿನ್ನಡೆ ಆಗುವ ಪ್ರಶ್ನೆ ಇಲ್ಲ.ಇನ್ನು ಚುನಾವಣೆಗೆ ಮೂರುವರೆ ವರ್ಷ ಬಾಕಿ ಇದೆ ಸಮಾವೇಶ ಯಾವ ಪುರುಷಾರ್ಥಕ್ಕೆ ಮಾಡ್ತಿದ್ದಾರೆ ಗೊತ್ತಿಲ್ಲ ಎಂದು ಕಿಡಿಕಾರಿದರು. ಸರ್ಕಾರದ ವೈಫಲ್ಯಗಳನ್ನು ಈ ಸಮಾವೇಶ ಮಾಡ್ತಿದ್ದಾರೆ. ಸರ್ಕಾರದ ಸಾಧನೆಗಳು ಏನಿದೆ ಎಂಬುದು ಜನ ಸಾಮಾನ್ಯರ ಪ್ರಶ್ನೆ ಆಗಿದೆ. ಈ ಸರ್ಕಾರ ಭ್ರಷ್ಟಾಚಾರ ಹಗರಣಗಳಲ್ಲಿ ಮುಳುಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಹೊಸಪೇಟೆ ಕಾಂಗ್ರೆಸ್ ಶಾಸಕರೇ ಎರಡು ಗ್ಯಾರಂಟಿ ಕಡಿಮೆ ಮಾಡಿ ನಮಗೆ ಅನುದಾನ ಕೊಡಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷ ಆಗಿದೆ ಆಡಳಿತಕ್ಕೆ ಬಂದು. ಕಾಂಗ್ರೆಸ್ ಶಾಸಕರೇ ಪ್ರತಿಕ್ರಿಯೆ ಕೊಡ್ತಾ ಇರೋದನ್ನ ನೋಡಿದ್ದೇವೆ. ಈ ತರ ಹೇಳಿಕೆ ಕೊಟ್ಟ ಸಂಜೆಯ ಒಳಗೆ ಯೂಟರ್ನ್ ಹೊಡೆಸಿದ್ರು ಇದು ಕಾಂಗ್ರೆಸ್ ಶಾಸಕರ ಪರಿಸ್ಥಿತಿ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅನುದಾನ ನಿಡ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ. ಆಗಿದ್ದಾಗ ಜೆಡಿಎಸ್ ಬಿಜೆಪಿ ಶಾಸಕರ ಪರಿಸ್ಥಿತಿ ಏನಾಗಿದೆ. ಒಂದು ರೂಪಾಯಿ ಅನುದಾನ ಬಿಡುಗಡೆ ಆಗಿಲ್ಲ.ನಯಾ ಪೈಸೆ ಇವತ್ತು ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಕೊಡ್ತಾ ಇಲ್ಲ.ಈ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಇದೆ ಎಂದು ಕಿಡಿಕಾರಿದರು.
ಜೆಡಿಎಸ್ ಶಾಸಕರನ್ನ ಕಾಂಗ್ರೆಸ್ ಗೆ ಕರೆತರುವ ಕುರಿತು ಸಿಪಿ ಯೋಗೇಶ್ವರ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಅತಿ ಹೆಚ್ಚು ಪ್ಯಾಕೇಜ್ ಎಲ್ಲಿ ಸಿಗುತ್ತೆ ಅಂತ ಕಾಂಗ್ರೆಸ್ ಗೆ ಹೋಗಿದ್ದಾರೆ. ಎಷ್ಟು ದಿನ ಕಾಂಗ್ರೆಸ್ ನಲ್ಲಿ ಉಳಿಯುತ್ತಾರೆ ಅನ್ನೋದು ಪ್ರಶ್ನೆ. ಅವರನ್ನ ನಂಬಿಕೊಂಡು ನಮ್ಮ ಶಾಸಕರು ಕಾಂಗ್ರೆಸ್ ಗೆ ಹೋಗುವ ಪರಿಸ್ಥಿತಿ ಇಲ್ಲ ಎಂದು ಕಿಡಿಕಾರಿದರು.
ನಮ್ಮ ಪಕ್ಷದ ಶಾಸಕರು ರಾಜಕೀಯ ಹೊರತುಪಡಿಸಿ ಭಾವನಾತ್ಮಕವಾದ ರಕ್ತಗತ ಸಂಪರ್ಕ ಹೊಂದುಕೊಂಡಿದ್ದಾರೆ. ನನ್ನ ಜೊತೆ ನಮ್ಮ ಶಾಸಕರು ನಿರಂತರ ಸಂಪರ್ಕದಲ್ಲಿದ್ದಾರೆ ಕ್ಷೇತ್ರದ ಅನುದಾನ ಸಮಸ್ಯೆ ಬಗ್ಗೆಯೂ ಚರ್ಚೆ ಮಾಡುತ್ತಿದ್ದಾರೆ. ನಮ್ಮ ಯಾವುದೇ ಶಾಸಕರು ಅಸಮಾಧಾನಿತರು ಇಲ್ಲ. ಅಸಮಾಧಾನಿತರು ಕಾಂಗ್ರೆಸ್ ನಲ್ಲಿ ಹೆಚ್ಚಾಗಿದ್ದಾರೆ.ಕಾಂಗ್ರೆಸ್ ನಲ್ಲಿಯೇ ಆ ಪರಿಸ್ಥಿತಿ ಇದೆ.139 ಶಾಸಕರನ್ನ ಕಾಂಗ್ರೆಸ್ ಪಕ್ಷ ಉಳಿಸಿಕೊಳ್ಳುವ ಕೆಲಸ ಮಾಡಲಿ ಎಂದರು.
ಒಕ್ಕಲಿಗ ಸ್ವಾಮೀಜಿ ವಿರುದ್ಧ ಎಫ್ಐಆರ್, ನೋಟಿಸ್ ವಿಚಾರಕ್ಕೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ಮೇಲೆ ಒಂದು ಸಮುದಾಯ ಓಲೈಕೆ ಮಾಡಿಕೊಳ್ಳೋಕೆ ಮತ್ತೊಂದು ಸಮುದಾಯವನ್ನ ಟಾರ್ಗೆಟ್ ಮಾಡ್ಕೊಂಡು ಹೋಗ್ತಾ ಇದ್ದಾರೆ. ಇದಕ್ಕೆ ಮುಂದಿನ ದಿನಗಳಲ್ಲಿ ಜನತೆ ಉತ್ತರ ಕೊಡ್ತಾರೆ ಕಾದು ನೋಡಬೇಕು ಎಂದು ತಿಳಿಸಿದರು.
ಜಿ.ಟಿ. ದೇವೇಗೌಡರ ಅಸಮಾಧಾನ ವಿಚಾರ. ಇದು ಇದೇ ಮೊದಲೇನು ಅಲ್ಲ ಈ ಹಿಂದೆ ವೈಮನಸ್ಸು ಬಂದಾಗ ನಾನೇ ಸೇತುವೆಯಾಗಿ ಕೆಲಸ ಮಾಡಿದ್ದೀನಿ. ಅವರನ್ನ ಮತ್ತೆ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ಈ ಹಿಂದೆ ಪ್ರಮಾಣಿಕ ಕೆಲಸ ಮಾಡಿದ್ದೇನೆ. ಈಗಲೂ ಸಣ್ಣಪುಟ್ಟ ವೈಮನಸ್ಸನ್ನ ಹೊರ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಅದನ್ನ ಪಕ್ಷದ ಹಿರಿಯ ಶಾಸಕರು, ನಾವೆಲ್ಲ ಸೇರಿ ಸರಿ ಮಾಡುತ್ತೇವೆ ಎಂದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications