ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಹೋದರ ಪ್ರಜ್ವಲ್ ರೇವಣ್ಣ ಬಗ್ಗೆ ನಿಖಿಲ್ ಕುಮಾರಸ್ವಾಮಿ ಫೇಸ್‌ಬುಕ್ ಪೋಸ್ಟ್‌

|
Google Oneindia Kannada News

ಬೆಂಗಳೂರು, ಜೂನ್ 22: 'ನಮ್ಮಿಬ್ಬರ ನಡುವೆ ಯಾವುದೇ ಮನಸ್ತಾಪವಿಲ್ಲ' ಎಂದು ಎಷ್ಟೆ ಬಾರಿ ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಹೇಳಿದ್ದರೂ ಸಹ, ಇವರಿಬ್ಬರ ನಡುವೆ ವೈಮನಸ್ಯವೊಂದಿದೆ ಎಂಬ ಸುದ್ದಿ ಪದೇ-ಪದೇ ಮುನ್ನಲೆಗೆ ಬರುತ್ತದೆ.

ಅದರಂತೆಯೇ ಈ ಬಾರಿಯೂ ಸಹ ಈ ರೀತಿಯ ಸುದ್ದಿಯೊಂದು ಹರಿದಾಡುತ್ತಿತ್ತು. ಅದಕ್ಕೆ ಕಾರಣ ನಿಖಿಲ್ ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಅವರಿಗೆ ಅಭಿನಂದನೆ ಸಲ್ಲಿಸಿಲ್ಲ, ಪ್ರಜ್ವಲ್ ರೇವಣ್ಣ ಗೆದ್ದಿರುವುದು ನಿಖಿಲ್ ಅವರ ಪಚನವಾಗಿಲ್ಲವೆನ್ನಲಾಗಿತ್ತು. ಆದರೆ ನಿಖಿಲ್ ಅವರು ಇದಕ್ಕೆಲ್ಲಾ ವಿರಾಮವಿಟ್ಟಿದ್ದಾರೆ.

ನಿಖಿಲ್ ರಾಜಕೀಯ ಭವಿಷ್ಯದ ಬಗ್ಗೆ ದೇವೇಗೌಡ್ರು ಹೇಳಿದ್ದೇನು? ನಿಖಿಲ್ ರಾಜಕೀಯ ಭವಿಷ್ಯದ ಬಗ್ಗೆ ದೇವೇಗೌಡ್ರು ಹೇಳಿದ್ದೇನು?

ನಿಖಿಲ್ ಕುಮಾರಸ್ವಾಮಿ ಅವರು ಸಹೋದರ, ಸಂಸದ ಪ್ರಜ್ವರ್ ರೇವಣ್ಣ ಅವರ ಗೆಲುವಿನ ಬಗ್ಗೆ ಚುಟುಕಾದ ಫೇಸ್‌ಬುಕ್ ಪೋಸ್ಟ್‌ ಒಂದನ್ನು ಹಾಕಿದ್ದು, ಸಂಸದರಾಗಿ ಆಯ್ಕೆ ಆಗಿದ್ದಕ್ಕೆ ಶುಭ ಹಾರೈಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರ ಈ ಪೋಸ್ಟ್‌ಗೆ ಎರಡೇ ಗಂಟೆಗಳಲ್ಲಿ ಸಾವಿರಾರು ಮಂದಿ ಲೈಕ್ ಮಾಡಿದ್ದು, ನೂರಾರು ಮಂದಿ ಕಮೆಂಟ್ ಮಾಡಿದ್ದರು. ಹಲವರು ಶೇರ್ ಸಹ ಮಾಡಿದ್ದಾರೆ.

'ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಸಹೋದರ'

'ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಸಹೋದರ'

ಹಾಸನ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ‌ ಸಂಸತ್ತಿನಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕಾರ ಮಾಡಿದ ಆತ್ಮೀಯ ಸಹೋದರ ಪ್ರಜ್ವಲ್ ರೇವಣ್ಣನವರಿಗೆ ಶುಭ ಕೋರುತ್ತೇನೆ ಎಂದು ನಿಖಿಲ್ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ನಿಖಿಲ್-ಪ್ರಜ್ವಲ್ ಮಿಂಚಿದ್ದು ಸಾಕು: ಜೆಡಿಎಸ್ ಟಾಪ್ ಲೀಡರ್ ಅಸಮಾಧಾನನಿಖಿಲ್-ಪ್ರಜ್ವಲ್ ಮಿಂಚಿದ್ದು ಸಾಕು: ಜೆಡಿಎಸ್ ಟಾಪ್ ಲೀಡರ್ ಅಸಮಾಧಾನ

'ಸಂಸತ್ತಿನಲ್ಲಿ ಸಮರ್ಥವಾಗಿ ದನಿ ಎತ್ತುವೆಯೆಂಬ ನಂಬಿಕೆ ಇದೆ'

'ಸಂಸತ್ತಿನಲ್ಲಿ ಸಮರ್ಥವಾಗಿ ದನಿ ಎತ್ತುವೆಯೆಂಬ ನಂಬಿಕೆ ಇದೆ'

ನೆಲ, ಜಲ, ಭಾಷೆ, ರೈಲ್ವೆ ಯೋಜನೆ ಹಾಗೂ ನಮ್ಮ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು‌ ಸಂಸತ್ತಿನಲ್ಲಿ ಸಮರ್ಥವಾಗಿ ಧ್ವನಿ ಎತ್ತುವ ಮೂಲಕ ಪ್ರಾದೇಶಿಕ ಹಿತಾಸಕ್ತಿಯನ್ನು ರಕ್ಷಿಸುವ ಪ್ರಜಾಸತ್ತಾತ್ಮಕ ಹೋರಾಟ ನಡೆಸಲಿದ್ದಾರೆ ಎನ್ನುವ ನಂಬಿಕೆ‌ ನನ್ನದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಪ್ರಜ್ವಲ್ ಅವರ ಮೇಲೆ ಭರವಸೆ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸಿನಿಂದ ನಿಖಿಲ್ ಕುಮಾರಸ್ವಾಮಿ ಔಟ್! ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸಿನಿಂದ ನಿಖಿಲ್ ಕುಮಾರಸ್ವಾಮಿ ಔಟ್!

ಗೆದ್ದ ಪ್ರಜ್ವಲ್ ರೇವಣ್ಣ, ಸೋತ ನಿಖಿಲ್ ಕುಮಾರಸ್ವಾಮಿ

ಗೆದ್ದ ಪ್ರಜ್ವಲ್ ರೇವಣ್ಣ, ಸೋತ ನಿಖಿಲ್ ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ಅವರು ಹಾಸನ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಆದರೆ ಜೆಡಿಎಸ್ ಪಕ್ಷದಲ್ಲಿ ಅವರ ಆಂತರಿಕ ಪ್ರತಿಸ್ಪರ್ಧಿ ಎನಿಸಿಕೊಂಡಿದ್ದ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸೋಲು ಕಂಡಿದ್ದಾರೆ. ಇದು ಇವರಿಬ್ಬರ ನಡುವೆ ಕಂದಕ ಉಂಟುಮಾಡಿದೆ ಎನ್ನಲಾಗಿತ್ತು. ಆದರೆ ನಿಖಿಲ್ ಅವರು ಅಭಿನಂದನೆ ಸಲ್ಲಿಸುವ ಮೂಲಕ ಅದಕ್ಕೆ ತೆರೆ ಎಳೆದಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಸಮರ್ಥರು ಎಂದ ವಿಶ್ವನಾಥ್ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಸಮರ್ಥರು ಎಂದ ವಿಶ್ವನಾಥ್

ನಿಖಿಲ್‌ ಕುಮಾರಸ್ವಾಮಿಗೆ ಪಕ್ಷದ ಮುಖ್ಯ ಜವಾಬ್ದಾರಿ?

ನಿಖಿಲ್‌ ಕುಮಾರಸ್ವಾಮಿಗೆ ಪಕ್ಷದ ಮುಖ್ಯ ಜವಾಬ್ದಾರಿ?

ಪ್ರಜ್ವಲ್ ರೇವಣ್ಣ ಅವರು ಲೋಕಸಭೆಗೆ ಆಯ್ಕೆ ಆಗಿರುವ ಕಾರಣ ನಿಖಿಲ್ ಕುಮಾರಸ್ವಾಮಿ ಅವರಿಗೆ ಪಕ್ಷದ ಪ್ರಮುಖ ಜವಾಬ್ದಾರಿಯನ್ನು ಹೊರಿಸಲು ದೇವೇಗೌಡ ಅವರು ಚಿಂತಿಸಿದ್ದಾರೆ ಎನ್ನಲಾಗಿದ್ದು, ಜೆಡಿಎಸ್ ಯುವ ಘಟಕದ ಸಾರಥ್ಯವನ್ನು ದೇವೇಗೌಡ ಅವರು ನಿಖಿಲ್ ಕುಮಾರಸ್ವಾಮಿ ಅವರಿಗೆ ನೀಡಲಿದ್ದಾರೆ ಎನ್ನಲಾಗಿದೆ.

English summary
JDS leader Nikhil Kumaraswamy congratulated his brother and new MP Prajwal Revanna through Facebook today. First time Nikhil Kumaraswamy congratulating his brother after the MP election result.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X