ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ಅಡ್ಡ ಹಾಕಿದ್ದು ಕುಮಾರಸ್ವಾಮಿ ಎಂಬ ಡಿಕೆಶಿ ಟಾಂಗ್‌ ಕೊಟ್ಟ ನಿಖಿಲ್‌

ಬೆಂಗಳೂರು,ಏಪ್ರಿಲ್‌ 21: ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ಅಡ್ಡ ಹಾಕಿದ್ದು ಹೆಚ್‌ ಡಿ ಕುಮಾರಸ್ವಾಮಿ ಎಂಬ ಡಿ ಕೆ ಶಿವಕುಮಾರ್‌ ಅವರ ಹೇಳಿಕೆಗೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ. ಕೈಲಾಗದೇ ಇರೋರು ಕುಣಿಯೋದಕ್ಕೆ ನೆಲ ಡೊಂಕು ಎಂದು ಡಿ ಕೆ ಶಿವಕುಮಾರ್ ವಿರುದ್ದ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಅವರು ಕೇಂದ್ರದ ಮೇಲೆ ಒತ್ತಡ ಹಾಕಿದ್ದಾರೆ ಅನ್ನೋದಕ್ಕೆ ಏನಾದ್ರು ಸಾಕ್ಷಿ ಇದೆಯಾ.? ರಾಮನಗರ ಜಿಲ್ಲೆಯ ಅಸ್ಮಿತೆ ಕಾಪಾಡಬೇಕು ಅನ್ನೋದು ಜಿಲ್ಲೆಯ ಜನರ ಭಯಕೆ. ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ರೆ ಅದು ಅಭಿವೃದ್ಧಿ ಆಗುತ್ತಾ? ಎಂದು ಕಿಡಿಕಾರಿದರು.

ಸ್ಮಾರ್ಟ್ ಮೀಟರ್ ನಲ್ಲಿ‌ ದೊಡ್ಡ ಅಕ್ರಮ ನಡೆಯುತ್ತಿದೆ. 7500 ಸಾವಿರ ಕೋಟಿ ಹಗರಣ ಅದು. ಬ್ಲ್ಯಾಕ್ ಲೀಸ್ಟ್ ನಲ್ಲಿ ಇರೋರಿಗೆ ಸ್ಮಾರ್ಟ್ ಮೀಟರ್ ಟೆಂಡರ್ ‌ಕೊಟ್ಟಿದದ್ದಾರೆ.1500 ರೂ ಮೀಟರ್ ಗೆ 5500 ರೂಪಾಯಿ ಕೊಟ್ಟ ಪಡೆಯುತ್ತಿದ್ದಾರೆ‌ ಎಂದು ಕಿಡಿಕಾರಿದರು. ಎಲೆಕ್ಟ್ರಿಕ್ ಫೋಲ್ ಮಾಡೋನಿಗೆ ಮೀಟರ್ ಟೆಂಡರ್ ಕೊಟ್ಟಿದ್ದೀರಾ?ಇಷ್ಟು ದೊಡ್ಡ ಹಗರಣ ನಡೆಯುತ್ತಿದೆ. ಹೆಜ್ಜೆ ಹೆಜ್ಜೆಗೂ ಈ ಸರ್ಕಾರ ಹಗರಣದಲ್ಲಿ ಮುಳುಗಿದೆ ಎಂದು ನಿಖಿಲ್ ಅವರು ವಾಗ್ದಾಳಿ ನಡೆಸಿದರು.

Nikhil Kumaraswamy Gave A Tong To DK Shivakumar About Bengaluru South District

ವಿಧಾನಸೌಧ ದೇವಾಲಯದಂತೆ. ಇಂತಹ ದೇವಾಲಯದಲ್ಲಿ ವಿಷಯಾಧಾರಿತ ಚರ್ಚೆ ನಡೆಯಬೇಕು.‌ ಇತ್ತೀಚೆಗೆ ಸರ್ಕಾರದ ಪ್ರಭಾವಿ ಸಚಿವರ ಸದಸನದೊಳಗೆ ಹನಿಟ್ಯಾಪ್ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಇದನ್ನ ನೋಡಿದ್ರೆ ಈ ಸರ್ಕಾರ ಎಲ್ಲಿಗೆ ಬಂದು ನಿಂತಿದೆ ಎಂದು ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. ಹನಿಟ್ರ್ಯಾಪ್ ಪ್ರಕರಣ ಎಸ್ ಐಟಿ ತನಿಖೆ ನಡೆದ್ರೆ ಸಮಾಧಾನ ಆಗುವುದಿಲ್ಲ, ನಿವೃತ್ತ ನ್ಯಾಯಾಧೀಶರ ಮೂಲಕ ಪಾರದರ್ಶಕ ತನಿಖೆ ಬೇಕು ಅಂತ ಸದನದೊಳಗೆ ಸಚಿವರೇ ಹೇಳಿದ್ದಾರೆ. ನಮ್ಮ ಪಕ್ಷದ ಶಾಸಕರು, ಮಿತ್ರ ಪಕ್ಷದವರು ಈ ವಿಚಾರವನ್ನ ಸಿಬಿಐ ತನಿಖೆಗೆ ವಹಿಸಲು ಕೇಳಿದಾಗ ಸದಸನದಲ್ಲಿ ನಡೆದ ಘಟನೆ ಸರಿಯಲ್ಲ ಎಂದು ಕಿಡಿಕಾರಿದರು.

ಸಭಾಧ್ಯಕ್ಷರು ಆರು ತಿಂಗಳು ಶಾಸಕರನ್ನ ಅಮಾನತು ಮಾಡಿರೋದು ರಾಜ್ಯದ ಜನ ಒಪ್ಲೋದಿಲ್ಲ. ರಾಹುಲ್ ಗಾಂಧಿ ಪರಿಶಿಷ್ಟ ಜಾತಿ, ಪಂಗಡ ಪರ ಅಂತ ಯಾವಾಗಲೂ ಹೇಳ್ತಾರೆ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಬಿತ್ತು. ಕೊನೆಗೆ ಟಿಕೆಟ್ ಕೊಟ್ಟಿಲ್ಲ, ನಡು ಬೀದಿಯಲ್ಲಿ ಬಿಟ್ರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಹನಿಟ್ರ್ಯಾಪ್ ಮಾಡಿ ವ್ಯಕ್ತಿಗತವಾಗಿ ಟಾರ್ಗೆಟ್ ಮಾಡಿ, ತೇಜೋವಧೆ ಮಾಡುವುದು ಸರಿಯಲ್ಲ, ವೈಯಕ್ತಿಕ ಟಾರ್ಗೆಟ್ ಮಾಡಬಾರದು. ಇದರ ಹಿಂದೆ ಯಾರು ಪ್ರಭಾವಿಗಳು ನಿಂತಿದ್ದಾರೆ. ಅವರು ಎಷ್ಟೇ ಪ್ರಭಾವಿಗಳದರೂ ಅವರ ವಿರುದ್ಧ ಕ್ರಮ ಜರುಗಿಸ ಬೇಕೆಂದು ಆಗ್ರಹಿಸಿದರು.

ಕೇತಗಾನಹಳ್ಳಿ ಜಮೀನಿನಲ್ಲಿ ಒಂದೇ ಒಂದು ಇಂಚು ಬೇರೆ ಅವರ ಜಾಗಕ್ಕೆ ನಾವು ಬೇಲಿ ಹಾಕಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ವಿಚಾರಕ್ಕೆ ಪಮಾತನಾಡಿದ ಅವರು, ನಾನು ಎಲ್ಲಾ ದಾಖಲಾತಿಗಳನ್ನ ಕಲೆ ಹಾಕಿದ್ದೇನೆ. ಇದರ ಬಗ್ಗೆ ನಾನು ಸುದ್ದಿಗೋಷ್ಟಿ ಕರೆದು ಮಾತನಾಡುತ್ತೇನೆ. 46 ಎಕರೆ ಜಮೀನು ಕುಮಾರಸ್ವಾಮಿ ರೈತರಿಂದ ಖರೀದಿ ಮಾಡಿರೋ ಜಮೀನು. ಅದರಲ್ಲಿ ಸರ್ವೆ ನಂಬರ್ 7,8,9, ಇವು P ನಂಬರ್ ಜಮೀನು. ಪೋಡಿ ಆಗದ ಜಮೀನು. ಪೋಡಿ ಆಗದ ಜಮೀನು ತೆಗೆದುಕೊಳ್ಳೋದಕ್ಕೆ ಅವತ್ತು ಅವಕಾಶ ಇತ್ತು. ಪೋಡಿ ದುರಸ್ತಿ ಮಾಡೋಕೆ ಅದನ್ನು ಸರಿ ಮಾಡಬೇಕಿರೋದು ಸರ್ಕಾರ. ನಾವು ಅರ್ಜಿ ಕೊಟ್ಟರೂ ಸರ್ಕಾರ ಅದನ್ನು ಮಾಡಿಲ್ಲ ಎಂದು ಕಿಡಿಕಾರಿದರು.

ಸರ್ವೆ ನಂಬರ್ 7 ರಲ್ಲಿ 1 ಎಕರೆ ನಾವು ಅನುಭವದಲ್ಲಿ ಇದ್ದೇವೆ. ಉಳಿದ 4 ಎಕರೆ ಪೋಡಿ ದುರಸ್ತಿ ಮಾಡಬೇಕು. ಅದನ್ನ ಸರ್ಕಾರ ಮಾಡಬೇಕು. ರೈತರ ಜಮೀನು ಖರೀದಿ ಮಾಡಿದಾಗ ರೈತರು ಹಾಕಿದ್ದ ಬೌಂಡರಿಯನ್ನ ನಾವು ಹಾಗೇ ಉಳಿಸಿಕೊಂಡಿದ್ದೇವೆ. ಅರ್ಧ ಇಂಚು ಬೇರೆಯದಕ್ಕೆ ಬೇಲಿ ಹಾಕಿಲ್ಲ. ಸಿಎಂ ಆದಾಗ ಎಷ್ಟೋ ಜನರಿಗೆ ಸಾಗುವಳಿ ಚೀಟಿಯನ್ನ ಕೊಡಿಸಿದ್ದಾರೆ. ಎರಡು ಬಾರಿ ಸಿಎಂ ಆಗಿದ್ರು. ತಪ್ಪಿದ್ದರೆ ಆಗ ಸರಿ ಮಾಡಿಸಿಕೊಳ್ಳಬಹುದಿತ್ತು. ಆದರೆ ಅದನ್ನ ಮಾಡಿಲ್ಲ. ನೋಟಿಸ್ ಕೊಡದೇ ತೆರವು ಮಾಡುತ್ತೇನೆ ಎಂದು ಡಿಸಿ ಬಂದರೆ ಅದು ಕಾನೂನುಬಾಹಿರ. ಡಿಸಿ ಅವರು 14 ಎಕರೆ ಜಮೀನು ಒತ್ತುವರಿ ಆಗಿದೆ ಎನ್ನುತ್ತಾರೆ. ಯಾವ 14 ಎಕರೆ ಒತ್ತುವರಿ ಆಗಿದೆ ಎಂದು ನಿಖಿಲ್ ಅವರು ಪ್ರಶ್ನಿಸಿದರು.

ಕಾಲ ಹೇಗಿದೆ ಅಂದರೆ ಆರೋಪ ಬಂದ ಕೂಡಲೆ ಅಪರಾಧಿ ಮಾಡುತ್ತಾರೆ. ರೀಲ್ಸ್, ಶಾರ್ಟ್ಸ್ ಕಾಲ ಇದು. ಅಂತಿಮವಾಗಿ ಕುಮಾರಸ್ವಾಮಿ ಅವರ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರಬೇಕು, ಮಸಿ ಬಳಿಯಬೇಕು ಅಷ್ಟೇ ತಾನೆ ಅಂತಿಮ. ಇದರ ಹಿಂದೆ ಯರ‍್ಯಾರು ಇದ್ದಾರೆ ಎಂದು ಈಗ ಚರ್ಚೆ ಮಾಡಲ್ಲ. ಎಲ್ಲಾ ದಾಖಲಾತಿ ತೆಗೆಸಿದ್ದೇನೆ. ಸಂಪೂರ್ಣ ಮಾಹಿತಿ ಕೊಡುತ್ತೇನೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+