ಸೋಲಿನ ಬಳಿಕ ಅಮಿತ್ ಶಾ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಚರ್ಚೆಯಾಗಿದ್ದೇನು?
ನವದೆಹಲಿ, ಡಿಸೆಂಬರ್ 10: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲು ಕಂಡ ಬಳಿಕ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಅಮಿತ್ ಶಾ ಅವರನ್ನು ಸಂಸತ್ ಭವನದ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ಚನ್ನಪಟ್ಟಣ ಫಲಿತಾಂಶದ ಕುರಿತಾದ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಂಡೆ ಹಾಗೂ ಅವರು ಕೂಡ ನನಗೆ ಧೈರ್ಯ ತುಂಬಿ ಉತ್ತಮವಾಗಿ ಕೆಲಸ ಮಾಡುವಂತೆ ಹುರಿದುಂಬಿಸಿದರು ಎಂದು ಹೇಳಿದರು.

ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಅವರಲ್ಲಿ ಚರ್ಚೆ ನಡೆಸಲಾಯಿತು. ಮೈತ್ರಿಕೂಟಗಳ ಎರಡೂ ಪಕ್ಷಗಳು ಒಟ್ಟಾಗಿ ಹೋಗಬೇಕು. ತಳಮಟ್ಟದಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಬಲಪಡಿಸುವ ನಿಟ್ಟಿನಲ್ಲಿ ಅಮಿತ್ ಶಾ ಅವರು ನನಗೆ ಮಾರ್ಗದರ್ಶನ ಮಾಡಿದರು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ಇದಕ್ಕೂ ಮುನ್ನ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜೀ, ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆ. ಎಲ್ಲಾ ನಾಯಕರು ಸಂಘಟನೆಗೆ ಹೆಚ್ಚು ಕೊಡಬೇಕು ಎಂದು ಸಲಹೆ ಮಾಡಿದರು. ಕರ್ನಾಟಕ ಸರ್ಕಾರ ಜನಪರ ಆಡಳಿತ ನೀಡುತ್ತಿಲ್ಲ. ಜನರು ಸಾಕಷ್ಟು ತೊಂದರೆಯಲ್ಲಿ ಇದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಸಂಘಟಿತ ಹೋರಾಟ ನಡೆಸುವಂತೆ ನಾಯಕರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಅರವತ್ತು ವರ್ಷ ಜನಪರವಾಗಿ ಕೆಲಸ ಮಾಡಿರುವ ದೇವೇಗೇಗೌಡರ ಬಗ್ಗೆ ಇಂಥ ಟೀಕೆ ಮಾಡುವುದು ಸರಿಯಲ್ಲ. ಅವರು ಶಾಸಕ ಸ್ಥಾನಕ್ಕೆ ಶೋಭೆ ತರುವ ಮಾತು ಆಡಬೇಕು ಎಂದು ಸಿ.ಪಿ.ಯೋಗೇಶ್ವರ್ ಅವರ ವಿರುದ್ಧ ತಿರುಗೇಟು ಕೊಟ್ಟರು. ಇನ್ನೂ ನಾನು ಸೋಲನ್ನು ತಲೆಬಾಗಿ ಸ್ವೀಕರಿಸಿದ್ದೇನೆ. ದೇವೇಗೌಡರು ನೆಲ, ಜಲದ ವಿಚಾರದಲ್ಲಿ ನಿರಂತರ ಹೋರಾಟ ನಡೆಸಿದ್ದಾರೆ. ಈಗಲೂ ಯುವ ಸಂಸದರು ನಾಚುವಂತೆ ಅವರು ಶಿಸ್ತುಬದ್ದವಾಗಿ ಕಲಾಪದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜನರ ಸಲುವಾಗಿ ಅವರು ರಾಜಕೀಯದಲ್ಲಿ ಮುಂದುವರಿದ್ದಾರೆ, ಮುಂದೂ ಮುಂದುವರೆಯುತ್ತಾರೆ ಎಂದರು.
ದೇವೇಗೌಡರಿಗೆ ಮೋದಿಯವರೇ ಸ್ವತಃ ಫೋನ್ ಮಾಡಿ ರಾಜಕೀಯ ತೊರೆಯದಂತೆ ಹೇಳಿದ್ದರು. ರಾಜ್ಯಸಭೆ ತೊರೆಯದಂತೆ ಪ್ರಧಾನಿ ಮೋದಿಯವರೇ ಹೇಳಿ, ದೇಶಕ್ಕೆ ನಿಮ್ಮ ಮಾರ್ಗದರ್ಶನ ಬೇಕು ಎಂದು ಕೋರಿದ್ದರು. ಅವರ ಮಾತನ್ನು ಮೀರಲಾಗದೇ ದೇವೇಗೌಡರು ರಾಜಕಾರಣದಲ್ಲಿ ಇದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಹಾಸನದಲ್ಲಿ ಕಾಂಗ್ರೆಸ್ ನಾಯಕರು ಜನರ ತೆರಿಗೆ ಹಣದಲ್ಲಿ ಸಮಾವೇಶ ಮಾಡಿಕೊಂಡು ದೇವೆಗೌಡರ ಕುಟುಂಬವನ್ನು ನಿಂದಿಸಿದರು. ಅವರಿಗೆ ಸಮಾವೇಶ ಮಾಡಿ ಉತ್ತರ, ತಿರುಗೇಟು ಕೊಡಬೇಕು ಎಂದು ನಾನಾದರೂ ಭಾವಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು.
ಮಂಡ್ಯದಲ್ಲಿ ಅದ್ದೂರಿಯಾಗಿ ಕುಮಾರಸ್ವಾಮಿ ಅವರ ಜನ್ಮದಿನ ಆಚರಿಸಬೇಕು ಎಂದು ನಮ್ಮ ನಾಯಕರು ನಿರ್ಧಾರ ಮಾಡಿದ್ದರು. ಆದರೆ, ಮಂಡ್ಯ ಸಾಹಿತ್ಯ ಸಮ್ಮೇಳನ, ವಿಧಾನಸಭೆ ಮತ್ತು ಸಂಸತ್ ಅಧಿವೇಶನ ನಡೆಯುತ್ತಿದೆ. ಹಾಗೆಯೇ ಕೇಂದ್ರ ಸಚಿವರಿಗೂ ಸಾಕಷ್ಟು ಪೂರ್ವಾನಿಗದಿತ ಕಾರ್ಯಕ್ರಮಗಳು ಇವೆ. ಈ ಹಿನ್ನೆಲೆಯಲ್ಲಿ ಸ್ವತಃ ಕಾರ್ಯಕ್ರಮ ಬೇಡವೆಂದು ಸ್ವತಃ ಕುಮಾರಸ್ವಾಮಿ ಅವರೇ ಸೂಚಿಸಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಾನು ಪಕ್ಷದ ಶಿಸ್ತಿನ ಸಿಪಾಯಿ. ಜೆಡಿಎಸ್ ಪಕ್ಷದಿಂದ ನಿಖಿಲ್ ಕುಮಾರಸ್ವಾಮಿಯೇ ಹೊರತು ನಿಖಿಲ್ ಕುಮಾರಸ್ವಾಮಿ ಅವರಿಂದ ಜೆಡಿಎಸ್ ಅಲ್ಲ. ನನ್ನ ಇತಿಮಿತಿಗಳ ಬಗ್ಗೆ ನನಗೆ ಅರಿವಿದೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ರಾಜಕೀಯ ಶಕ್ತಿ ತುಂಬುತೇನೆ. ಅವರ ಜತೆಯಲ್ಲಿ ನಿಂತು ಕೆಲಸ ಮಾಡುತ್ತೇನೆ. ನಮ್ಮ ಪಕ್ಷದಲ್ಲಿ ಸಾಕಷ್ಟು ಹಿರಿಯರಿದ್ದಾರೆ, ಹಿರಿಯ ನಾಯಕರ ಮಾರ್ಗದರ್ಶನದಿಂದ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದು ನಿಖಿಲ್ ಅವರು ತಿಳಿಸಿದರು.
ಉಪ ಚುನಾವಣೆಯಲ್ಲಿ ಇಂಥ ಫಲಿತಾಂಶವನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಸೋಲಿಗೆ ಸಾಕಷ್ಟು ಕಾರಣಗಳಿವೆ. ಚುನಾವಣೆ ಹಿಂದಿನ 48 ಗಂಟೆಗಳಲ್ಲಿ ಮಹಿಳೆಯರ ಖಾತೆಗೆ ಎರಡು ತಿಂಗಳ ಗೃಹಲಕ್ಷಿ ಹಣ ಒಟ್ಟಿಗೆ ಜಮೆ ಮಾಡಿದ್ದಾರೆ. ಅದನ್ನು ಪ್ರಶ್ನೆ ಮಾಡಬೇಕಿದೆ. ಸರ್ಕಾರ ಆಡಳಿತವನ್ನು ಎಷ್ಟರಮಟ್ಟಿಗೆ ದುರ್ಬಳಕೆ ಮಾಡಿಕೊಂಡಿದೆ ಎನ್ನುವುದಕ್ಕೆ ಇದೊಂದು ಉದಾಹರಣೆ ಅಷ್ಟೆ. ಈಗ ಸೋಲಿಗೆ ಕಾರಣ ಹುಡುಕುವುದಿಲ್ಲ. ರಾಜಕೀಯ ಜೀವನದಲ್ಲಿ ಅನಿರೀಕ್ಷಿತ ನಿರ್ಧಾರ ಮಾಡಿದೆ. ಎರಡು ಪಕ್ಷಗಳ ಕಾರ್ಯಕರ್ತರಿಗಾಗಿ ಸ್ಪರ್ಧೆ ಅನಿರ್ವಾಯವಾಗಿತ್ತು.
ಚುನಾವಣೆಯ ಕೊನೆಯ ಹಂತದಲ್ಲಿ ಮೈತ್ರಿಗೆ ಕಪ್ಪುಚುಕ್ಕೆ ಬರದಂತೆ ಕುಮಾರಸ್ವಾಮಿ ಅವರು ನಿರ್ಧಾರ ಮಾಡಿದರು. ಮೈತ್ರಿಕೂಟದ ಎಲ್ಲಾ ನಾಯಕರ ಅಣತಿಯಂತೆ ಕೊನೆ ಕ್ಷಣದಲ್ಲಿ ನಾನು ಸ್ಪರ್ಧೆ ಮಾಡಬೇಕಾಯಿತು. ಕೇವಲ 15 ದಿನಗಳು ಮಾತ್ರ ಚುನಾವಣೆ ನಡೆಸಲು ನಮ್ಮ ಬಳಿ ಸಮಯವಿತ್ತು.ಅವರಿಗೆ ಸಾಕಷ್ಟು ಸಮಯ ಸಿಕ್ಕಿತ್ತು, ನಮ್ಮ ಕಡೆ ಅಭ್ಯರ್ಥಿ ಆಯ್ಕೆಯಲ್ಲಿ ವಿಳಂಬವಾಯಿತು. ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಹೇಳಿದರು.
ಒಂದು ಸಮುದಾಯಕ್ಕೆ ದೇವೇಗೌಡರು ಅನೇಕ ಕೊಡುಗೆಗಳನ್ನು ನೀಡಿದ್ದರು. ಅವರು ನಮ್ಮ ಕೈ ಹಿಡಿಯಲಿಲ್ಲ. ನಾಗಮಂಗಲದಲ್ಲಿ ಕೋಮು ಸಂಘರ್ಷ ಉಂಟಾಗಿತ್ತು. ಸಂಘರ್ಷದಲ್ಲಿ ಹಾನಿ ಉಂಟಾದ ಅಂಗಡಿ ಜನರಿಗೆ ಕುಮಾರಸ್ವಾಮಿ ಅವರು ಪರಿಹಾರ ನೀಡಿದ್ದಾರೆ. ಮುಸ್ಲಿಂ ಸಮುದಾಯಕ್ಕೂ ಪರಿಹಾರ ನೀಡಿದ್ದಾರೆ. ಚನ್ನಪಟ್ಟಣದ ಇತಿಹಾಸದಲ್ಲಿಯೇ ₹1200 ಕೋಟಿ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೂ ಸೋತಿದ್ದೇವೆ, ಇದೊಂದು ನಮಗೆ ಪಾಠ ಎಂದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications