ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ; ಸಹೋದರ ನಿಖಿಲ್ ಕುಮಾರಸ್ವಾಮಿ ಹೀಗಂದಿದ್ದೇಕೆ?
ದೇವೇಗೌಡರ ಮೊಮ್ಮಗ ಹಾಗೂ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಅತ್ಯಾಚಾರ ಕೇಸ್ನಲ್ಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಮನೆ ಕೆಲಸ ಮಾಡುವ ಮಹಿಳೆ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಕೇಸ್ನಲ್ಲಿ ಪ್ರಜ್ವಲ್ ಅಪರಾಧಿ ಎಂದು ತೀರ್ಪು ನೀಡಿದೆ. ಇದರಿಂದ ದೇವೇಗೌಡರ ಕುಟುಂಬಕ್ಕೆ ಭಾರೀ ಹಿನ್ನಡೆಯಾಗಿದ್ದು, ಈ ತೀರ್ಪಿನಿಂದ ಶಾಕ್ನಲ್ಲಿದ್ದಾರೆ. ಪ್ರಜ್ವಲ್ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಬಗ್ಗೆ ಸಹೋದರ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಅವರ ಮಾತುಗಳು ಅಚ್ಚರಿ ಮೂಡಿಸಿವೆ.
ಇಂದು ಚಿತ್ರದುರ್ಗದ ಕಾರ್ಯಕ್ರಮದ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ಪ್ರಜ್ವಲ್ಗೆ ನೀಡಿರುವ ತೀರ್ಪಿನ ಬಗ್ಗೆ ರಿಯಾಕ್ಷನ್ ಕೊಟ್ಟಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಕೋರ್ಟ್ನಲ್ಲಿ ತೀರ್ಪು ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ ಎಂದಿದ್ದಾರೆ ನಿಖಿಲ್. ಪ್ರಜ್ವಲ್ ರೇವಣ್ಣ ಮೇಲೆ ಈ ಆರೋಪ ಕೇಳಿಬಂದ ತಕ್ಷಣವೇ ಅವರನ್ನ ಪಕ್ಷದಿಂದ ಅಮಾನತು ಮಾಡಲಾಗಿತ್ತು. ನಮ್ಮ ಪಕ್ಷದ ವರಿಷ್ಠರು ಆಗಲೇ ಕ್ರಮ ತೆಗೆದುಕೊಂಡು ಪ್ರಜ್ವಲ್ನ ಪಕ್ಷದಿಂದ ಅಮಾನತಿನಲ್ಲಿ ಇಟ್ಟಿದ್ದರು. ಆ ಸಮಯದಲ್ಲಿ ಪ್ರಜ್ವಲ್ ಅಪರಾಧಿಯೋ? ಅಲ್ಲವೋ ಎಂಬ ಬಗ್ಗೆ ತೀರ್ಪು ಬಂದಿರಲಿಲ್ಲ ಎಂದಿದ್ದಾರೆ.

ಹಾಗಾಗಿ ಈ ವಿಚಾರದಲ್ಲಿ ವರಿಷ್ಠರ ತೀರ್ಮಾನದ ಸ್ಪಷ್ಟತೆಯನ್ನ ಅರ್ಥ ಮಾಡಿಕೊಳ್ಳಬೇಕು. ಈ ವಿಷಯದ ಬಗ್ಗೆ ಇದಕ್ಕಿಂತ ಹೆಚ್ಚಾಗಿ ನಾನು ಮಾತನಾಡುವುದಿಲ್ಲ. ಕೋರ್ಟ್ ನೀಡಿರುವ ತೀರ್ಪಿಗೆ ಯಾರೇ ಆದರೂ ತಲೆಬಾಗಬೇಕಾಗುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈ ಹಿಂದೆಯೂ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡಿದ್ದ ನಿಖಿಲ್, ಪ್ರಜ್ವಲ್ ಕೇಸ್ನಿಂದಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಘಾತಕ್ಕೆ ಒಳಗಾಗಿದ್ದು, ತಂದೆ ಕುಮಾರಣ್ಣನ ಜೊತೆ ಹಾಸನಕ್ಕೆ ತೆರಳಿ ಆತ್ಮಸ್ಥೈರ್ಯ ತುಂಬುತ್ತೇವೆ ಎಂದಿದ್ದರು.
ಈ ಘಟನೆಯಿಂದ ದೇವೇಗೌಡರು ಕೂಡ ಆಘಾತಕ್ಕೆ ಒಳಗಾಗಿದ್ದಾರೆ. ಇಳಿವಯಸ್ಸಿನಲ್ಲಿ ಅವರಿಗೆ ಆಗಿರುವ ನೋವು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ. ಅವರು ಸಾಕಷ್ಟು ನೊಂದಿದ್ದು, ವಿಶ್ರಾಂತಿಯಲ್ಲಿದ್ದಾರೆ. ಪ್ರಜ್ವಲ್ದು ಎನ್ನಲಾದ ಆ ಅಶ್ಲೀಲ ವಿಡಿಯೋಗಳನ್ನ ನಾನು ನೋಡಲಿಲ್ಲ. ಆದರೆ ಬೇರೆಯವರಿಂದ ಆ ವಿಡಿಯೋಗಳ ಬಗ್ಗೆ ಮಾಹಿತಿ ತಿಳಿದಿದ್ದೇನೆ. ಪ್ರಜ್ವಲ್ ಆರೋಪಿ ಸ್ಥಾನದಲ್ಲಿದ್ದು, ತನಿಖೆ ನಡೆಯುತ್ತಿದೆ. ಅವರು ತಪ್ಪು ಮಾಡಿದ್ದರೆ ಖಂಡಿತವಾಗಿಯೂ ಶಿಕ್ಷೆ ಅನುಭವಿಸುತ್ತಾರೆ ಎಂದು ನಿಲುವು ವ್ಯಕ್ತಪಡಿಸಿದ್ದರು.
ಇನ್ನು ಅಶ್ಲೀಲ ವಿಡಿಯೋ ಹಂಚಿದವರು ಮಹಿಳೆಯರ ಘನತೆಗೆ ಕುತ್ತು ತಂದಿದ್ದಾರೆ. ಕೊನೆಯ ಪಕ್ಷ ಮಹಿಳೆಯರ ಮುಖವನ್ನು ತೋರಿಸಬಾರದಿತ್ತು. ಹಾಸನ ಸಂಸದರ ವಿಚಾರ ಮುಂದಿಟ್ಟುಕೊಂಡು ಪ್ರಧಾನಿಯವರನ್ನು ಎಳೆದು ತರುವ ಕೆಲಸವನ್ನು ಕಾಂಗ್ರೆಸ್ ಮಾಡಕೂಡದು. ಅವರಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದರು. ಈಗಲೂ ಕಾನೂನಿನ ಪ್ರಕಾರ ಆಗಿರುವುದು ಸರಿ ಎಂಬರ್ಥದಲ್ಲಿ ನಿಖಿಲ್ ಮಾತನಾಡಿದ್ದಾರೆ. ಇನ್ನು ನೆನ್ನೆ ಕೋರ್ಟ್ ತೀರ್ಪು ಬಂದಾಗಿನಿಂದಲೂ ಅವರ ಕುಟುಂಬಸ್ಥರು ಯಾರೂ ಹೊರಗೆ ಕಾಣಿಸಿಕೊಂಡಿರಲಿಲ್ಲ. ಈ ಬಗ್ಗೆ ಪ್ರತಿಕ್ರಿಯೆಯೂ ಕೊಡಲಿಲ್ಲ. ಮೊದಲ ಬಾರಿಗೆ ಆ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications