ಡಬಲ್ ಗೇಮ್ ಆಡುತ್ತಿರೋದು ಯಾವ ಪುರುಷಾರ್ಥಕ್ಕೆ? : ಡಿಕೆಶಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಬೆಂಗಳೂರು, ಸೆಪ್ಟೆಂಬರ್ 08: ಮೆಡಿಕಲ್ ಕಾಲೇಜು ಸ್ಥಳಾಂತರದ ವಿಚಾರದಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್ ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೇ ಹೇಳಿದ್ದರು. ಹಾಗಾದರೆ, ಈ ಸರಕಾರ ಯಾರನ್ನು ಯಾಮಾರಿಸಲು ಹೊರಟಿದೆ. ಡಬಲ್ ಗೇಮ್ ಆಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಸುಖಾ ಸುಮ್ಮನೆ ಗೊಂದಲ ಯಾಕೆ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ. ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ ಎಂದು ಹೇಳಿದ್ದಾರೆ.
ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ. ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ.1/5
— Nikhil Kumar (@Nikhil_Kumar_k) September 8, 2023
2006-07ರಲ್ಲೇ ₹310ಕೋಟಿ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಸೇರಿ ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿ ಸಮುಚ್ಚಯ ಸ್ಥಾಪನೆಗೆ ಅಂದಿನ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರು ಆಡಳಿತಾತ್ಮಕ ಮಂಜೂರಾತಿ ನೀಡಿದ್ದರು.ಮತ್ತೆ 25-3-2019ರಂದು ಸಿಎಂ ಆಗಿದ್ದ ಕುಮಾರಣ್ಣ ಅವರು ಆ ಯೋಜನೆಯ ವೆಚ್ಚವನ್ನು ₹540 ಕೋಟಿಗೆ ಹೆಚ್ಚಿಸಿದ್ದರು.

ಮೈತ್ರಿ ಸರಕಾರದ ಅವಧಿಯಲ್ಲಿ ಕನಕಪುರಕ್ಕೂ ಪ್ರತ್ಯೇಕ ಮೆಡಿಕಲ್ ಕಾಲೇಜು ಬೇಕು ಎಂದು ಅಂದು ಡಿ ಕೆ ಶಿವಕುಮಾರ್ ಅವರೇ ಒತ್ತಡ ಹೇರಿದ್ದರು. 13-12-2018ರಲ್ಲಿ ₹450 ಕೋಟಿ ವೆಚ್ಚದ ಮೆಡಿಕಲ್ ಕಾಲೇಜನ್ನು ಕುಮಾರಣ್ಣ ಅವರು ಕನಕಪುರಕ್ಕೂ ಮಂಜೂರು ಮಾಡಿದ್ದರು. ಬಳಿಕ ಬಿಜೆಪಿ ಸರಕಾರವು ರಾಮನಗರ ಮೆಡಿಕಲ್ ಕಾಲೇಜು ಹಾಗೂ ರಾಜೀವ್ ಗಾಂಧಿ ವಿವಿ ಸಮುಚ್ಚಯ ನಿರ್ಮಾಣಕ್ಕೆ ₹610 ಕೋಟಿ ವೆಚ್ಚದಲ್ಲಿ ಗುದ್ದಲಿಪೂಜೆ ನೆರವೇರಿಸಿತ್ತು. ಎರಡು ತಿಂಗಳ ಹಿಂದೆ ಬಂದ ಕಾಂಗ್ರೆಸ್ ಸರಕಾರವು ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡುವ ಮೂಲಕ ರಾಮನಗರ ಜನತೆಗೆ ದ್ರೋಹ ಎಸಗಿದೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications