ಮಂಡ್ಯ ಜನತೆ ರಮ್ಯಾರನ್ನು ಕ್ಷಮಿಸುವುದಿಲ್ಲ: ನಿಖಿಲ್
ಮಂಡ್ಯ, ಏ.14: ಸಂಸದೆ ಹಾಗೂ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ಅವರು ಸ್ಥಳೀಯ ಮುಖಂಡರನ್ನು ಕಡೆಗಣಿಸಿದ್ದಾರೆ. ಹಿರಿಯ ನಾಯಕ ಅಂಬರೀಷ್ ಅವರ ಆರೋಗ್ಯ ಹಾಗೂ ರಾಜಕೀಯ ಪ್ರವೇಶದ ಬಗ್ಗೆ ಲಘುವಾದ ಹೇಳಿಕೆ ನೀಡಿದ್ದಾರೆ. ಹೀಗಾಗಿ ರಮ್ಯಾ ಅವರನ್ನು ಮಂಡ್ಯ ಜನತೆ ಸೋಲಿಸಲಿದ್ದಾರೆ. ಅಂಬರೀಷ್ ಅವರು ರಮ್ಯಾ ಅವರನ್ನು ಕ್ಷಮಿಸಬಹುದು ಆದರೆ, ಮಂಡ್ಯ ಜನತೆ ಕ್ಷಮಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷದ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಪರ ನಗರದ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಿ ಮತಯಾಚಿಸುವ ಸಂದರ್ಭದಲ್ಲಿ ರಮ್ಯಾ ವಿರುದ್ಧ ಈ ರೀತಿ ಹೇಳಿಕೆ ನೀಡಿದರು. ನಿಖಿಲ್ ಅವರ ಜತೆಯಲ್ಲಿ ನಟ ದಿಗಂತ್ ಅವರು ಉಪಸ್ಥಿತರಿದ್ದರು.
ನಂತರ ಹೊಳಲು ವೃತ್ತದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ನಿಖಿಲ್,'ಅಂಬರೀಷ್ ರವರ ಹಿರಿತನ ಹಾಗೂ ಸ್ಥಾನಮಾನಕ್ಕೆ ಬೆಲೆ ನೀಡಬೇಕಾದ ರಮ್ಯಾ ಅವರು, ಅಂಬಿ ದೊಡ್ಡ ನಟರೆಂಬುದನ್ನು ಮರೆತು ಲಘು ಹೇಳಿಕೆ ನೀಡುವ ಮೂಲಕ ಜಿಲ್ಲೆಯ ಜನ ಹಾಗೂ ಕಾರ್ಯಕರ್ತರ ಭಾವನೆಗಳಿಗೆ ಘಾಸಿ ಉಂಟು ಮಾಡಿದ್ದಾರೆ. ಇದೇ ಅವರ ಸೋಲಿಗೆ ಕಾರಣವಾಗಲಿದೆ. ರಾಜಕೀಯ ಕಾರಣಗಳಿಂದ ಅಂಬರೀಷ್, ರಮ್ಯಾರನ್ನು ಕ್ಷಮಿಸಬಹುದು. ಆದರೆ ಜಿಲ್ಲೆಯ ಜನತೆ ಹಾಗೂ ಅಂಬಿ ಅಭಿಮಾನಿಗಳು ಅವರನ್ನು ಕ್ಷಮಿಸುವುದಿಲ್ಲ ಎಂದರು.

ದೇವೇಗೌಡರ ಹೋರಾಟಕ್ಕೆ ಶಕ್ತಿ : ಮಂಡ್ಯ ಜಿಲ್ಲೆ ಹೋರಾಟದ ಶಕ್ತಿ ಕೇಂದ್ರವಾಗಿದ್ದು, ಜೆಡಿಎಸ್ ಪಕ್ಷ ಸಹ ಹೋರಾಟದ ಕೇಂದ್ರ ಬಿಂದುವಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯ ಜನತೆ ಪಕ್ಷದ ಅಭ್ಯರ್ಥಿ ಪುಟ್ಟರಾಜು ಅವರನ್ನು ಬೆಂಬಲಿಸುವ ಮೂಲಕ ದೇವೇಗೌಡರ ಹೋರಾಟಕ್ಕೆ ಶಕ್ತಿ ತುಂಬಬೇಕೆಂದು ಮನವಿ ಮಾಡಿದರು.
ನಾನು ಈಗಾಗಲೇ ಹಲವು ಬಾರಿ ಮಂಡ್ಯಕ್ಕೆ ಭೇಟಿ ಕೊಟ್ಟಿದ್ದೆ. ಆದರೆ ಚುನಾವಣಾ ಪ್ರಚಾರಕ್ಕಾಗಿ ಪ್ರಥಮ ಬಾರಿಗೆ ಆಗಮಿಸಿದ್ದು, ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ನಮ್ಮ ತಾತಾ ದೇವೇಗೌಡರ ಕಾವೇರಿ ಹಾಗೂ ರೈತ ಪರ ಹೋರಾಟಕ್ಕೆ ಬಲ ನೀಡಲು ಪಕ್ಷದ ಅಭ್ಯರ್ಥಿಯನ್ನು ಚುನಾಯಿಸಿ ಲೋಕಸಭೆಗೆ ಕಳುಹಿಸಬೇಕೆಂದು ಕರೆ ನೀಡಿದರು.
ಜಿಲ್ಲೆಯ ಜನರ ವಿಶ್ವಾಸಕ್ಕೆ ಪಾತ್ರವಾಗಿರುವ ಜೆಡಿಎಸ್ ಈ ಬಾರಿ ಹೆಚ್ಚು ಅಂತರದಿಂದ ಜಯಗಳಿಸಲು ಜಿಲ್ಲೆಯಲ್ಲಿ ಚಲುವರಾಯಸ್ವಾಮಿ ಅವರ ನಾಯಕತ್ವದಲ್ಲಿ ಪಕ್ಷದ ಶಾಸಕರು, ಮುಖಂಡರು ಶ್ರಮಿಸುತ್ತಿದ್ದು, ಕಾರ್ಯಕರ್ತರು ಸಹ ಹಗಲಿರುಳು ಪಕ್ಷದ ಅಭ್ಯರ್ಥಿ ಪರ ಶ್ರಮಿಸಬೇಕೆಂದು ಮನವಿ ಮಾಡಿದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications