ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ನಿರ್ಮಲಾ, ಜೈಶಂಕರ್ ಸ್ಪರ್ಧೆ?
ಬೆಂಗಳೂರು ಜನವರಿ 12: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈ ಬಾರಿ ಮ್ಯಾಜಿಕ್ ಮಾಡಲು ಬಿಜೆಪಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೇಂದ್ರ ನಾಯಕರನ್ನು ಕರ್ನಾಟಕದಿಂದ ಲೋಕಸಭೆ ಚುನಾವಣೆ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ.
ಹೌದು.... ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಬಹುದು ಎಂದು ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಕೇಂದ್ರ ಸಚಿವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಿಜೆಪಿ ಬಯಸಿದೆ. ಅದರಂತೆ ನಿರ್ಮಲಾ, ಜೈಶಂಕರ್ ಅವರಂಥವರಿಗೆ ಸೂಕ್ತ ಸೀಟುಗಳನ್ನು ಹುಡುಕಲಾಗುತ್ತಿದೆ. ನಿರ್ಮಲಾ ಅವರು ಕರ್ನಾಟಕ ಮತ್ತು ಜೈಶಂಕರ್ ಬೆಂಗಳೂರು ದಕ್ಷಿಣದಿಂದ ಪ್ರತಿನಿಧಿಸುವ ಚಿಂತನೆಗಳು ನಡೆಯುತ್ತಿವೆ.
ಮೂಲಗಳ ಪ್ರಕಾರ, ಪ್ರಸ್ತುತ ಕೇಸರಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಿಂದ ನಿರ್ಮಲಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಜೊತೆಗೆ ಜೈಶಂಕರ್ಗೆ ಹಲವು ಆಯ್ಕೆಗಳಿವೆ. ಹಿಂದುತ್ವದ ಫೈರ್ಬ್ರಾಂಡ್ ಅನಂತಕುಮಾರ್ ಹೆಗಡೆ ಪ್ರಸ್ತುತ ಸಂಸದರಾಗಿರುವ ಉತ್ತರ ಕನ್ನಡ ಬಿಜೆಪಿಯ ಮತ್ತೊಂದು ಭದ್ರಕೋಟೆಯಾಗಿದ್ದು, ರಾಜತಾಂತ್ರಿಕ-ರಾಜಕಾರಣಿ ಇಲ್ಲಿ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಪಕ್ಷ ಚಿಂತಿಸುತ್ತಿದೆ.
ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಸೆಂಟ್ರಲ್ ಕ್ಷೇತ್ರಗಳು ಜೈಶಂಕರ್ಗೆ ಸುರಕ್ಷಿತವಾಗಿರುತ್ತವೆ ಎಂದು ಬಿಜೆಪಿ ಭಾವಿಸಿದೆ. ಹೀಗಾಗಿ ಜೈಶಂಕರ್ ಅವರು ಬೆಂಗಳೂರಿಗೆ ಆಗಾಗ್ಗೆ ಬರುತ್ತಿದ್ದಾರೆ. ಈ ನಗರದೊಂದಿಗೆ ಅವರು ದೀರ್ಘ ವೈಯಕ್ತಿಕ ಒಡನಾಟ ಹೊಂದಿದ್ದಾರೆಂದು ಹೇಳಲಾಗುತ್ತಿದೆ.

ಅವರು ಇಲ್ಲಿನ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ವ್ಯಾಸಂಗ ಮಾಡಿದರು. ಬಿಜೆಪಿಯ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಜೈಶಂಕರ್ ಬೆಂಗಳೂರಿಗೆ ಹಲವು ಬಾರಿ ಭೇಟಿ ನೀಡಿದ್ದರು. ಅವರು ಶಿಕ್ಷಣ ಸಂಸ್ಥೆಗಳು, ಕಬ್ಬನ್ ಪಾರ್ಕ್ಗಳಲ್ಲಿ ಕಾರ್ಯಕ್ರಮಗಳನ್ನು ಮಾಡಿದ್ದರು ಮತ್ತು ಪ್ರಸಿದ್ಧ ವಿವಿ ಪುರಂ ಫುಡ್ ಸ್ಟ್ರೀಟ್ನಲ್ಲಿಯೂ ತಿನ್ನಲು ಅವರು ಹೋಗಿರುವುದಿದೆ. ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಅವರು ಕಳೆದ ವಾರ ಇಲ್ಲಿಗೆ ಬಂದಿದ್ದರು.
ಬೆಂಗಳೂರು ದಕ್ಷಿಣಕ್ಕೆ ಕರ್ನಾಟಕ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೆಸರು ಕೇಳಿಬರುತ್ತಿದೆ ಎಂದು ಹೇಳಲಾಗುತ್ತಿದೆ. ತೇಜಸ್ವಿನಿ ದಿವಂಗತ ಎಚ್ಎನ್ ಅನಂತಕುಮಾರ್ ಅವರು ಪತ್ನಿ, ಅನಂತಕುಮಾರ್ 1996 ರಿಂದ ಸತತ ಆರು ಅವಧಿಗೆ ಬೆಂಗಳೂರು ದಕ್ಷಿಣವನ್ನು ಪ್ರತಿನಿಧಿಸಿದ ಬಿಜೆಪಿ ಧೀಮಂತರು.
2018 ರಲ್ಲಿ ಅವರ ಅಕಾಲಿಕ ಮರಣದ ನಂತರ, ತೇಜಸ್ವಿನಿ ಅವರು 2019 ರ ಲೋಕಸಭಾ ಅಭ್ಯರ್ಥಿಯಾಗಿ ಉತ್ತರಾಧಿಕಾರಿಯಾಗುತ್ತಾರೆ ಎಂದು ವ್ಯಾಪಕವಾಗಿ ನಿರೀಕ್ಷಿಸಲಾಗಿತ್ತು. ಆದರೆ ಬಿಜೆಪಿಯು ರಾಜಕೀಯವಾಗಿ ಹಸಿರು ನಿಶಾನೆ ತೋರಿದ್ದ ಸೂರ್ಯ ಅವರನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿತು.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications