Get Updates
Get notified of breaking news, exclusive insights, and must-see stories!

ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ನಿರ್ಮಲಾ, ಜೈಶಂಕರ್ ಸ್ಪರ್ಧೆ?

ಬೆಂಗಳೂರು ಜನವರಿ 12: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈ ಬಾರಿ ಮ್ಯಾಜಿಕ್ ಮಾಡಲು ಬಿಜೆಪಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೇಂದ್ರ ನಾಯಕರನ್ನು ಕರ್ನಾಟಕದಿಂದ ಲೋಕಸಭೆ ಚುನಾವಣೆ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ.

ಹೌದು.... ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಬಹುದು ಎಂದು ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

 Nirmala, Jaishankar competition for Lok Sabha election from Karnataka?

ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಕೇಂದ್ರ ಸಚಿವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಿಜೆಪಿ ಬಯಸಿದೆ. ಅದರಂತೆ ನಿರ್ಮಲಾ, ಜೈಶಂಕರ್ ಅವರಂಥವರಿಗೆ ಸೂಕ್ತ ಸೀಟುಗಳನ್ನು ಹುಡುಕಲಾಗುತ್ತಿದೆ. ನಿರ್ಮಲಾ ಅವರು ಕರ್ನಾಟಕ ಮತ್ತು ಜೈಶಂಕರ್ ಬೆಂಗಳೂರು ದಕ್ಷಿಣದಿಂದ ಪ್ರತಿನಿಧಿಸುವ ಚಿಂತನೆಗಳು ನಡೆಯುತ್ತಿವೆ.

ಮೂಲಗಳ ಪ್ರಕಾರ, ಪ್ರಸ್ತುತ ಕೇಸರಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಿಂದ ನಿರ್ಮಲಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಜೊತೆಗೆ ಜೈಶಂಕರ್‌ಗೆ ಹಲವು ಆಯ್ಕೆಗಳಿವೆ. ಹಿಂದುತ್ವದ ಫೈರ್‌ಬ್ರಾಂಡ್ ಅನಂತಕುಮಾರ್ ಹೆಗಡೆ ಪ್ರಸ್ತುತ ಸಂಸದರಾಗಿರುವ ಉತ್ತರ ಕನ್ನಡ ಬಿಜೆಪಿಯ ಮತ್ತೊಂದು ಭದ್ರಕೋಟೆಯಾಗಿದ್ದು, ರಾಜತಾಂತ್ರಿಕ-ರಾಜಕಾರಣಿ ಇಲ್ಲಿ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಪಕ್ಷ ಚಿಂತಿಸುತ್ತಿದೆ.

ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಸೆಂಟ್ರಲ್ ಕ್ಷೇತ್ರಗಳು ಜೈಶಂಕರ್‌ಗೆ ಸುರಕ್ಷಿತವಾಗಿರುತ್ತವೆ ಎಂದು ಬಿಜೆಪಿ ಭಾವಿಸಿದೆ. ಹೀಗಾಗಿ ಜೈಶಂಕರ್ ಅವರು ಬೆಂಗಳೂರಿಗೆ ಆಗಾಗ್ಗೆ ಬರುತ್ತಿದ್ದಾರೆ. ಈ ನಗರದೊಂದಿಗೆ ಅವರು ದೀರ್ಘ ವೈಯಕ್ತಿಕ ಒಡನಾಟ ಹೊಂದಿದ್ದಾರೆಂದು ಹೇಳಲಾಗುತ್ತಿದೆ.

 Nirmala, Jaishankar competition for Lok Sabha election from Karnataka?

ಅವರು ಇಲ್ಲಿನ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ವ್ಯಾಸಂಗ ಮಾಡಿದರು. ಬಿಜೆಪಿಯ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಜೈಶಂಕರ್ ಬೆಂಗಳೂರಿಗೆ ಹಲವು ಬಾರಿ ಭೇಟಿ ನೀಡಿದ್ದರು. ಅವರು ಶಿಕ್ಷಣ ಸಂಸ್ಥೆಗಳು, ಕಬ್ಬನ್ ಪಾರ್ಕ್‌ಗಳಲ್ಲಿ ಕಾರ್ಯಕ್ರಮಗಳನ್ನು ಮಾಡಿದ್ದರು ಮತ್ತು ಪ್ರಸಿದ್ಧ ವಿವಿ ಪುರಂ ಫುಡ್ ಸ್ಟ್ರೀಟ್‌ನಲ್ಲಿಯೂ ತಿನ್ನಲು ಅವರು ಹೋಗಿರುವುದಿದೆ. ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಅವರು ಕಳೆದ ವಾರ ಇಲ್ಲಿಗೆ ಬಂದಿದ್ದರು.

ಬೆಂಗಳೂರು ದಕ್ಷಿಣಕ್ಕೆ ಕರ್ನಾಟಕ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೆಸರು ಕೇಳಿಬರುತ್ತಿದೆ ಎಂದು ಹೇಳಲಾಗುತ್ತಿದೆ. ತೇಜಸ್ವಿನಿ ದಿವಂಗತ ಎಚ್‌ಎನ್ ಅನಂತಕುಮಾರ್ ಅವರು ಪತ್ನಿ, ಅನಂತಕುಮಾರ್ 1996 ರಿಂದ ಸತತ ಆರು ಅವಧಿಗೆ ಬೆಂಗಳೂರು ದಕ್ಷಿಣವನ್ನು ಪ್ರತಿನಿಧಿಸಿದ ಬಿಜೆಪಿ ಧೀಮಂತರು.

2018 ರಲ್ಲಿ ಅವರ ಅಕಾಲಿಕ ಮರಣದ ನಂತರ, ತೇಜಸ್ವಿನಿ ಅವರು 2019 ರ ಲೋಕಸಭಾ ಅಭ್ಯರ್ಥಿಯಾಗಿ ಉತ್ತರಾಧಿಕಾರಿಯಾಗುತ್ತಾರೆ ಎಂದು ವ್ಯಾಪಕವಾಗಿ ನಿರೀಕ್ಷಿಸಲಾಗಿತ್ತು. ಆದರೆ ಬಿಜೆಪಿಯು ರಾಜಕೀಯವಾಗಿ ಹಸಿರು ನಿಶಾನೆ ತೋರಿದ್ದ ಸೂರ್ಯ ಅವರನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+