ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆಶಿಗೆ ಇಷ್ಟದ ಖಾತೆ ಕೊಡಿಸಲು ನಿರ್ಮಲಾನಂದ ಸ್ವಾಮೀಜಿ ವಕಾಲತ್ತು

By Manjunatha
|
Google Oneindia Kannada News

ಬೆಂಗಳೂರು, ಜೂನ್ 05: ಇಂಧನ ಖಾತೆ ಜೆಡಿಎಸ್‌ ಪಾಲಾಗಿದ್ದರಿಂದ ಅಸಮಾಧಾನಗೊಂಡಿದ್ದ ಡಿಕೆ ಶಿವಕುಮಾರ್‌ಗೆ ಈಗ ಮತ್ತೆ ಇಂಧನ ಖಾತೆ ಒಲಿದು ಬರುವ ಸಾಧ್ಯತೆ ಹೆಚ್ಚಾಗಿದೆ.

ಡಿಕೆ.ಶಿವಕುಮಾರ್ ಬೇಡಿಕೆ ಇಟ್ಟಿದ್ದ ಇಂಧನ ಖಾತೆ ಜೆಡಿಎಸ್ ಪಕ್ಷಕ್ಕೆ ಹೋಗಿತ್ತು ಆದರೆ ಈಗ ಜೆಡಿಎಸ್ ವರಿಷ್ಠರು ಇಂಧನ ಖಾತೆಯನ್ನು ಕಾಂಗ್ರೆಸ್‌ಗೆ ನೀಡಿ ಬೆಂಗಳೂರು ಉಸ್ತುವಾರಿ ಅಥವಾ ಇನ್ನಾವುದಾದರೂ ಖಾತೆಯನ್ನು ಪಡೆದುಕೊಳ್ಳಲು ಅಸ್ತು ಎಂದಿದ್ದಾರೆ. ಆದರೆ ಈ ಮಹತ್ವದ ಬದಲಾವಣೆ ಹಿಂದೆ ಇರುವುದು ನಿರ್ಮಲಾನಂದ ಸ್ವಾಮೀಜಿ ಎನ್ನಲಾಗಿದೆ.

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಯಾರಿಗೆ ಯಾವ ಖಾತೆ?ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಯಾರಿಗೆ ಯಾವ ಖಾತೆ?

ಸಂಪುಟ ವಿಸ್ತರಣೆ ಬಿರುಸುಗೊಂಡ ಬಳಿಕ ಅಸಮಾಧಾನಗೊಂಡ ಡಿ.ಕೆ.ಶಿವಕುಮಾರ್ ಅವರು ಒಕ್ಕಲಿಗ ಸ್ವಾಮೀಜಿ ನಿರ್ಮಲಾನಂದ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿದ್ದರು. ಆಗ ಶಿವಕುಮಾರ್ ಅವರು ತಮ್ಮ ಅಸಮಾಧಾನವನ್ನು ಅವರಲ್ಲಿ ತೋಡಿಕೊಂಡಿದ್ದರು ಎನ್ನಲಾಗಿದೆ.

Nirmalananda Swamiji talked to Kumaraswamy behalf of DK Shivakumar

ನಿರ್ಮಲಾನಂದ ಸ್ವಾಮೀಜಿ ಅವರು ಕುಮಾರಸ್ವಾಮಿ ಅವರಿಗೆ ಬುದ್ಧಿ ಹೇಳಿ, 'ಜೆಡಿಎಸ್ ಪಕ್ಷವು ಒಕ್ಕಲಿಗ ಮುಖಂಡನೊಬ್ಬನಿಗೆ ಖಾತೆ ತಪ್ಪಿಸಿತು ಎಂಬ ಅಪನಿಂದನೆಗೆ ಗುರಿ ಆಗಬೇಕಾಗುತ್ತದೆ, ಹಾಗಾಗಿ ಒಕ್ಕಲಿಗ ಸಮುದಾಯಕ್ಕಾಗಿಯಾದರೂ ಇಂಧನ ಖಾತೆಯನ್ನು ಡಿಕೆಶಿಗೆ ಬಿಟ್ಟುಕೊಡಿ' ಎಂದು ನಿರ್ಮಲಾನಂದ ಸ್ವಾಮೀಜಿ ಅವರು ಮನವಿ ಮಾಡಿದ್ದಾರೆ.

ಡಿಕೆ ಶಿವಕುಮಾರ್‌ಗೆ ಯಾವ ಖಾತೆಯೂ ಇಲ್ಲ, ಉಡುಗೊರೆಯೂ ಇಲ್ಲ?ಡಿಕೆ ಶಿವಕುಮಾರ್‌ಗೆ ಯಾವ ಖಾತೆಯೂ ಇಲ್ಲ, ಉಡುಗೊರೆಯೂ ಇಲ್ಲ?

ಕುಮಾರಸ್ವಾಮಿ ಅವರು ಈ ವಿಷಯವನ್ನು ದೊಡ್ಡಗೌಡರ ಬಳಿ ಚರ್ಚಿಸಿ, ಇಂಧನ ಖಾತೆಗೆ ಪಟ್ಟು ಹಿಡಿದಿದ್ದ ಎಚ್‌.ಡಿ.ರೇವಣ್ಣ ಅವರ ಮನವೊಲಿಸಲು ಮನವಿ ಮಾಡಿದ್ದಾರೆ. ಆ ನಂತರ ದೇವೇಗೌಡರು ರೇವಣ್ಣ ಅವರ ಮನವೊಲಿಸಿ ಇಂಧನ ಖಾತೆಯನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಒಪ್ಪಿದ್ದಾರೆ.

ಜೂನ್ 6ರಂದು ಸಂಪುಟ ವಿಸ್ತರಣೆ, ಖಾತೆ ಹಂಚಿಕೆ: ಪರಮೇಶ್ವರ್ ಜೂನ್ 6ರಂದು ಸಂಪುಟ ವಿಸ್ತರಣೆ, ಖಾತೆ ಹಂಚಿಕೆ: ಪರಮೇಶ್ವರ್

ನಿರ್ಮಲಾನಂದ ಸ್ವಾಮೀಜಿ ಅವರು ಒಕ್ಕಲಿಗ ಸಮುದಾಯದ ಪ್ರಭಾವಿ ಸ್ವಾಮೀಜಿ ಆಗಿದ್ದು, ಒಕ್ಕಲಿಗ ಸಮುದಾಯ ನಾಯಕ ಡಿಕೆಶಿಗೆ ಒಕ್ಕಲಿಗ ಸಮುದಾಯದ ನಾಯಕರಿಂದಲೇ ಅನ್ಯಾಯವಾಗಿದೆ ಎಂಬ ಸುದ್ದಿ ಹರಡಿ ಅದು ಸಮುದಾಯದ ಒಗ್ಗಟ್ಟಿಗೆ ತೊಡಕಾಗುತ್ತದೆ ಎಂಬ ಕಾರಣದಿಂದ ಅವರು ಜೆಡಿಎಸ್ ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ.

ಕಾಂಗ್ರೆಸ್‌ಗೆ ಇಂಧನ ಖಾತೆ ಬಿಟ್ಟು ಕೊಡುವ ನಿರ್ಣಯ ಮಾಡಿರುವ ಕಾರಣ, ಅದಕ್ಕೆ ಬದಲಾಗಿ ಬೆಂಗಳೂರು ಉಸ್ತುವಾರಿ ಅದರ ಜೊತೆಗೆ ಮತ್ತೊಂದು ಖಾತೆಗೆ ಜೆಡಿಎಸ್ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಇಂಧನ ಖಾತೆ ಕೈತಪ್ಪಿರುವ ಕಾರಣ ಈಗ ರೇವಣ್ಣ ಅವರು ಎರಡು ಖಾತೆ ಬೇಕೆಂದು ಪಟ್ಟು ಹಿಡಿದಿದ್ದಾರೆ.

English summary
Okkaliga community swamiji Nirmalananda Swamiji talked to CM Kumaraswamy about DK Shivakumar's favorite portfolio. After talking to Swamiji now Kumaraswamy and Deve Gowda approved give back Power ministry to congress for DK Shivakumar sake.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X