Get Updates
Get notified of breaking news, exclusive insights, and must-see stories!

ರಾಜ್ಯದ ಹೆದ್ದಾರಿಗಳಿಗೆ ಅನುದಾನ ಘೋಷಿಸಿದ ಗಡ್ಕರಿ: ಎಷ್ಟು ಕೋಟಿ, ಯಾವ ಮಾರ್ಗ, ಎಲ್ಲೆಲ್ಲಿ ಅಗಲೀಕರಣ? ತಿಳಿಯಿರಿ

ರಾಜ್ಯದ ವಿವಿಧ ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ನಿತಿನ್‌ ಗಡ್ಕರಿ ಅವರು ಅನುದಾನವನ್ನು ಘೋಷಿಸಿದ್ದಾರೆ. ಹಾಗೆಯೇ ಯಾವ ಮಾರ್ಗಕ್ಕೆ ಹೆಚ್ಚಾಗಿ ಅನುದಾನ ಘೋಷಿಸಿದ್ದಾರೆ ಅನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಬೆಂಗಳೂರು, ಫೆಬ್ರವರಿ, 08: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಅಭಿವೃದ್ಧಿ ಹೊಂದುತ್ತಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆಗಳು ಕೂಡ ಬರುತ್ತವೆ. ಹಾಗೆಯೇ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಹಲವು ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿಗಳಿಗೆ ಅನುಮೋದನೆ ನೀಡುತ್ತಾ ಬಂದಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯದ ಹಲವು ರಾಷ್ಟ್ರೀಯ ಹೆದ್ದಾರಿಗಳಿಗೆ ಅನುದಾನನ್ನು ಕೂಡ ಘೋಷಣೆ ಮಾಡಿದ್ದಾರೆ. ಯಾವ ಮಾರ್ಗಗಳ ಹೆದ್ದಾರಿಗೆ ಎಷ್ಟು ಅನುದಾನ ನೀಡಿದ್ದಾರೆ ಅನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಈಗಾಗಲೇ ಕರ್ನಾಟಕದಲ್ಲಿ ತುಂಬಾ ಹೆದ್ದಾರಿ ಯೋಜನೆಗಳಿಗೆ ಅನುದಾನ ಕೊಡಲಾಗಿದೆ. ಹಾಗೆಯೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧಾವಾರ (ಫೆಬ್ರವರಿ 08) ಕರ್ನಾಟಕದ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿಗಳಿಗೆ ಅನುದಾನವನ್ನು ಘೋಷಿಸಿದ್ದಾರೆ. ಈ ಪೈಕಿ ಬಿಜಾರಪುದ ಮಹಾರಾಷ್ಟ್ರ ಗಡಿಭಾಗದ ಕನಮಡಿ-ಬಿಜ್ಜರಗಿ-ತಿಕೋಟ ಸೆಕ್ಷನ್​ನಲ್ಲಿ ದ್ವಿಪಥ ರಸ್ತೆಯ ಅಗಲೀಕರಣಕ್ಕೆ 196 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ತಮ್ಮ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ ಹೇಳಿದ್ದೇನು?

ಹಾಗೆಯೇ ಇದಕ್ಕೆ ತಮ್ಮ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಶ್ವದರ್ಜೆಯ ಇನ್​ಫ್ರಾಸ್ಟ್ರಕ್ಚರ್ ಅನ್ನು ಒದಗಿಸಿರುವುದಕ್ಕೆ ಧನ್ಯವಾದ ಎಂದು ತಿಳಿಸಿದ್ದಾರೆ.

ಹೆದ್ದಾರಿ ಕಾಮಗಾರಿ; ಅನುದಾನದ ವಿವರ

ಕನಮಡಿ ಬಿಜ್ಜರಗಿ ಟಿಕೋಟಾ ಸೆಕ್ಷನ್​ನಲ್ಲಿ (ಬಿಜಾಪುರ) ದ್ವಿಪಥ ರಸ್ತೆಯ ಅಗಲೀಕರಣಕ್ಕೆ 196.05 ಕೋಟಿ ರೂಪಾಯಿ ಘೋಷಿಸಿದ್ದಾರೆ. ವಿಜಯಪುರ ಕಲಬುರ್ಗಿಯ ಮಹಾರಾಷ್ಟ್ರ ಗಡಿಭಾಗದ ರಾಹೆ-548ಬಿಗೆ ಸೇರುವ ಮುರುಂನಿಂದ ಐಬಿ ಸರ್ಕಲ್​ವರೆಗಿನ ದ್ವಿಪಥ ರಸ್ತೆಯ ಅಗಲೀಕರಣ ಯೋಜನೆಗೆ 957.09 ಕೋಟಿ ರೂಪಾಯಿ ಅನುಮೋದನೆ ನೀಡಿದ್ದಾರೆ.

 ಸುಸಜ್ಜಿತ ಹೆದ್ದಾರಿ ಅಗಲೀಕರಣಕ್ಕೆ ಪ್ಲಾನ್‌

ಸುಸಜ್ಜಿತ ಹೆದ್ದಾರಿ ಅಗಲೀಕರಣಕ್ಕೆ ಪ್ಲಾನ್‌

ಕೊಪ್ಪಳ ಮತ್ತು ಗದಗದಲ್ಲಿ ರಾಷ್ಟ್ರೀಯ ಹೆದ್ದಾರಿ-367ರ ಗಡ್ಡನಕೇರಿ ಸೆಕ್ಷನ್​ನಲ್ಲಿ ಕುಕುನೂರ, ಯಲಬುರ್ಗ, ಗಜೇಂದ್ರಗಡದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಯೋಜನೆಗೆ 333.96 ಕೋಟಿ ರೂಪಾಯಿ ಅನುಮೋದನೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಎನ್‌ಎಚ್-367ರ ಭಾನಾಪುರದಿಂದ ಗದ್ದನಕೇರಿ ವಿಭಾಗದ ಸರ್ಜಾಪುರದಿಂದ ಪಟ್ಟದಕಲವರೆಗೆ ಸುಸಜ್ಜಿತ ದ್ವಿಪಥ ಹೆದ್ದಾರಿ ಅಗಲೀಕರಣಕ್ಕಾಗಿ 445.62 ಕೋಟಿ ರೂಪಾಯಿ ಘೋಷಿಸಿದ್ದಾರೆ.

 909.86 ಕೋಟಿ ರೂಪಾಯಿ ಘೋಷಿಸಿದ ಗಡ್ಕರಿ

909.86 ಕೋಟಿ ರೂಪಾಯಿ ಘೋಷಿಸಿದ ಗಡ್ಕರಿ

ಮೈಸೂರು ಜಿಲ್ಲೆಯ ಕುಶಾಲನಗರ ಬೈಪಾಸ್‌ನ ಪ್ರಾರಂಭದಲ್ಲಿ ಗುಡ್ಡೆಹೊಸೂರು ಬಳಿಯ ರಾಷ್ಟ್ರೀಯ ಹೆದ್ದಾರಿ-275ರ ಕುಶಾಲನಗರ ಭಾಗದವರೆಗೆ, ಹಾಗೆಯೇ ಮೈಸೂರಿನಿಂದ ಸುಸಜ್ಜಿತ ಹೆದ್ದಾರಿ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಇಲ್ಲಿ ಪ್ರವೇಶ ನಿಯಂತ್ರಿತ ಚತುಷ್ಪಥ ಲೇನ್‌ಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದು, ಇದಕ್ಕಾಗಿ 909.86 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 4 ಲೇನ್‌ಗಳನ್ನ ನಿರ್ಮಿಸುವುದಾಗಿ ಘೋಷಣೆ

4 ಲೇನ್‌ಗಳನ್ನ ನಿರ್ಮಿಸುವುದಾಗಿ ಘೋಷಣೆ

ಹೆಚ್ಚುವರಿಯಾಗಿ 739.39 ಕೋಟಿ ರೂಪಾಯಿ ಬಜೆಟ್‌ನಲ್ಲಿ ಯಲವಾಲ-ಕೆಆರ್ ನಗರ ರಸ್ತೆ ಜಂಕ್ಷನ್ ಬಳಿಯ ಯಲಚೇನಹಳ್ಳಿ- ಶ್ರೀರಂಗ ಪಟ್ಟಣ ಬೈಪಾಸ್‌ನಿಂದ ಸುಸಜ್ಜಿತ ನಾಲ್ಕು ಲೇನ್‌ಗಳನ್ನು ನಿರ್ಮಿಸಲಾಗುವುದು. ಎನ್‌ಎಚ್-275ರ ಮೈಸೂರಿನಿಂದ ಕುಶಾಲನಗರದವರೆಗೆ ಸುಸಜ್ಜಿತ ಪ್ರವೇಶ ನಿಯಂತ್ರಿತ ನಾಲ್ಕು ಲೇನ್‌ಗಳನ್ನು ನಿರ್ಮಿಸುವುದಾಗಿ ಘೋಷಿಸಿದರು.

 ಮನವಿ ಮಾಡಿದ್ದ ಪ್ರತಾಪ್‌ ಸಿಂಹ

ಮನವಿ ಮಾಡಿದ್ದ ಪ್ರತಾಪ್‌ ಸಿಂಹ

ಈ ಹಿಂದೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮೈಸೂರು-ಕುಶಾಲನಗರ ಹೆದ್ದಾರಿಗೆ ₹4,000 ಕೋಟಿ ವೆಚ್ಚದ ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಹಲವು ಬಾರಿ ಮನವಿ ಮಾಡಿದ್ದರು. ಇದೀಗ ಕೇಂದ್ರ ಸಚಿವರು ಪ್ರತಾಪ್‌ ಸಿಂಹ ಅವರ ಮನವಿಗೆ ಸ್ಪಂದಿಸುವ ಮೂಲಕ ಹಲವು ಹೆದ್ದಾರಿಗಳಿಗೆ ಅನುದಾನವನ್ನು ಘೋಷಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+